AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agumbe Ghat: ಆಗುಂಬೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಬದಲಿಗೆ ಮಾರ್ಗಕ್ಕಾಗಿ ಈ 2 ರಸ್ತೆ ಬಳಸಿ

ಕರಾವಳಿ ಭಾಗದಲ್ಲಿ ನಿಂತರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಆಗುಂಬೆ ಘಾಟ್​ನಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Agumbe Ghat: ಆಗುಂಬೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಬದಲಿಗೆ ಮಾರ್ಗಕ್ಕಾಗಿ ಈ 2 ರಸ್ತೆ ಬಳಸಿ
ಆಗುಂಬೆ ಘಾಟ್
H P
| Edited By: |

Updated on:Jul 27, 2023 | 11:43 AM

Share

ಉಡುಪಿ, (ಜುಲೈ 27): ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ವಾರದಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ಆಗುಂಬೆ ಘಾಟ್​ನಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಇಂದಿನಿಂದ ಅದರೆ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಆಗುಂಬೆ ಘಾಟ್​​ನ 6ನೇ ತಿರುವಿನ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ 6ನೇ ತಿರುವಿನಲ್ಲಿ ರಸ್ತೆಯ ಪಕ್ಕದಲ್ಲಿಯೇ ಮಣ್ಣು ಕುಸಿದಿದ್ದು, ಭಾರಿ ವಾಹನ ಸಂಚಾರದಿಂದ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಮಾರ್ಗದಲ್ಲಿ ಬಸ್​, ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗ ಬಳಸುವಂತೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: Karnataka Rains: ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬಸ್​, ಲಾರಿ ಸೇರಿದಂತೆ ಭಾರಿ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದೆ. ತೀರ್ಥಹಳ್ಳಿ-ಆಗುಂಬೆ-ಮಾಳಾಘಾಟ್-ಕಾರ್ಕಳ-ಉಡುಪಿ ಅಥವಾ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ-ಉಡುಪಿ ಮಾರ್ಗ ಬಳಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರ ಮಾಹಿತಿ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸ್ಪಷ್ಟಪಡಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 11:32 am, Thu, 27 July 23

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ