AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮತ್ತೆ ಮೀನುಗಾರಿಕೆ ಆರಂಭ: ಸಮುದ್ರ ರಾಜನಿಗೆ ಹಾಲೆರೆದು ಕಡಲ ಮಕ್ಕಳಿಂದ ಪೂಜೆ

ಉಡುಪಿಯಲ್ಲಿ ಎರಡು ತಿಂಗಳ ಮೀನುಗಾರಿಕೆ ನಿಷೇಧದ ನಂತರ ಮೀನುಗಾರರು ಮತ್ತೆ ಸಮುದ್ರಕ್ಕೆ ಇಳಿದಿದ್ದಾರೆ. ಸುರಕ್ಷಿತ ಮೀನುಗಾರಿಕೆಗಾಗಿ ಸಮುದ್ರ ರಾಜನಿಗೆ ಪೂಜೆ ಸಲ್ಲಿಸಲಾಗಿದೆ. ಸಾವಿರಾರು ಬೋಟ್‌ಗಳು ಆಳಸಮುದ್ರ ಮೀನುಗಾರಿಕೆಯಲ್ಲಿ ತೊಡಗಿಕೊಳ್ಳಲಿವೆ. ಹೇರಳವಾದ ಮೀನು ಸಿಗಲೆಂದು ಮೀನುಗಾರರು ಪ್ರಾರ್ಥಿಸಿದ್ದಾರೆ. ಪ್ರತಿಕ್ಷಣ ಅಪಾಯದಲ್ಲಿರುವ ಈ ಕಡಲ ಮಕ್ಕಳು ತಮ್ಮ ಧೈರ್ಯ ಮತ್ತು ಸಾಹಸಕ್ಕೆ ಹೆಸರುವಾಸಿಯಾಗಿದ್ದಾರೆ.

ಕರಾವಳಿಯಲ್ಲಿ ಮತ್ತೆ ಮೀನುಗಾರಿಕೆ ಆರಂಭ: ಸಮುದ್ರ ರಾಜನಿಗೆ ಹಾಲೆರೆದು ಕಡಲ ಮಕ್ಕಳಿಂದ ಪೂಜೆ
ಮೀನುಗಾರರ ಪೂಜೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 09, 2025 | 4:14 PM

Share

ಉಡುಪಿ, ಆಗಸ್ಟ್​ 09: ಎರಡು ತಿಂಗಳ ಮೀನುಗಾರಿಕೆ (Fishing) ನಿಷೇಧದ ಬಳಿಕ ಮತ್ತೆ ಸಮುದ್ರಕ್ಕೆ (Sea) ಇಳಿಯಲು ಕಡಲ ಮಕ್ಕಳು ಸನ್ನದ್ಧರಾಗಿದ್ದಾರೆ. ಪ್ರತಿಕ್ಷಣವು ಕಡಲಿನ ಅಲೆಯ ನಡುವೆ ಗುದ್ದಾಡಿ ಮೀನುಗಾರಿಕೆ ನಡೆಸುವ ಮೀನುಗಾರರು ಯಾವುದೇ ಅಪಾಯ ಎದುರಾಗದಿರಲಿ ಎಂದು ಸಮುದ್ರ ರಾಜನಿಗೆ ಶನಿವಾರ (ಆ.09) ಪೂಜೆ ಸಲ್ಲಿಸಿದರು. ಕಡಲ ಮಕ್ಕಳು ಅಪ್ರತಿಮ ಸಾಹಸಿಗಳು, ಬೋಟ್​ಗಳಲ್ಲಿ ಬಲೆಗಳನ್ನು ತುಂಬಿಕೊಂಡು ಕಡಲಿಗೆ ಇಳಿದರೆ 15 ದಿನ ಸಮುದ್ರ ಬಿಟ್ಟು ದಡಕ್ಕೆ ಬರುವುದಿಲ್ಲ.

ಮೀನುಗಾರಿಕೆ ಎಂಬ ಅದೃಷ್ಟದ ಆಟ ಇಂದಿನಿಂದ ಸಾಂಪ್ರದಾಯಿಕವಾಗಿ ಆರಂಭವಾಗಿದೆ. ಆಳಸಮುದ್ರದಲ್ಲಿ ಪರ್ಸಿನ್ ಬೋಟ್ ಸೇರಿದಂತೆ ಸಾವಿರಾರು ಬೋಟ್​ಗಳು ಇಂದಿನಿಂದ ಬೃಹತ್ ಪ್ರಮಾಣದ ಮೀನುಗಾರಿಕೆಯಲ್ಲಿ ತೊಡಗಲಿವೆ. ಹೇರಳವಾಗಿ ಮೀನು ಲಭ್ಯವಾಗಲಿ ಎಂದು ಪ್ರಾರ್ಥಿಸುವ ಸಲುವಾಗಿ ಇಂದು ಕಡಲ ಮಕ್ಕಳು ಸಮುದ್ರಕ್ಕೆ ಪೂಜೆಯನ್ನು ಮಾಡಿದರು. ಸಮುದ್ರಕ್ಕೆ ಹಾಲೆರೆದು ಸಮುದ್ರ ರಾಜನ ಆರಾಧನೆ ಮಾಡಿದರು.

ಮಲ್ಪೆ ಕಡಲ ತೀರದಲ್ಲಿರುವ ವಡಭಾಂಡೇಶ್ವರ ಬಲರಾಮ ಸನ್ನಿಧಾನದಲ್ಲಿ ಸೇರಿದ ಮೀನುಗಾರರು ಬಲರಾಮ, ಬೊಬ್ಬರ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರ ಪ್ರಸಾದ ಕೈಯಲ್ಲಿ ಹಿಡಿದು ಕಡಲ ಕಿನಾರೆಗೆ ಮೆರವಣಿಗೆ ಮೂಲಕ ಆಗಮಿಸಿ, ಪೂಜೆ ನೆರವೇರಿಸಿದರು. ಬಳಿಕ ಸಾಮೂಹಿಕವಾಗಿ ಸಮುದ್ರಕ್ಕೆ ದೇವರ ಪ್ರಸಾದವನ್ನು ಅರ್ಪಿಸಲಾಯಿತು. ಈ ಸಂಧರ್ಭದಲ್ಲಿ ಅಬ್ಬರಿಸುವ ಕಡಲಿಗೆ ಹಾಲೆರುದು ಸಮುದ್ರ ರಾಜನ ಆಶಿರ್ವಾದ ಪಡೆಯುವುದು ಸಂಪ್ರದಾಯ. ಅದರಂತೆ ಸೀಯಾಳ, ಫಲಪುಷ್ಪವನ್ನು ಸಮುದ್ರ ರಾಜನಿಗೆ ಅರ್ಪಿಸಲಾಯಿತು.

ಇದನ್ನೂ ಓದಿ: ಉಕ್ಕಿ ಹರಿಯುವ ನದಿಯಲ್ಲಿ ದೋಣಿ ನಡೆಸುವ ದಿಟ್ಟ ಮಹಿಳೆ: ಶಾಲಾ ಮಕ್ಕಳಿಗೆ ಇವರೇ ನಾವಿಕೆ

ಕಡಲಿನಲ್ಲಿ ಮೀನುಗಾರಿಕೆ ವೇಳೆ ನೂರೆಂಟು ಅಪಾಯಗಳು ಎದರುಗಾತ್ತವೆ. ಯಾವುದೇ ಅನಾಹುತ ಆಗದೆ ಉತ್ತಮ ಮೀನುಗಾರಿಕೆ ಆಗಲಿ ಅಂತ ಸಮುದ್ರ ರಾಜನಲ್ಲಿ ಪ್ರಾರ್ಥಿಸಲಾಯಿತು. ಇಂದಿನಿಂದ ಕಡಲು ಮಕ್ಕಳು ಆಳಸಮುದ್ರದಲ್ಲಿ ಮತ್ಸ್ಯ ಬೇಟೆಗೆ ಇಳಿದಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:12 pm, Sat, 9 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್