AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಗ್ವಾಡಿಯಲ್ಲಿ ಕೆಎಸ್ಆರ್ಟಿಸಿಯ ಸ್ಕ್ರಾಪ್ ಬಸ್ ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆಗೊಂಡಿದೆ. ರಾಜ್ಯದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದ್ದು, ಈ ಸ್ಮಾರ್ಟ್ ಐಡಿಯಾದ ಹಿಂದೆ ಗ್ರಾಮೀಣ ಕಲಾವಿದ ಸಹೋದರರ ಸಾಹಸಗಾಥೆಯಿದೆ.

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ
ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್; ಬಸ್ನಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಉಡುಪಿಯಲ್ಲಿ ವಿನೂತನ ಪ್ರಯೋಗ
TV9 Web
| Edited By: |

Updated on: Mar 13, 2022 | 3:08 PM

Share

ಉಡುಪಿ: ಸಹೋದರರಿಬ್ಬರು ರಾಜ್ಯದಲ್ಲಿ ವಿನೂತನ ಪ್ರಯೋಗವೊಂದನ್ನು ಮಾಡಿದ್ದು ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಸ್ಕ್ರಾಪ್ ಬಸನ್ನು ಸ್ಮಾರ್ಟ್ ಕ್ಲಾಸನ್ನಾಗಿ ಪರಿವರ್ತನೆ ಮಾಡಿದ್ದಾರೆ. ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ವಿದ್ಯಾರ್ಥಿಗಳು KSRTCಬಸ್ ಅಲ್ಲೇ ಬಂದು ಪಾಠ ಕಲಿತಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಗ್ವಾಡಿಯಲ್ಲಿ ಕೆಎಸ್ಆರ್ಟಿಸಿಯ ಸ್ಕ್ರಾಪ್ ಬಸ್ ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತನೆಗೊಂಡಿದೆ. ರಾಜ್ಯದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದ್ದು, ಈ ಸ್ಮಾರ್ಟ್ ಐಡಿಯಾದ ಹಿಂದೆ ಗ್ರಾಮೀಣ ಕಲಾವಿದ ಸಹೋದರರ ಸಾಹಸಗಾಥೆಯಿದೆ. ಪ್ರಶಾಂತ್ ಆಚಾರ್ ಹಾಗೂ ಪ್ರಕಾಶ್ ಆಚಾರ್ ಸಹೋದರರು ಬಿಡುವಿನ ವೇಳೆಯಲ್ಲಿ ಬಸ್ಸನ್ನು ಸ್ಮಾರ್ಟ್ ಕ್ಲಾಸ್ ಆಗಿ ನವೀಕರಿಸಿದ್ದಾರೆ. ಶತಮಾನದ ಹೊಸ್ತಿಲಲ್ಲಿರುವ ಬಗ್ವಾಡಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಹೀಗಾಗಿ ಈ ಸಹೋದರರು ಶಾಲೆಯ ಉಳಿವಿಗಾಗಿ ನಾನಾ ಪ್ರಯೋಗಗಳನ್ನು ಮಾಡುತ್ತಲೇ ಬಂದಿದ್ದಾರೆ. ಇದೀಗ ಉಚಿತವಾಗಿ ಸಿಕ್ಕ ಸ್ಕ್ರಾಪ್ ಬಸ್‌ಗೆ ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಹೊಸ ರೂಪ ನೀಡಿದ್ದಾರೆ. ksrtc scrap bus in to the smart class 2

ಅಂದಹಾಗೆ ಈ ಬಸ್ ತರಗತಿಯಲ್ಲಿ 25 ವಿದ್ಯಾರ್ಥಿಗಳು ಕೂರಬಹುದಾಗಿದ್ದು, ಪ್ರೋಜೆಕ್ಟರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಬಸ್ ಒಳಗಿನ ಮೇಲ್ಭಾಗದ ಗಾಜಿಗೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು, ಸಾಹಿತಿಗಳ ಚಿತ್ರ ಅಂಟಿಸಲಾಗಿದೆ. ಕೇವಲ ನಲವತ್ತು ಮಕ್ಕಳಿದ್ದ ಸರ್ಕಾರಿ ಶಾಲೆಯಲ್ಲಿ ಪ್ರಸ್ತುತ 87 ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಜೊತೆಗೆ ಮಕ್ಕಳಿಗೂ ಬಸ್ ಒಳಗಿನ ಪಾಠ ಖುಷಿ ನೀಡಿದೆ. ಇನ್ನು ಸ್ಕ್ರಾಫ್ಟ್ ಬಸ್ ಈ ಶಾಲೆಗೆ ಬಂದು ಸೇರಿರುವುದರ ಹಿಂದೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇದೆಯಂತೆ.

ಒಟ್ಟಾರೆ ನಾನು ನನ್ನದು ಅನ್ನೋ ಸ್ವಾರ್ಥ ಪ್ರಪಂಚದಲ್ಲಿ ನಿಸ್ವಾರ್ಥ ಮನಸ್ಸಿನಿಂದ ಊರಿಗಾಗಿ, ತಾನು ಕಲಿತ ಶಾಲೆಯ ಅಭಿವೃದ್ಧಿಗಾಗಿ ನಿತ್ಯ ಕನಸು ಕಾಣುವ ಇಂತಹ ಕಲಾವಿದರಿಗೆ ನಿಜಕ್ಕೂ ಹ್ಯಾಟ್ಸಪ್.

ವರದಿ: ಹರೀಶ್, ಟಿವಿ9 ಉಡುಪಿ

ksrtc scrap bus in to the smart class 1

ಸ್ಕ್ರಾಪ್ KSRTC ಬಸ್ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್ ಮಾಡಿದ ಹಳೇ ವಿದ್ಯಾರ್ಥಿ

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ಸಿಕ್ಸ್​ಗೆ ಆಸ್ಪತ್ರೆ ಸೇರಿದ ಅಭಿಮಾನಿ

Beauty Tips: ಬೇಸಿಗೆಯಲ್ಲಿ ಕಾಡುವ ಒಣ ತ್ವಚೆಯ ರಕ್ಷಣೆಗೆ ಹೀಗೆ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ