AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲಿ ವಿಡಿಯೋ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಂದೆ ಪಿಎಫ್​ಐ ಕಾರ್ಯಕರ್ತ: ಸುನಿಲ್ ಕೆಆರ್

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣದ ಮೂವರು ಆರೋಪಿಗಳ ಪೈಕಿ ಒಬ್ಬಳ ತಂದೆ ನಿಷೇಧಿತ ಪಿಎಫ್​ಐ ಕಾರ್ಯಕರ್ತ ಎಂಬ ಆರೋಪ ಕೇಳಿಬಂದಿದೆ.

ಶೌಚಾಲಯದಲ್ಲಿ ವಿಡಿಯೋ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಂದೆ ಪಿಎಫ್​ಐ ಕಾರ್ಯಕರ್ತ: ಸುನಿಲ್ ಕೆಆರ್
ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್.
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on: Aug 04, 2023 | 4:58 PM

ಉಡುಪಿ, ಆಗಸ್ಟ್ 4: ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಮೂವರು ಆರೋಪಿಗಳಲ್ಲಿ ಶಫಾಳ ತಂದೆ ನಿಷೇಧಿತ ಪಿಎಫ್​ಐ (PFI) ಕಾರ್ಯಕರ್ತರ ಎಂದು ಬಜರಂಗದಳ(Bajrang Dal) ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಕಾಣಿಸುತ್ತಿದೆ ಎಂದರು.

ವೀಡಿಯೋ ಮಾಡಿ ಮುಸಲ್ಮಾನರಿಗೆ ಕಳುಹಿಸಿ ಹೆದರಿಸಲಾಗುತ್ತಿದೆ. ಬ್ಲ್ಯಾಕ್ ಮೇಲ್ ಜಿಹಾದ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಪಿಎಫ್​ಐ ಪ್ರಾಯೋಜಿತ ಷಡ್ಯಂತ್ರ ಇದರ ಹಿಂದೆ ಇದೆ ಎಂದು ಆರೋಪಿಸಿದ ಸುನಿಲ್ ಅವರು, ಪ್ರಕರಣದ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದರು.

ಇದನ್ನೂ ಓದಿ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

“ಪ್ರಕರಣದಲ್ಲಿ ದೊಡ್ಡ ಪಿತೂರಿ ಇದೆ. ಭಾಗಿಯಾಗಿರುವ ಮೂವರು ಬಾಲಕಿಯರಲ್ಲಿ ಒಬ್ಬಳ ತಂದೆ ನಿಷೇಧಿತ ಸಂಘಟನೆಯಾದ ಪಿಎಫ್‌ಐನ ಕಾರ್ಯಕರ್ತ. ಮತ್ತೊಬ್ಬ ವಿದ್ಯಾರ್ಥಿನಿ ಹಸುವಿನ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕನ ಮಗಳು. ಈ ಮೂವರು ವಿದ್ಯಾರ್ಥಿಗಳು ಜಿಹಾದ್ ಮಾಡುತ್ತಿದ್ದ ಕುಟುಂಬದಿಂದ ಬಂದವರು. ಆರು ತಿಂಗಳಿಂದ ಇಂತಹ ವಿಡಿಯೋ ರೆಕಾರ್ಡಿಂಗ್ ನಡೆಯುತ್ತಿತ್ತು ಎಂದು ಕಾಲೇಜಿನ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ” ಎಂದು ಸುನಿಲ್ ಹೇಳಿದರು.

ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್‌ವೆಲ್ ಮತ್ತು ದಿನೇಶ್ ಮೆಂಡನ್ ಅವರ ದ್ವೇಷದ ಭಾಷಣದ ಆರೋಪದ ಮೇಲೆ ಉಡುಪಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ಭಜರಂಗದಳದ ಮುಖಂಡರು ಖಂಡಿಸಿದ್ದಾರೆ.

ಜುಲೈ 28 ರಂದು ನಡೆದ ರ್ಯಾಲಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ವೀಣಾ ಶೆಟ್ಟಿ ವಿರುದ್ಧ ಉಡುಪಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಕಾಲೇಜು ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೂವರು ವಿದ್ಯಾರ್ಥಿಗಳು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ