AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಂಸ್ಕೃತಿ, ದೇಶಕ್ಕೆ ಬೆಲೆ ಕೊಡುವ ಸರಕಾರವನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ: ಪೇಜಾವರ ಶ್ರೀ

ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನೆಲೆ ಚಿತ್ರದುರ್ಗದಿಂದ ಆರಂಭಿಸಿದ ಶೌರ್ಯ ಜಾಗರಣ ಯಾತ್ರೆ ಇಂದು ಉಡುಪಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಂಡಿತು. ಸಮಾವೇಶದಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಸನಾತನ ಧರ್ಮವನ್ನು ವಿದೇಶಿಗರು ಅಪ್ಪಿ ಒಪ್ಪಲು ವಿಹಿಂಪ ಕಾರಣ ಎಂದರು.

ನಮ್ಮ ಸಂಸ್ಕೃತಿ, ದೇಶಕ್ಕೆ ಬೆಲೆ ಕೊಡುವ ಸರಕಾರವನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ: ಪೇಜಾವರ ಶ್ರೀ
ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on: Oct 10, 2023 | 9:04 PM

ಉಡುಪಿ, ಅ.10: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60 ವರ್ಷ ಪೂರ್ಣಗೊಂಡ ಹಿನ್ನೆಲೆ ಚಿತ್ರದುರ್ಗದಿಂದ ಆರಂಭಿಸಿದ ಶೌರ್ಯ ಜಾಗರಣ ಯಾತ್ರೆ ಇಂದು ಉಡುಪಿಯಲ್ಲಿ (Udupi) ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಂಡಿತು. ಸಮಾವೇಶದಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ಮಾತನಾಡಿ, ಸನಾತನ ಧರ್ಮವನ್ನು ವಿದೇಶಿಗರು ಅಪ್ಪಿ ಒಪ್ಪಲು ವಿಹಿಂಪ ಕಾರಣ ಎಂದರು.

ಶಿವಮೊಗ್ಗದಲ್ಲಿ ಹಿಂದೂಗಳ ಮನೆಗಳಿಗೆ ಕಲ್ಲು ಎಸೆದ ಮುಸ್ಲಿಂ ಪುಡಂರ ಕೃತ್ಯವನ್ನು ಖಂಡಿಸಿದ ಪೇಜಾವರ ಶ್ರೀಗಳು, ನಾವು ಹಿಂದೂಗಳು ಶಾಂತಿ ಪ್ರೀಯರು. ಧರ್ಮದ ಪ್ರತೀಕ ಶ್ರೀರಾಮ ಚಂದ್ರ, ಅವನೇ ನಮಗೆ ಆದರ್ಶ. ಈ ದೇಶದ ಕಣ ಕಣವೂ ಪವಿತ್ರ, ಮಾತೆಯರು ಸ್ವರ್ಗಕ್ಕೆ ಮಿಗಿಲು. ನಾವು ಕಲ್ಲೆಸೆಯಲ್ಲ, ಕೊಳ್ಳಿ ಇಡಲ್ಲ ತಲೆ ಒಡೆಯುವುದಿಲ್ಲ. ಒಳ್ಳೆ ವಿಚಾರದಲ್ಲಿ ನಮ್ಮ ಹೃದಯ ಮನೆ ತರೆದಿರುತ್ತದೆ. ಬಿರುಗಾಳಿ ಬೀಸಿದರೆ ಎದೆಯೊಡ್ಡಿ ನಿಲ್ಲಲೂ ನಾವು ಸಿದ್ಧ ಎಂದರು.

ಇದನ್ನೂ ಓದಿ: ಶಿವಮೊಗ್ಗ ಘಟನೆ ಮಂಗಳೂರಿನಲ್ಲಿ ಆಗುತ್ತಿದ್ದರೆ ದಂಗೆಕೋರರ ಮೈ ಹುಡಿಯಾಗುತ್ತಿತ್ತು: ಶರಣ್ ಪಂಪ್​ವೆಲ್

ಸನಾತನ ಧರ್ಮವನ್ನು ವಿದೇಶಿಗರು ಅಪ್ಪಿ ಒಪ್ಪಲು ವಿಹಿಂಪ ಕಾರಣ. ನಮ್ಮ ದೇಶವನ್ನು ಭಾರತ ಎನ್ನಲು ನಾಚಿಕೆ ಹೇಸಿಗೆ ಪಡುವವರರು ಇದ್ದಾರೆ. ದೇಶ ವಿರೋಧಿಗಳು ಒಟ್ಟಾಗುತ್ತಾರೆ ಎಂದರೆ ನಾವೂ ಒಂದಾಗಬೇಕು. ನಮ್ಮ ಸಂಸ್ಕೃತಿ, ದೇಶ, ವೇಷಭೂಷಣಕ್ಕೆ ಬೆಲೆ ಕೊಡುವ ಸರಕಾರವನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಹಿಂದೂ ಸಮಾಜೋತ್ಸವಕ್ಕೂ ಮುನ್ನ ಉಡುಪಿಯಲ್ಲಿ ಶೌರ್ಯ ಜಾಗರಣಾ ಯಾತ್ರಾ ಮೆರವಣಿಗೆ ನಡೆಯಿತು. ಇದಕ್ಕೆ ಬಿಜೆಪಿ ಮಾಜಿ ಸಚಿವ ಪ್ರಮೋದ್​​ ಮಧ್ವರಾಜ್​​ ಅವರು ಚಾಲನೆ ನೀಡಿದರು. ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಯಾತ್ರೆ ನಡೆಯಿತು. ಈ ವೇಳೆ ಹಿಂದೂ ಧರ್ಮದ ಶೌರ್ಯ ಸಾರುವ ಟ್ಯಾಬ್ಲೋ, ಭಜನಾ ತಂಡ, ಸ್ತಬ್ಧಚಿತ್ರಗಳು ಇದ್ದವು. ಜಾಥಾದಲ್ಲಿ ಶಾಸಕ ಕೋಟ ಶ್ರೀನಿವಾಸ್ ಪೂಜಾರಿ, ಯಶ್​ಪಾಲ್​​ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ