AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿಯಲ್ಲಿ ಮಾರ್ಚ್ 20-22 ರಂದು ನಡೆಯಲಿರುವ ಸಮಾಧಾನ ಮಹೋತ್ಸವ ಮತಾಂತರದ ಷಡ್ಯಂತ್ರ ಎಂದು ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ ಮಾಡಿದೆ. ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ ನಡೆಸಲಿರುವ ಈ ಕಾರ್ಯಕ್ರಮಕ್ಕೆ ತಕ್ಷಣ ತಡೆ ನೀಡಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ
ಮೋಹನ್ ಸಿ ಲಾಜರಸ್ ಸಮಾಧಾನ ಮಹೋತ್ಸವImage Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Mar 18, 2026 | 4:05 PM

Share

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ.

ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​ ಎಂಬುವರು ನಡೆಸಿಕೊಡುವ ಸಮಾಧಾನ ಮಹೋತ್ಸವಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದೆ. ಉಡುಪಿಯಲ್ಲಿ ಮತಾಂತರ ಪ್ರಚೋದಿತ ಸಮಾಧಾನ ಮಹೋತ್ಸವ ಎಂದು ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು

ಮೋಹನ್ ಸಿ. ಲಾಜರಸ್​ ಮೇಲೆ ಗಂಭೀರ ಆಪರೂಪಗಳಿವೆ. ಪವಾಡದ ನೆಪದಲ್ಲಿ ಮತಾಂತರಗೊಳಿಸುತ್ತಾರೆ. ಈ ಹಿಂದೆ ಹಿಂದೂ ದೇವಾಲಯಗಳನ್ನು ಸೈತಾನನ ನೆಲೆಗಳು ಎಂದು ಕರೆದಿದ್ದರು. ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ದ್ವೇಷಪೂರಿತ ಭಾಷಣಗಳಿಗೆ ತಮಿಳುನಾಡಿನ ವಿವಿಧ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ವಿದೇಶಿ ಹಣ ದುರುಪಯೋಗ ಮಾಡಿರುವ ಆರೋಪ ಇದೆ.

ಜೀಸಸ್ ರಿಡೀಮ್ಸ್ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ ಆರೋಪ ಹೊತ್ತಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚಿಗೆ ಸಂಸ್ಥೆಯ ಲೈಸೆನ್ಸ್ ಅಮಾನತುಗೊಳಿಸಿದೆ. ಕೋಮು ಸೌಹಾರ್ದ ಕೆಡಿಸುವ ಕೆಲಸಕ್ಕೆ ಹಣ ಬಳಕೆ ಎಂಬ ಗಂಭೀರ ಆರೋಪವಿದೆ. ಮುಗ್ಧ ಜನರನ್ನು ಸೇರಿಸಿ ರೋಗವಾಸಿ ಮಾಡುವ ಅಥವಾ ಆಮಿಷ ಒಡ್ಡುವ ಮೂಲಕ ಮತಾಂತರ ನಡೆಸುವ ಸಂಶಯವಿದೆ.

ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ

ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆ ಕೇಳಿದ ನಂತರ ಕೆಲವು ಪ್ರಕರಣ ರದ್ದುಗೊಳಿಸಲಾಗಿದೆ. ಉಡುಪಿ ಅಂತಹ ಪವಿತ್ರ ಕ್ಷೇತ್ರದಲ್ಲಿ ಧಾರ್ಮಿಕ ಅಶಾಂತಿ ಮೂಡುವ ಸಾಧ್ಯತೆ ಇದೆ. ವಿವಾದಾತ್ಮಕ ವ್ಯಕ್ತಿಗಳು ಪ್ರವೇಶ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಒಂದು ವೇಳೆ ಮೋಹನ್ ಸಿ. ಲಾಜರಸ್​​​ ಜಿಲ್ಲೆಗೆ ಪ್ರವೇಶಿಸಿದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:03 pm, Wed, 18 March 26

Follow Us
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು