ಉಡುಪಿ: ಕುಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯ ಗರಿ

| Updated By: shruti hegde

Updated on: Sep 29, 2021 | 9:40 AM

Udupi News: ಸ್ಪರ್ಧೆಯ ಕೊನೆಯ ಹಂತಕ್ಕೆ ಆಯ್ಕೆಯಾದ ದೇಶದ 14 ಶಾಲೆಗಳಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ದೇಶದಲ್ಲೇ ಆಯ್ಕೆಯಾದ ಏಕೈಕ ಸರಕಾರಿ ಶಾಲೆಯಾಗಿದೆ.

ಉಡುಪಿ: ಕುಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯ ಗರಿ
ಅನುಷಾ ಹಾಗೂ ರಕ್ಷಿತಾ ನಾಯ್ಕ
Follow us on

ಉಡುಪಿ: ಕುಗ್ರಾಮದ ಶಾಲಾ ವಿದ್ಯಾರ್ಥಿಗಳಿಗೆ ರಾಷ್ಡ್ರಮಟ್ಟದ ಪ್ರಶಸ್ತಿಯ ಗರಿ ಲಭಿಸಿದೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸುವ ಸಿಎಸ್​ಐಆರ್ (CSIR INNOVATIVE AWARD FOR SCHOOL CHILDREN 2021) ಎಂಬ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ‌ ಉಡುಪಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಾಲೆಯ ಅನುಷಾ ಹಾಗೂ ರಕ್ಷಿತಾ ನಾಯ್ಕ ಇವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇವರಿಂದ ಆನ್ಲೈನ್ ಮೂಲಕ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸ್ಪರ್ಧೆಯ ಕೊನೆಯ ಹಂತಕ್ಕೆ ಆಯ್ಕೆಯಾದ ದೇಶದ 14 ಶಾಲೆಗಳಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ದೇಶದಲ್ಲೇ ಆಯ್ಕೆಯಾದ ಏಕೈಕ ಸರಕಾರಿ ಶಾಲೆಯಾಗಿದೆ. ಸಮಾಜ ವಿಜ್ಞಾನ ಶಿಕ್ಷಕರಾದ ಸುರೇಶ ಮರಕಾಲ ಹಾಗೂ ವಿಜ್ಞಾನ ಶಿಕ್ಷಕಿ ಶ್ರೀಮತಿ ವೈಶಾಲಿ ರಾವ್ ಮಾರ್ಗದರ್ಶನದಲ್ಲಿ ಅನುಷಾ ಹಾಗೂ ರಕ್ಷಿತಾ ನಾಯ್ಕ ಇವರು ರಚಿಸಿದ ಗ್ಯಾಸ್ ಸೇವಿಂಗ್ ಕಿಟ್- ‘GSK’ (GAS SAVING KIT) ಎಂಬ ಅತ್ಯಂತ ಸರಳ ಉಪಕರಣವು ರಾಷ್ಟ್ರಮಟ್ಟದ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದೆ.

ಅನುಷಾ, ರಕ್ಷಿತಾ ನಾಯ್ಕ ಹಾಗೂ ಸುರೇಶ ಮರಕಾಲ

ಇದನ್ನೂ ಓದಿ: ಉಡುಪಿ: ಆದರ್ಶ ಗ್ರಾಮ ಎಂದು ಕರೆಸಿಕೊಂಡ ಕೆರಾಡಿಯಲ್ಲಿ ಕಾಡುತ್ತಿದೆ ಮೂಲಭೂತ ಸೌಕರ್ಯದ ಕೊರತೆ

ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆ, ಅಂಗನವಾಡಿ, ಕಾಲೇಜುಗಳಿಗೆ ಶೌಚಾಲಯ ನಿರ್ಮಾಣ ಗಡುವು!