AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಹಿಟ್ ಆ್ಯಂಡ್ ರನ್: ಕಾಂಗ್ರೆಸ್ ಮುಖಂಡನ ಪುತ್ರ ಬಂಧನ, ಠಾಣೆ ಬೇಲ್​ ಮೇಲೆ ರಿಲೀಸ್​​​

ಉಡುಪಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 11 ರಂದು ನಡೆದ ಅಪಘಾತದಲ್ಲಿ ಮೊಹಮ್ಮದ್ ಹುಸೈನ್ ಎಂಬುವರು ಮೃತಪಟ್ಟಿದ್ದಾರ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧನವಾಗಿದ್ದ ಪ್ರಜ್ವಲ್ ಶೆಟ್ಟಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಉಡುಪಿ ಹಿಟ್ ಆ್ಯಂಡ್ ರನ್: ಕಾಂಗ್ರೆಸ್ ಮುಖಂಡನ ಪುತ್ರ ಬಂಧನ, ಠಾಣೆ ಬೇಲ್​ ಮೇಲೆ ರಿಲೀಸ್​​​
ಆರೋಪಿ ಪ್ರಜ್ವಲ್​ ಶೆಟ್ಟಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on:Nov 17, 2024 | 12:50 PM

Share

ಉಡುಪಿ, ನವೆಂಬರ್​ 17: ಹಿಟ್ ಆ್ಯಂಡ್ ರನ್ (Hit and Run) ಆರೋಪದಲ್ಲಿ ಕಾಂಗ್ರೆಸ್ (Congress) ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್​​ ಮೇಲೆ ಬಿಡುಗಡೆ ಮಾಡಿದ್ದಾರೆ.

ನವೆಂಬರ್ 11ರಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಬೆಳಪುವಿನ ಮಿಲಿಟರಿ ಕಾಲನಿಯಲ್ಲಿ ಪ್ರಜ್ವಲ್ ಶೆಟ್ಟಿ ಹಿಟ್​ ಆ್ಯಂಡ್​ ರನ್​ ನಡೆಸಿ ಪರಾರಿಯಾಗಿದ್ದನು. ಅಪಘಾತದಲ್ಲಿ ಮೊಹಮ್ಮದ್ ಹುಸೈನ್ (39) ಎಂಬುವರು ಮೃತಪಟ್ಟಿದ್ದಾರೆ. ಪ್ರಜ್ವಲ್ ಶೆಟ್ಟಿ ತನ್ನ ಥಾರ್ ಜೀಪಿನಿಂದ ಮೊಹಮ್ಮದ್ ಹುಸೈನ್​ ಅವರ ಬೈಕ್​ಗೆ ಗುದ್ದಿ ಪರಾರಿಯಾಗಿದ್ದರು.

ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್​ ಶೆಟ್ಟಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ವಿಚಾರಣೆ ವೇಳೆ ಆರೋಪಿ ಪ್ರಜ್ವಲ್ ಶೆಟ್ಟಿ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿದೆ ಎಂದು ಹೇಳಿದ್ದಾನೆ. ವಿಚಾರಣೆ ಬಳಿಕ, ಆರೋಪಿ ಪ್ರಜ್ವಲ್ ಶೆಟ್ಟಿಯನ್ನು ಠಾಣೆಯ ಬೇಲ್​​​ ಮೇಲೆ ಬಿಡುಗಡೆ ಮಾಡಿದ್ದಾರೆ. ಕರೆದಾಗ ವಿಚಾರಣೆಗೆ ಹಾಜರಾಗಲು ಶಿರ್ವ ಪೊಲೀಸರ ಸೂಚನೆ ನೀಡಿದ್ದಾರೆ.

ಆರೋಪ ಸಾಬೀತಾದರೆ ಪ್ರಜ್ವಲ್​​ಗೆ ಮೂರು ವರ್ಷ ‌ಶಿಕ್ಷೆಯಾಗುತ್ತದೆ. ಮೃತನ ಕುಟುಂಬಸ್ಥರು ಹಿಟ್ ಆಂಡ್ ರನ್ ಎಂದು ದೂರು ನೀಡಿದ್ದಾರೆ. ಆರೋಪಿಯ ಥಾರ್ ಜೀಪ್​ ಪೊಲೀಸರ ವಶದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:48 pm, Sun, 17 November 24

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ