AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ - ಯಶ್‌ಪಾಲ್ ಸುವರ್ಣ
ಶಾಸಕ ಯಶ್​ಪಾಲ್​ ಸುವರ್ಣ
H P
| Edited By: |

Updated on:Jul 28, 2023 | 2:02 PM

Share

ಉಡುಪಿ: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಘಟಕ ಇಂದು (ಜು.28) ಕಡಿಯಾಳಿ ಬಿಜೆಪಿ ಕಛೇರಿಯಿಂದ ಎಸ್ಪಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಿಸ್ಟೇಕ್ ಆಗಿ ಕ್ಯಾಮೆರಾ ಬಂತು ಅಂತಾ ಹೇಳಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ. ನಿನ್ನೆ ಖುಷ್ಬೂ ಅಕ್ಕನಿಗೆ ಸ್ವಲ್ಪ ಗಡಿಬಿಡಿಯಾಗಿದೆ. ಅವರು ಹಿಡನ್ ಕ್ಯಾಮೆರಾ ಇರಲಿಲ್ಲ ಅಂತ ಹೇಳಿದರು. ನಾವು ಹಿಡನ್ ಕ್ಯಾಮೆರಾ ಇತ್ತು ಅಂತಾ ಹೇಳಿಲ್ಲ. ಅವರಿಗೆ ಮಾಹಿತಿ ನೀಡಿದವರು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳು 25 ವರ್ಷಗಳಿಂದ ಜಿಹಾದಿ ನೆಟ್​ವರ್ಕ್ ಬಗ್ಗೆ ಹೇಳುತ್ತಿದೆ. ಈಗ ನಾವು ಹೇಳಿದ ಮಾತುಗಳೆಲ್ಲ ನಿಜವಾಗಿದೆ. ಉಡುಪಿ ಮೊಬೈಲ್ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಬೇಕು. ಎನ್​ಐಎ ಈ ಪ್ರಕರಣವನ್ನು ಬಯಲಿಗೆಳೆಯಲಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ; ಖುಷ್ಬೂ ಸುಂದರ್

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ.  ಪೊಲೀಸ್ ವರಿಷ್ಠರ ಕೈ ಕಟ್ಟಿ ಹಾಕಿರೋದು ದೃಢ ಆಗಿದೆ. ಹೆಣ್ಣುಮಕ್ಕಳು ತಲೆ ತಗ್ಗಿಸುವ ಪ್ರಕರಣ ನಡೆದಿದೆ ಅಂದರೇ ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ತನಿಖೆ ನಡೆಸಬೇಕಿತ್ತು. ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಬಹಳ ದಿನ ಈ ಘಟನೆ ಮುಚ್ಚಿಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳನ್ನು ಯಾರಾದರೂ ಬಳಸಿಕೊಂಡಿರಬಹುದು. ಲವ್ ಜಿಹಾದ್ ಅಥವಾ ಬೇರೆ ಜಿಹಾದ್‌ಗೆ ಬಳಕೆ ಮಾಡಿಕೊಂಡಿರಬಹುದು. ಇದರ ಕೂಲಂಕುಷ ತನಿಖೆ ಆಗಬೇಕು. ಎನ್​ಐಎ ತನಿಖೆ ಕೂಡ ನಡೆಯೋದು ಉತ್ತಮ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇನ್ನು ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ,ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಭಾಗಿಯಾಗಿದ್ದರು. ಹಾಗೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Fri, 28 July 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ