AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮಾವಾಸ್ಯೆಯ ದಿನವಾದ್ದರಿಂದ ಸಮುದ್ರಕ್ಕೆ ಸ್ನಾನಕ್ಕೆ ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇನ್ನೂ ನಾಲ್ಕು ಯುವಕರನ್ನು ನೀರಿನಿಂದ ರಕ್ಷಿಸಲಾಗಿದೆ. ಸಮುದ್ರದಲ್ಲಿ ಮುಳುಗಿದ ಇಬ್ಬರ ಜೀವ ಉಳಿಸಲು ಸ್ಥಳೀಯರಿಗೆ ಸಾಧ್ಯವಾಗಲಿಲ್ಲ.

ಉಡುಪಿಯ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು
Beach
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Dec 30, 2024 | 4:47 PM

Share

ಉಡುಪಿ: ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ನಡೆದಿದೆ. ಎಳ್ಳಮಾವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸಮುದ್ರಕ್ಕೆ ಈಜಲು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಾಪು ತಾಲೂಕಿನ ಹೆಜಮಾಡಿಯ ಅಕ್ಷಯ್ ಮತ್ತು ಚಿರಾಗ್ ಅಮೀನ್ ಎಂಬ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಸಮುದ್ರದಲ್ಲಿ ಮುಳುಗುತ್ತಿದ್ದ 6 ಜನರನ್ನು ರಕ್ಷಿಸಲು ಸ್ಥಳೀಯರು ಮುಂದಾಗಿದ್ದರು. ಈ ಪೈಕಿ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಆ ಪ್ರಯತ್ನ ಫಲಪ್ರದವಾಗಲಿಲ್ಲ. 6 ಯುವಕರಲ್ಲಿ ನಾಲ್ಕು ಜನರನ್ನು ಮಾತ್ರ ಕಾಪಾಡಲು ಸಾಧ್ಯವಾಯಿತು.

ಇದನ್ನೂ ಓದಿ: ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ; ವಿಡಿಯೋ ಇಲ್ಲಿದೆ

ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ಸ್ಥಳೀಯರು ಕಾಪಾಡಿದ ನಾಲ್ವರು ಯುವಕರು ನೀರು ಕುಡಿದು ಅಸ್ವಸ್ಥರಾಗಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Mon, 30 December 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು