ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

| Updated By: ವಿವೇಕ ಬಿರಾದಾರ

Updated on: Aug 04, 2023 | 2:02 PM

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ ಶಾಸಕರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ
ಖಾಸಗಿ ಕಾಲೇಜು (ಎಡಚಿತ್ರ) ರಾಜ್ಯಪಾಲರಿಗೆ ದೂರು (ಬಲಚಿತ್ರ)
Follow us on

ಬೆಂಗಳೂರು: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ (BJP) ಶಾಸಕರ ನಿಯೋಗ ಇಂದು (ಆ.04) ರಾಜ್ಯಪಾಲರಿಗೆ ದೂರು ನೀಡಿದೆ. ಪ್ರಕರಣದ ತನಿಖೆಯನ್ನು ಎಸ್​​ಐಟಿಗೆ ನೀಡುವಂತೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಎಸ್​ಐಟಿ ತನಿಖೆಗೆ ನೀಡುವಂತೆ ಹಿಂದೂ ಸಂಘಟನೆಗಳ ಒತ್ತಾಯ

ಇನ್ನು ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್​​​ವೆಲ್ ಕರೆ

ತನಿಖಾಧಿಕಾರಿ ಬದಲಾವಣೆ

ಪ್ರಕರಣವನ್ನು ಮುಂದಿಟ್ಟುಗೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಸಂಬಂಧ ಉಡುಪಿಯಲ್ಲಿ ಬೃಹತ್​ ಪ್ರತಿಭಟನೆ ಮಾಡಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿತ್ತು. ಅಲ್ಲದೇ ಆರಂಭದಿಂದ ಪ್ರಕರಣದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.