AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ನಾಲ್ವರ ಭೀಕರ ಕೊಲೆ; ಹಂತಕನ ಜಾಡು ಹಿಡಿದಿದ್ದು ಹೇಗೆ ಗೊತ್ತಾ?

ಸುಳಿವೇ ಕೊಡದ ಹಂತಕನನ್ನು ಬೆನ್ನು ಬಿದ್ದ ಪೊಲೀಸರು, ಎಸ್​ಪಿ ಡಾ. ಅರುಣ್​​ ಕುಮಾರ್​ ನೇತೃತ್ವದಲ್ಲಿ 5 ತಂಡವನ್ನು ರಚಿಸಿ ತನಿಖೆ ಆರಂಭಿಸುತ್ತಾರೆ. ಮೊದಲು ಇದೊಂದು ಕೌಟುಂಬಿಕ ಕಲಹ ಹಿನ್ನಲೆ ನಡೆದ ಹತ್ಯೆ ಎಂದು ಭಾವಿಸಿ, ಆ ರೀತಿಯಲ್ಲಿ ತನಿಖೆ ಆರಂಭಿಸಿದರು. ಆದರೆ, ಯಾವುದೇ ಸುಳಿವು ಸಿಗಲಿಲ್ಲ, ಬಳಿಕ ಮೃತರಲ್ಲಿ ಒಬ್ಬರಾದ ಆಯ್ನಾಸ್ ಹಿನ್ನಲೆ ಕೆದಕಿ, ಅವರ ಸಂಪೂರ್ಣ ಮಾಹಿತಿಯನ್ನು ಹೊರತೆಗೆದಿದ್ದಾರೆ.

ಉಡುಪಿಯಲ್ಲಿ ನಾಲ್ವರ ಭೀಕರ ಕೊಲೆ; ಹಂತಕನ ಜಾಡು ಹಿಡಿದಿದ್ದು ಹೇಗೆ ಗೊತ್ತಾ?
ಆರೋಪಿ ಬಂಧನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Nov 15, 2023 | 7:40 PM

Share

ಉಡುಪಿ, ನ.15: ಇದೇ ತಿಂಗಳ ನ.12 ರಂದು ಉಡುಪಿ(Udupi)ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಪ್ರವೀಣ್​​​​ ಅರುಣ್​​​ ಚೌಗಲೆ ಎಂಬಾತನನ್ನು ಬೆಳಗಾವಿ(Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದರು. ಇಂದು ಆರೋಪಿಯನ್ನು ವಿಚಾರಣೆ ನಡೆಸಿದ ಪೊಲೀಸರು, ಆತನನ್ನು ಕೋರ್ಟ್​ಗೆ ಹಾಜರುಪಡಿಸಿದ್ದರು. ಬಳಿಕ ಉಡುಪಿ ಜೆಎಂಎಫ್‌ಸಿ ಕೋರ್ಟ್‌ 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಇನ್ನು ಈ ಹಂತಕನನ್ನು ಬಂಧಿಸಿದ್ದೇ ರೋಚಕವಾಗಿದ್ದು, ಈ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ.

ಸುಳಿವೇ ಕೊಡದ ಹಂತಕನನ್ನು ಹೇಗೆ ಬಂಧಿಸಲಾಯಿತು ಗೊತ್ತಾ?

ಹೌದು, ಸುಳಿವೇ ಕೊಡದ ಹಂತಕನನ್ನು ಬೆನ್ನು ಬಿದ್ದ ಪೊಲೀಸರು, ಎಸ್​ಪಿ ಡಾ. ಅರುಣ್​​ ಕುಮಾರ್​ ನೇತೃತ್ವದಲ್ಲಿ 5 ತಂಡವನ್ನು ರಚಿಸಿ ತನಿಖೆ ಆರಂಭಿಸುತ್ತಾರೆ. ಮೊದಲು ಇದೊಂದು ಕೌಟುಂಬಿಕ ಕಲಹ ಹಿನ್ನಲೆ ನಡೆದ ಹತ್ಯೆ ಎಂದು ಭಾವಿಸಿ, ಆ ರೀತಿಯಲ್ಲಿ ತನಿಖೆ ಆರಂಭಿಸಿದರು. ಆದರೆ, ಯಾವುದೇ ಸುಳಿವು ಸಿಗಲಿಲ್ಲ, ಬಳಿಕ ಮೃತರಲ್ಲಿ ಒಬ್ಬರಾದ ಆಯ್ನಾಸ್ ಹಿನ್ನಲೆ ಕೆದಕಿ, ಅವರ ಸಂಪೂರ್ಣ ಮಾಹಿತಿಯನ್ನು ಹೊರತೆಗೆದಿದ್ದಾರೆ. ಅವರು ಏರ್​ ಇಡಿಂಯಾದಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿರುವುದು ತಿಳಿದ ಪೊಲೀಸರು, ಮುಖ್ಯವಾಗಿ ಅವಳ ಸಹೋದ್ಯೋಗಿಗಳ 15 ರಿಂದ 20 ಮೊಬೈಲ್​ನಂಬರ್​ಗಳಿಗೆ ಕರೆ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆರೋಪಿ ಪ್ರವೀಣ್​ ಮೊಬೈಲ್​ ಹತ್ಯೆ ನಡೆದ ಸಮಯದ ಬಳಿಕ ಸ್ವೀಚ್​ ಆಫ್​ ಆಗಿದೆ. ಈ ಹಿನ್ನಲೆ ತಡಮಾಡದೆ ಒಬ್ಬ ಅಧಿಕಾರಿಯನ್ನು ಆ ಮೊಬೈಲ್​ ನಂಬರ್​​ ಬೆನ್ನುಹತ್ತಲು ಹೇಳಿದ್ದಾರೆ. ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಆ ಮೊಬೈಲ್​ ಯಾವಾಗ, ಎಲ್ಲಿ, ಮತ್ತೆ ಆನ್​ ಆಗುತ್ತದೆಯೋ ಕಾಯುತ್ತಾ ಕುಳಿತಿದ್ದಾರೆ.

ಇದನ್ನೂ ಓದಿ:ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಎಸ್.​ಪಿ ಬಿಚ್ಚಿಟ್ಟ ರೋಚಕ ಸಂಗತಿ?

ಮೊಬೈಲ್​ ಮೂಲಕ ಸಿಕ್ಕಿಬಿದ್ದ ಹಂತಕ

ಈ ವೇಳೆ ಆರೋಪಿ ಪ್ರವೀಣ್​ ಮೊಬೈಲ್​ನ್ನು ಆನ್​ ಮಾಡಿದ್ದಾನೆ. ಕೂಡಲೇ ಉಡುಪಿ ಪೊಲೀಸರು ತಡಮಾಡದೆ ಮೊಬೈಲ್​​ ಲೊಕೇಶನ್​​ ಸರ್ಚ್​​ ಮಾಡಿ, ಆತನ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ. ನಂತರ ಆತ ಬೆಳಗಾವಿಯ ಕುಡಚಿಯಲ್ಲಿರುವ ಅಕ್ಕನ ಮನೆಯಲ್ಲಿ ಅಡಗಿಕೊಂಡಿದ್ದಾನೆ ಎಂಬುದು ತಿಳಿದಿದೆ. ಅಲ್ಲಿಯ ಸ್ಥಳೀಯ ಪೊಲೀಸರ ನೆರವಿನಿಂದ ಆರೋಪಿ ಪ್ರವೀಣ್​ ಚೌಗಲೆಯನ್ನು ಹಿಡಿದುಕೊಂಡು ಇಂದು ಬೆಳಗಿನ ಜಾವ ಉಡುಪಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಪೊಲೀಸ್​ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಕೊನೆಗೂ ಪೊಲೀಸರಿಗೆ ತಲೆನೋವಾಗಿದ್ದ ಒಂದು ಸುಳಿವು ಕೊಡದ ಹಂತಕನನ್ನು ಹಿಡಿದುಕೊಂಡು ಬಂದು, ಇಂದು ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Wed, 15 November 23

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ