AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಇಬ್ಬರು ಸಾವು, ದಾವಣಗೆರೆಯಲ್ಲಿ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢ

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಬ್ಲ್ಯಾಕ್​ ಫಂಗಸ್​ನಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8 ಜನರಿಗೆ ಬ್ಲ್ಯಾಕ್​ ಫಂಗಸ್​ ಸೋಂಕು ದೃಢಪಟ್ಟಿದೆ.

ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಇಬ್ಬರು ಸಾವು, ದಾವಣಗೆರೆಯಲ್ಲಿ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 23, 2021 | 11:14 PM

Share

ಉಡುಪಿ: ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್​ ಫಂಗಸ್ ಸೋಂಕಿನಿಂದ ಇಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರದುರ್ಗ, ಹಾವೇರಿ ಜಿಲ್ಲೆಯ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಬ್ಲ್ಯಾಕ್​ ಫಂಗಸ್​ನಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8 ಜನರಿಗೆ ಬ್ಲ್ಯಾಕ್​ ಫಂಗಸ್​ ಸೋಂಕು ದೃಢಪಟ್ಟಿದೆ.

ಮೃತರಲ್ಲಿ ಒಬ್ಬ ವ್ಯಕ್ತಿ 45 ವರ್ಷ ಪ್ರಾಯದ ಪುರುಷ ಮತ್ತೊಬ್ಬರು 43 ವರ್ಷ ಪ್ರಾಯದ ಮಹಿಳೆ. ಜಿಲ್ಲೆಯಲ್ಲಿ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿಗೆ ಕೆಎಂಸಿ ಮಣಿಪಾಲದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ 122ಕ್ಕೆ ಏರಿಕೆಯಾಗಿದೆ. 89 ಬ್ಲ್ಯಾಕ್​ ಫಂಗಸ್​ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಕರ್ನಾಟಕದಲ್ಲಿ ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢ; 30 ಮಂದಿ ಸಾವು ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 23) ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,91,699 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,31,226 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 30 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,323 ಜನ ಮೃತರಾಗಿದ್ದಾರೆ. ರಾಜ್ಯದಲ್ಲಿ 24,127 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,044ಕ್ಕೆ ಏರಿಕೆಯಾಗಿದೆ. 12,24,044 ಸೋಂಕಿತರ ಪೈಕಿ 11,99,859 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,820 ಜನ ಸಾವನ್ನಪ್ಪಿದಂತಾಗಿದೆ. ಬೆಂಗಳೂರಲ್ಲಿ 8364 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

(Two died due to black fungus in Manipal one infected in Davanagere)

ಇದನ್ನೂ ಓದಿ: Black Fungus: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಸಿಗುತಿಲ್ಲ ಔಷಧಿ, ಮಾತ್ರೆಗಳಿಗಾಗಿ ಜಿಲ್ಲಾಸ್ಪತ್ರೆಗೆ ಅಲೆದಾಟ

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗಡಿಪಡಿಸಿದ ಸರ್ಕಾರ; ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ
37 ಎಸೆತಗಳಲ್ಲಿ ಶತಕ: ಟಿಮ್ ಡೇವಿಡ್ ಆರ್ಭಟದ ವಿಡಿಯೋ ಇಲ್ಲಿದೆ