AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ವಿದ್ಯಾರ್ಥಿನಿಯರ ಫೋನ್ ಗುಜರಾತ್​ಗೆ ರವಾನಿಸುವ ಸಾಧ್ಯತೆ

ಉಡುಪಿಯಲ್ಲಿ ಪ್ರಕರಣದ ತನಿಖೆ ನಡೆಸಿ, ಹೇಳಿಕೆ ದಾಖಲಿಸಿರುವ ಪೊಲೀಸರು ಮೂರು ವಾರಗಳ ಹಿಂದೆ ಎಫ್​ಎಸ್​ಎಲ್​ಗೆ ಮೊಬೈಲ್ ಕಳುಹಿಸಿದ್ದರು. ಸದ್ಯ ವರದಿಗಾಗಿ ಕಾಯುತ್ತಿದ್ದಾರೆ. ಎಫ್​ಎಸ್ಎಲ್ ಅಧಿಕಾರಿಗಳು ವಿಡಿಯೋ ಫೋಟೋ ರಿಟ್ರೈವ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಿಡಿಯೋ ಫೋಟೋ ಹಿಂಪಡೆಯಲಾಗದಿದ್ದರೆ ಗುಜರಾತ್​ಗೆ ಫೋನ್​ಗಳನ್ನು ರವಾನಿಸಲು ಚಿಂತನೆ ನಡೆದಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ವಿದ್ಯಾರ್ಥಿನಿಯರ ಫೋನ್ ಗುಜರಾತ್​ಗೆ ರವಾನಿಸುವ ಸಾಧ್ಯತೆ
ಶೌಚಗೃಹದಲ್ಲಿ ಅಧಿಕಾರಿಗಳ ಪರಿಶೀಲನೆ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು|

Updated on: Aug 17, 2023 | 12:18 PM

Share

ಉಡುಪಿ, ಆ.17: ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು(Udupi Washroom Video Case) ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ(CID) ಅಧಿಕಾರಿಗಳ ತಂಡ ಮೊದಲನೇ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿದೆ. ಸದ್ಯ ಸಿಐಡಿ ಪೊಲೀಸರು ಎಫ್​ಎಸ್​ಎಲ್ ವರದಿಗಾಗಿ(FSL Report) ಕಾಯುತ್ತಿದ್ದಾರೆ. ಉಡುಪಿಯಲ್ಲಿ ಪ್ರಕರಣದ ತನಿಖೆ ನಡೆಸಿ, ಹೇಳಿಕೆ ದಾಖಲಿಸಿರುವ ಪೊಲೀಸರು ಮೂರು ವಾರಗಳ ಹಿಂದೆ ಎಫ್​ಎಸ್​ಎಲ್​ಗೆ ಮೊಬೈಲ್ ಕಳುಹಿಸಿದ್ದರು. ಸದ್ಯ ವರದಿಗಾಗಿ ಕಾಯುತ್ತಿದ್ದಾರೆ.

ಎಫ್​ಎಸ್ಎಲ್ ಅಧಿಕಾರಿಗಳು ವಿಡಿಯೋ ಫೋಟೋ ರಿಟ್ರೈವ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಿಡಿಯೋ ಫೋಟೋ ಹಿಂಪಡೆಯಲಾಗದಿದ್ದರೆ ಗುಜರಾತ್​ಗೆ ಫೋನ್​ಗಳನ್ನು ರವಾನಿಸಲು ಚಿಂತನೆ ನಡೆದಿದೆ. ಗುಜರಾತ್​ನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವಿಡಿಯೋ ರಿಟ್ರೈವ್ ಮಾಡಿಸಲಾಗುತ್ತೆ. ಒಂದೆರಡು ದಿನದಲ್ಲಿ ಗುಜರಾತ್​ಗೆ ಫೋನ್​ಗಳನ್ನು ರವಾನಿಸುವ ಸಾಧ್ಯತೆ ಇದೆ. ಗುಜರಾತ್​ನ ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಮೂಲಕ ಫೋನ್ ರಿಟ್ರೈವ್ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ಮೊದಲ ಹಂತದ ತನಿಖೆ ಅಂತ್ಯ, ಆ ಒಂದು ವರದಿಗೆ ಕಾಯುತ್ತಿರುವ ಸಿಐಡಿ

ಜುಲೈ 18ರಂದು ಉಡುಪಿಯ ಕಾಲೇಜೊಂದರಲ್ಲಿ ನಡೆದ ಶೌಚಗೃಹದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಮತ್ತು ಎಸ್ ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ತನಿಖಾಧಿಕಾರಿ ಡಿವೈಎಸ್ಪಿ ಅಂಜುಮಾಲ ಅವರು ಒಂದು ವಾರದಿಂದ ಉಡುಪಿಯಲ್ಲಿ ಇದ್ದುಕೊಂಡು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಬೆಂಗಳೂರಿಗೆ ತೆರಳಿದ್ದಾರೆ. ಸದ್ಯ ಸಿಐಡಿ ಪೊಲೀಸರು ಎಫ್​ಎಸ್​ಎಲ್ ವರದಿಗಾಗಿ ಕಾಯುತ್ತಿದ್ದಾರೆ.

ಇನ್ನು ಸಿಐಡಿ ತಂಡ ಒಂದು ಹಂತದ ತನಿಖೆ ಮುಗಿಸಿದ್ದು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದ ಮೊಬೈಲ್ ನ ಎಫ್​ಎಸ್​ಎಲ್ ವರದಿಗಾಗಿ ಸಿಐಡಿ ತನಿಖಾ ತಂಡ ಕಾಯುತ್ತಿದೆ. ವಿದ್ಯಾರ್ಥಿನಿಯರಿಂದ ಪಡೆಯಲಾಗಿದ್ದ ಮೂರು ಮೊಬೈಲ್​ಗಳ ಎಫ್​ಎಸ್​ಎಲ್ ವರದಿ ಬಂದ ತಕ್ಷಣ ಪ್ರಕರಣದ ಸತ್ಯತೆ ಹೊರಗೆ ಬೀಳುವ ಸಾಧ್ಯತೆ ದಟ್ಟವಾಗಿದೆ.

ಉಡುಪಿಗೆ ಸಂಬಂಧಪಟ್ಟ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?