AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವಾ ನ್ಯೂನತೆ ಎಸಗಿದ ವಿಮಾ ಕಂಪನಿಗೆ ಬಡ್ಡಿ ಸಹಿತ 10 ಲಕ್ಷ ರೂ. ಪಾವತಿಸಲು ಉಡುಪಿ ಜಿಲ್ಲಾ ಗ್ರಾಹಕರ ನ್ಯಾಯಾಲಯ ಆದೇಶ

Udupi Consumer Court Order; ಸಂತ್ರಸ್ತರ ವಾದಗಳನ್ನು ಆಲಿಸಿದ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯವು, ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರದ ಸುತ್ತೋಲೆ ಮತ್ತು ಈ ವಿಷಯದ ಕುರಿತು ರಾಷ್ಟ್ರೀಯ ಪ್ರಾಧಿಕಾರದ ಹಿಂದಿನ ತೀರ್ಪಿನ ಆಧಾರದ ಮೇಲೆ ಅಪಘಾತ ವಿಮೆ ಕ್ಲೈಮ್‌ಗೆ 10 ಲಕ್ಷ ರೂಪಾಯಿಯನ್ನು ಪಾವತಿಸಲು ವಿಮಾ ಕಂಪನಿಗೆ ಆದೇಶಿಸಿತು.

ಸೇವಾ ನ್ಯೂನತೆ ಎಸಗಿದ ವಿಮಾ ಕಂಪನಿಗೆ ಬಡ್ಡಿ ಸಹಿತ 10 ಲಕ್ಷ ರೂ. ಪಾವತಿಸಲು ಉಡುಪಿ ಜಿಲ್ಲಾ ಗ್ರಾಹಕರ ನ್ಯಾಯಾಲಯ ಆದೇಶ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 09, 2023 | 3:02 PM

ಉಡುಪಿ, ಆಗಸ್ಟ್ 9: ಸೇವಾ ನ್ಯೂನತೆ ಹಾಗೂ ವಿಳಂಬ ಧೋರಣೆ ಅನುಸರಿಸಿದ ವಿಮಾ ಕಂಪನಿಗೆ ಬಡ್ಡಿ ಸಮೇತ 10 ಲಕ್ಷ ರೂಪಾಯಿ ಪಾವತಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ (Udupi Consumer Court) ಆದೇಶಿಸಿದೆ. 2018 ರ ಡಿಸೆಂಬರ್ 24 ರಂದು ಹೆಬ್ರಿ ನಿವಾಸಿ ದಿವಂಗತ ಸಂತೋಷ್ ಶೆಟ್ಟಿ ಅವರು ಯೂನಿವರ್ಸಲ್ ಸೊಂಪೊ ಜನರಲ್ ಇನ್ಶೂರೆನ್ಸ್ ಕಂಪನಿಯಿಂದ (Insurance Company) ವೈಯಕ್ತಿಕ ಅಪಘಾತ ವಿಮಾ ಪಾಲಿಸಿ ಮಾಡಿಸಿಕೊಂಡಿದ್ದರು. ಸಂತೋಷ್ ಅವರು 2019 ರ ನವೆಂಬರ್ 1 ರಂದು ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದರು. ಅವರ ವಾರಸುದಾರರಾದ ಪುಷ್ಪಾ ಶೆಟ್ಟಿ ಮತ್ತು ದಿವ್ಯಾ ಶೆಟ್ಟಿ ಅವರು ವಿಮಾ ಕಂಪನಿಯನ್ನು ಸಂಪರ್ಕಿಸಿ ಸಂತೋಷ್ ಶೆಟ್ಟಿ ಅವರ ಸಾವಿನ ಬಗ್ಗೆ ವಿಮಾ ಕ್ಲೇಮ್ ಸಲ್ಲಿಸಿದ್ದರು. ಅರ್ಜಿದಾರರು ತಡವಾಗಿ ಸಲ್ಲಿಸಿದ್ದಾರೆ ಎಂಬ ಕಾರಣಕ್ಕಾಗಿ ಕಂಪನಿಯು ಕ್ಲೈಮ್ ಅನ್ನು ತಿರಸ್ಕರಿಸಿತ್ತು.

ಬಳಿಕ ಸಂತೋಷ್ ಶೆಟ್ಟಿ ಅವರ ವಾರಸುದಾರರು ವಕೀಲರ ಮೂಲಕ ಜಿಲ್ಲಾ ಗ್ರಾಹಕರ ವಿವಾದ ಇತ್ಯರ್ಥ ಪ್ರಾಧಿಕಾರದ ನ್ಯಾಯಾಲಯಕ್ಕೆ ದೂರು ಸಲ್ಲಿಸಿದರು.

ವಾದಗಳನ್ನು ಆಲಿಸಿದ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯವು, ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರದ ಸುತ್ತೋಲೆ ಮತ್ತು ಈ ವಿಷಯದ ಕುರಿತು ರಾಷ್ಟ್ರೀಯ ಪ್ರಾಧಿಕಾರದ ಹಿಂದಿನ ತೀರ್ಪಿನ ಆಧಾರದ ಮೇಲೆ ಅಪಘಾತ ವಿಮೆ ಕ್ಲೈಮ್‌ಗೆ 10 ಲಕ್ಷ ರೂಪಾಯಿಯನ್ನು ಪಾವತಿಸಲು ವಿಮಾ ಕಂಪನಿಗೆ ಆದೇಶಿಸಿತು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಕ್ಲೈಮ್ ನಿರಾಕರಣೆ ದಿನಾಂಕದ ನಂತರದಿಂದ ತೀರ್ಪಿನ ದಿನಾಂಕದವರೆಗೆ ಎಷ್ಟು ದಿನಗಳ ಅವಧಿಯಿತ್ತೋ ಅಷ್ಟಕ್ಕೆ ಬಡ್ಡಿಯಾಗಿ 25,000 ರೂಪಾಯಿಗಳನ್ನು ಅರ್ಜಿದಾರರಿಗೆ ಪಾವತಿಸಲು ಮತ್ತು 30 ದಿನಗಳಲ್ಲಿ ನ್ಯಾಯಾಲಯದ ವೆಚ್ಚವಾಗಿ 10,000 ರೂಪಾಯಿಗಳನ್ನು ಪಾವತಿಸಲು ನ್ಯಾಯಾಲಯವು ಕಂಪನಿಗೆ ಸೂಚಿಸಿದೆ.

ಜಿಲ್ಲಾ ಗ್ರಾಹಕರ ನ್ಯಾಯಾಲಯದ ಅಧ್ಯಕ್ಷ ಸುನೀಲ್ ಟಿ.ಎಂ.ರೆಡ್ಡಿ, ಸದಸ್ಯರಾದ ಸುಜಾತಾ ಬಿ ಕೊರಳ್ಳಿ ಮತ್ತು ಪ್ರೇಮಾ ತೀರ್ಪು ನೀಡಿದ್ದಾರೆ. ಅರ್ಜಿದಾರರ ಪರ ಕಾರ್ಕಳದ ವಿವೇಕಾನಂದ ಮಲ್ಯ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ