AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ 4 ಹತ್ಯೆ ಕೇಸ್​: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಪ್ರವೀಣ್ ಚೌಗುಲೆ

ಉಡುಪಿ ತಾಲೂಕಿನ ನೇಜಾರಿನ ತೃಪ್ತಿನಗರದ ಮನೆಯಲ್ಲಿ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರ ಕೆಎಸ್​ಎನ್ ರಾಜೇಶ್​ ಎಂಬುವವರಿಂದ ಅರ್ಜಿ ಸಲ್ಲಿಸಲಾಗಿದೆ.

ಒಂದೇ ಕುಟುಂಬದ 4 ಹತ್ಯೆ ಕೇಸ್​: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಪ್ರವೀಣ್ ಚೌಗುಲೆ
ಆರೋಪಿ ಪ್ರವೀಣ್ ಚೌಗುಲೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Dec 16, 2023 | 3:43 PM

Share

ಉಡುಪಿ, ಡಿಸೆಂಬರ್​​ 16: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ (Praveen Chowgule) ಯಿಂದ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಆರೋಪಿ ಪರ ವಕೀಲ ಕೆಎಸ್​ಎನ್ ರಾಜೇಶ್​ ಎಂಬುವವರಿಂದ ಅರ್ಜಿ ಸಲ್ಲಿಸಲಾಗಿದೆ. ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿರುವ ಕೋರ್ಟ್​, ಸದ್ಯ ಆರೋಪಿ ಪ್ರವೀಣ್ ಚೌಗುಲೆ ಪರಪ್ಪನ ಅಗ್ರಹಾರದಲ್ಲಿದ್ದಾರೆ.

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತಹ ದಾರುಣ ಘಟನೆ ನಡೆದಿತ್ತು. ಆರೋಪಿ ಪ್ರವೀಣ್ ಚೌಗುಲೆ ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಎಸ್.​ಪಿ ಬಿಚ್ಚಿಟ್ಟ ರೋಚಕ ಸಂಗತಿ?

ಆರೋಪಿ ಪ್ರವೀಣ್ ಅರುಣ್ ಚೌಗಲೆ ಮತ್ತು ಅಯ್ನಾಝ್ ಕಳೆದ 8 ತಿಂಗಳಿನಿಂದ ಪರಿಚಯಸ್ಥರಾಗಿದ್ದು, ಏರ್ ಇಂಡಿಯಾ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 8-10 ಬಾರಿ ವಿದೇಶಕ್ಕೆ ತೆರಳುವ ವಿಮಾನದಲ್ಲಿ ಒಟ್ಟಿಗೆ ಕರ್ತವ್ಯ ನಿರ್ವಹಿಸುವ ಅವಕಾಶವು ದೊರಕಿತ್ತು. ಹೀಗೆ ಅವರಿಬ್ಬರ ನಡುವೆ ಗೆಳೆತನವು ಬೆಳೆದಿತ್ತು.

ಇದನ್ನೂ ಓದಿ: ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಕೇಸ್: ಒಬ್ಬಳ ಮೇಲಿನ ದ್ವೇಷ ನಾಲ್ವರನ್ನ ಹತ್ಯೆಗೈದಿದ್ದ ಹಂತಕ ಮಾಜಿ ಪೊಲೀಸ್

ಆಕೆಗೆ ಓಡಾಟ ನಡೆಸಲು ಸಹಾಯವಾಗಲೆಂದು ಆರೋಪಿ ತನ್ನ ದ್ವಿಚಕ್ರ ವಾಹನವನ್ನು ಆಕೆಯ ಬಳಕೆಗೆ ನೀಡಿದ್ದನು‌. ಇತ್ತೀಚೆಗೆ ತಿಂಗಳ ಹಿಂದೆ, ಅಯ್ನಝ್ ಆರೋಪಿಯ ಜೊತೆಗಿನ ಒಡನಾಟದಿಂದ ದೂರ ಸರಿದು, ಮಾತನಾಡುತ್ತಿರಲಿಲ್ಲ. ಇದರಿಂದ ಪ್ರವೀಣ್ ತೀವ್ರ ವಿಚಲಿತನಾಗಿ ಸಿಟ್ಟಿಗೆದ್ದಿದ್ದನು.

ತನ್ನ ಜೊತೆಗಿನ ಒಡನಾಟದಿಂದ ದೂರ ಸರಿದ ಅಯ್ನಾಝ್​ಳನ್ನು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಮನೆಗೆ ಆ್ಯಪ್​ನ ಸಹಾಯದಿಂದ ಆಗಮಿಸಿದ ಆರೋಪಿ, ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಅದೇ ವೇಳೆ ತಡೆಯಲು ಬಂದ ಆಕೆಯ ತಾಯಿ ಹಸೀನಾ, ಸಹೋದರಿ ಅಫ್ನಾನ್, ಮನೆಯ ಹೊರಗೆ ಆಟವಾಡುತ್ತಿದ್ದ ಅಸೀಮ್ ಮನೆಯ ಒಳಗೆ ಬರುತ್ತಿದ್ದ ವೇಳೆ ಆತನಿಗೂ ಚೂರಿ ಇರಿದಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​