AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿಯಲ್ಲಿ ಮಾರ್ಚ್ 20-22 ರಂದು ನಡೆಯಲಿರುವ ಸಮಾಧಾನ ಮಹೋತ್ಸವ ಮತಾಂತರದ ಷಡ್ಯಂತ್ರ ಎಂದು ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ ಮಾಡಿದೆ. ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ ನಡೆಸಲಿರುವ ಈ ಕಾರ್ಯಕ್ರಮಕ್ಕೆ ತಕ್ಷಣ ತಡೆ ನೀಡಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ
ಮೋಹನ್ ಸಿ ಲಾಜರಸ್ ಸಮಾಧಾನ ಮಹೋತ್ಸವImage Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Mar 18, 2026 | 4:05 PM

Share

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ.

ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​ ಎಂಬುವರು ನಡೆಸಿಕೊಡುವ ಸಮಾಧಾನ ಮಹೋತ್ಸವಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದೆ. ಉಡುಪಿಯಲ್ಲಿ ಮತಾಂತರ ಪ್ರಚೋದಿತ ಸಮಾಧಾನ ಮಹೋತ್ಸವ ಎಂದು ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು

ಮೋಹನ್ ಸಿ. ಲಾಜರಸ್​ ಮೇಲೆ ಗಂಭೀರ ಆಪರೂಪಗಳಿವೆ. ಪವಾಡದ ನೆಪದಲ್ಲಿ ಮತಾಂತರಗೊಳಿಸುತ್ತಾರೆ. ಈ ಹಿಂದೆ ಹಿಂದೂ ದೇವಾಲಯಗಳನ್ನು ಸೈತಾನನ ನೆಲೆಗಳು ಎಂದು ಕರೆದಿದ್ದರು. ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ದ್ವೇಷಪೂರಿತ ಭಾಷಣಗಳಿಗೆ ತಮಿಳುನಾಡಿನ ವಿವಿಧ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ವಿದೇಶಿ ಹಣ ದುರುಪಯೋಗ ಮಾಡಿರುವ ಆರೋಪ ಇದೆ.

ಜೀಸಸ್ ರಿಡೀಮ್ಸ್ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ ಆರೋಪ ಹೊತ್ತಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚಿಗೆ ಸಂಸ್ಥೆಯ ಲೈಸೆನ್ಸ್ ಅಮಾನತುಗೊಳಿಸಿದೆ. ಕೋಮು ಸೌಹಾರ್ದ ಕೆಡಿಸುವ ಕೆಲಸಕ್ಕೆ ಹಣ ಬಳಕೆ ಎಂಬ ಗಂಭೀರ ಆರೋಪವಿದೆ. ಮುಗ್ಧ ಜನರನ್ನು ಸೇರಿಸಿ ರೋಗವಾಸಿ ಮಾಡುವ ಅಥವಾ ಆಮಿಷ ಒಡ್ಡುವ ಮೂಲಕ ಮತಾಂತರ ನಡೆಸುವ ಸಂಶಯವಿದೆ.

ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ

ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆ ಕೇಳಿದ ನಂತರ ಕೆಲವು ಪ್ರಕರಣ ರದ್ದುಗೊಳಿಸಲಾಗಿದೆ. ಉಡುಪಿ ಅಂತಹ ಪವಿತ್ರ ಕ್ಷೇತ್ರದಲ್ಲಿ ಧಾರ್ಮಿಕ ಅಶಾಂತಿ ಮೂಡುವ ಸಾಧ್ಯತೆ ಇದೆ. ವಿವಾದಾತ್ಮಕ ವ್ಯಕ್ತಿಗಳು ಪ್ರವೇಶ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಒಂದು ವೇಳೆ ಮೋಹನ್ ಸಿ. ಲಾಜರಸ್​​​ ಜಿಲ್ಲೆಗೆ ಪ್ರವೇಶಿಸಿದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:03 pm, Wed, 18 March 26

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ