AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ ಶಾಸಕರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ
ಖಾಸಗಿ ಕಾಲೇಜು (ಎಡಚಿತ್ರ) ರಾಜ್ಯಪಾಲರಿಗೆ ದೂರು (ಬಲಚಿತ್ರ)
Sunil MH
| Edited By: |

Updated on: Aug 04, 2023 | 2:02 PM

Share

ಬೆಂಗಳೂರು: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ (BJP) ಶಾಸಕರ ನಿಯೋಗ ಇಂದು (ಆ.04) ರಾಜ್ಯಪಾಲರಿಗೆ ದೂರು ನೀಡಿದೆ. ಪ್ರಕರಣದ ತನಿಖೆಯನ್ನು ಎಸ್​​ಐಟಿಗೆ ನೀಡುವಂತೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಎಸ್​ಐಟಿ ತನಿಖೆಗೆ ನೀಡುವಂತೆ ಹಿಂದೂ ಸಂಘಟನೆಗಳ ಒತ್ತಾಯ

ಇನ್ನು ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್​​​ವೆಲ್ ಕರೆ

ತನಿಖಾಧಿಕಾರಿ ಬದಲಾವಣೆ

ಪ್ರಕರಣವನ್ನು ಮುಂದಿಟ್ಟುಗೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಸಂಬಂಧ ಉಡುಪಿಯಲ್ಲಿ ಬೃಹತ್​ ಪ್ರತಿಭಟನೆ ಮಾಡಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿತ್ತು. ಅಲ್ಲದೇ ಆರಂಭದಿಂದ ಪ್ರಕರಣದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್