AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಕೇಸ್: ಒಬ್ಬಳ ಮೇಲಿನ ದ್ವೇಷ ನಾಲ್ವರನ್ನ ಹತ್ಯೆಗೈದಿದ್ದ ಹಂತಕ ಮಾಜಿ ಪೊಲೀಸ್

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್​ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಕೇಸ್: ಒಬ್ಬಳ ಮೇಲಿನ ದ್ವೇಷ ನಾಲ್ವರನ್ನ ಹತ್ಯೆಗೈದಿದ್ದ ಹಂತಕ ಮಾಜಿ ಪೊಲೀಸ್
ಮೃತ ಅಯ್ನಾಜ್, ಆರೋಪಿ ಪ್ರವೀಣ್ ಚೌಗಲೆ
TV9 Web
| Edited By: |

Updated on:Nov 15, 2023 | 1:44 PM

Share

ಉಡುಪಿ, ನ.15: ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ (Udupi 4 Murder) ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆಯನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಉಡುಪಿಯಿಂದ ಪರಾರಿಯಾಗಿದ್ದ ಆರೋಪಿ ಬೆಳಗಾವಿಯ ಕುಡಚಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಉಡುಪಿ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಕಡಲ ಕಿನಾರೆಯಲ್ಲಿ ರಕ್ತದ ಕೊಡಿ ಹರಿಸಿದ ಹಂತಕನನ್ನ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸ್ತಿದ್ದಾರೆ. ಸದ್ಯ ಆರೋಪಿ ಈ ಹಿಂದೆ ಪೊಲೀಸ್ ಆಗಿ ಕೆಲಸ ಮಾಡಿದ್ದು ತಿಳಿದು ಬಂದಿದೆ. ಜೊತೆಗೆ ಕೊಲೆ ಹಿಂದಿನ ಅನೇಕ ಸಂಗತಿಗಳು ಬಯಲಾಗುತ್ತಿವೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಜ್ಞಾತ ಸ್ಥಳದಲ್ಲಿ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ

ಇನ್ನು, ನಿನ್ನೆಯೇ ಹಂತಕ ಪ್ರವೀಣ್ ಚೌಗಲೆಯನ್ನ ಬಂಧಿಸಿದ್ದ ಪೊಲೀಸರು, ಇವತ್ತು ಬೆಳಗ್ಗೆ 4 ಗಂಟೆಗೆ ಉಡುಪಿಗೆ ಕರೆತಂದಿದ್ದಾರೆ. ಅಜ್ಞಾತ ಸ್ಥಳದಲ್ಲಿ ಆರೋಪಿ ಪ್ರವೀಣ್​​ನನ್ನ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಹಂತಕನನ್ನ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಹಂತಕ ಮಾಜಿ ಪೊಲೀಸ್

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ​ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್​ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಕುಡಚಿಯಲ್ಲಿ ಆರೋಪಿ ಚೌಗಲೆ ಬಂಧನ

ಒಬ್ಬಳ ಮೇಲಿನ ದ್ವೇಷ-ನಾಲ್ವರ ಬಲಿ ಪಡೆದ ಹಂತಕ

ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ಸಿಬ್ಬಂದಿಯಾಗಿದ್ದ ಹಂತಕ ಪ್ರವೀಣ್ ಹತ್ಯೆಯಾದ ಅಯ್ನಾಜ್ ಸಹೋದ್ಯೋಗಿಯಾಗಿದ್ದ. ಅಯ್ನಾಜ್ ಮತ್ತು ಪ್ರವೀಣ್ ಗೆ ಹಲವು ವರ್ಷಗಳ ಪರಿಚಯವಿತ್ತು. ಭಾನುವಾರ ಮುಂಜಾನೆ ಮಂಗಳೂರಿನಿಂದ ಉಡುಪಿಗೆ ಬಂದು. ಅಯ್ನಾಜ್ ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾಗ ಮನೆಗೆ ನುಗ್ಗಿದ ಕೊಲೆ ಮಾಡಿದ್ದಾನೆ. ಅಯ್ನಾಜ್ ಮೃತ ಹಸೀನಾಳ ಎರಡನೇ ಮಗಳು. ಮೊದಲಿಗೆ ಹಂತಕ ಅಯ್ನಾಜ್ ಕೊಲೆ ಮಾಡಿ ಬಳಿಕ ಉಳಿದ ಮೂವರ ಹತ್ಯೆ ಮಾಡಿದ್ದಾನೆ. ಆ ಕ್ಷಣದಲ್ಲೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಇತ್ತ ತನಿಖೆ ಆರಂಭಿಸಿದ್ದ ಉಡುಪಿ ಪೊಲೀಸರು ಅಯ್ನಾಜ್ ಸಹೋದ್ಯೋಗಿಗಳ ಪೈಕಿ ಪ್ರವೀಣ್ ಮೊಬೈಲ್ ಮಾತ್ರ ಸ್ವಿಚ್ ಆಫ್ ಆಗಿದ್ದನ್ನು ಗಮನಿಸಿ ಪ್ರವೀಣ್ ಬಗ್ಗೆಯೇ ಜಾಸ್ತಿ ಗಮನ ಹರಿಸಿದ್ರು. ಮಂಗಳವಾರ ಮಧ್ಯಾಹ್ನ ಪ್ರವೀಣ್ ಮೊಬೈಲ್ ಆನ್ ಮಾಡುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆಗೆ ಸಹಾಯವಾಗಿದ್ದು ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ನರಹಂತಕ ಪ್ರವೀಣ್ ಲಾಕ್ ಆಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:30 pm, Wed, 15 November 23

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ