AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ - ಯಶ್‌ಪಾಲ್ ಸುವರ್ಣ
ಶಾಸಕ ಯಶ್​ಪಾಲ್​ ಸುವರ್ಣ
H P
| Updated By: ವಿವೇಕ ಬಿರಾದಾರ

Updated on:Jul 28, 2023 | 2:02 PM

Share

ಉಡುಪಿ: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಘಟಕ ಇಂದು (ಜು.28) ಕಡಿಯಾಳಿ ಬಿಜೆಪಿ ಕಛೇರಿಯಿಂದ ಎಸ್ಪಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಿಸ್ಟೇಕ್ ಆಗಿ ಕ್ಯಾಮೆರಾ ಬಂತು ಅಂತಾ ಹೇಳಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ. ನಿನ್ನೆ ಖುಷ್ಬೂ ಅಕ್ಕನಿಗೆ ಸ್ವಲ್ಪ ಗಡಿಬಿಡಿಯಾಗಿದೆ. ಅವರು ಹಿಡನ್ ಕ್ಯಾಮೆರಾ ಇರಲಿಲ್ಲ ಅಂತ ಹೇಳಿದರು. ನಾವು ಹಿಡನ್ ಕ್ಯಾಮೆರಾ ಇತ್ತು ಅಂತಾ ಹೇಳಿಲ್ಲ. ಅವರಿಗೆ ಮಾಹಿತಿ ನೀಡಿದವರು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳು 25 ವರ್ಷಗಳಿಂದ ಜಿಹಾದಿ ನೆಟ್​ವರ್ಕ್ ಬಗ್ಗೆ ಹೇಳುತ್ತಿದೆ. ಈಗ ನಾವು ಹೇಳಿದ ಮಾತುಗಳೆಲ್ಲ ನಿಜವಾಗಿದೆ. ಉಡುಪಿ ಮೊಬೈಲ್ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಬೇಕು. ಎನ್​ಐಎ ಈ ಪ್ರಕರಣವನ್ನು ಬಯಲಿಗೆಳೆಯಲಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ; ಖುಷ್ಬೂ ಸುಂದರ್

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ.  ಪೊಲೀಸ್ ವರಿಷ್ಠರ ಕೈ ಕಟ್ಟಿ ಹಾಕಿರೋದು ದೃಢ ಆಗಿದೆ. ಹೆಣ್ಣುಮಕ್ಕಳು ತಲೆ ತಗ್ಗಿಸುವ ಪ್ರಕರಣ ನಡೆದಿದೆ ಅಂದರೇ ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ತನಿಖೆ ನಡೆಸಬೇಕಿತ್ತು. ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಬಹಳ ದಿನ ಈ ಘಟನೆ ಮುಚ್ಚಿಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳನ್ನು ಯಾರಾದರೂ ಬಳಸಿಕೊಂಡಿರಬಹುದು. ಲವ್ ಜಿಹಾದ್ ಅಥವಾ ಬೇರೆ ಜಿಹಾದ್‌ಗೆ ಬಳಕೆ ಮಾಡಿಕೊಂಡಿರಬಹುದು. ಇದರ ಕೂಲಂಕುಷ ತನಿಖೆ ಆಗಬೇಕು. ಎನ್​ಐಎ ತನಿಖೆ ಕೂಡ ನಡೆಯೋದು ಉತ್ತಮ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇನ್ನು ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ,ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಭಾಗಿಯಾಗಿದ್ದರು. ಹಾಗೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Fri, 28 July 23

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?