AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ

Udupi News: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಹೇಳಿಕೆ ನೀಡಿದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದೀಗ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಸ್​ಪಿಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.

ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ
ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 31, 2023 | 5:58 PM

Share

ಉಡುಪಿ, ಜುಲೈ 31: ವಿದೇಶದಲ್ಲಿ ಕುಳಿತುಕೊಂಡು ಫೇಸ್​ಬುಕ್, ವಾಟ್ಸ್​​ಆ್ಯಪ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ (Yashpal Suvarna) ಆರೋಪಿಸಿದ್ದಾರೆ. ಅಲ್ಲದೆ, ಅಂತಹ​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ಸಂಬಂಧ ಪ್ರತಿಭಟನಾ ನಿರತ ವಿದ್ಯಾರ್ಥಿನಿ ಶಾಲಾ ಆಡಳಿತ ಮಂಡಳಿ ವಿರುದ್ಧ ಆರೋಪಿಸಿದ್ದರು. ಈ ನಡುವೆ ಆಕೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಲಾಗಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ; ದೂರು ದಾಖಲು

ಈ ಬಗ್ಗೆ ಉಡುಪಿ ನಗರದಲ್ಲಿ ಮಾತನಾಡಿದ ಯಶ್​ಪಾಲ್ ಸುವರ್ಣ, ವಿದೇಶದಲ್ಲಿ ಕುಳಿತು ಪ್ರತಿಭಟನೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಫೇಸ್​​ಬುಕ್​, ವಾಟ್ಸಾಪ್ ಸಂದೇಶಗಳಿಗೆ ಕುಗ್ಗುವ ಪ್ರಶ್ನೆಯೇ ಇಲ್ಲ. ಫೇಸ್​​ಬುಕ್​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಜೊತೆ ನಾವು ಇದ್ದೇವೆ ಎಂದರು.

ಅವಹೇಳನಕಾರಿ ಸಂದೇಶದ ಬಗ್ಗೆ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಶ್ಲೀಲ ಸಂದೇಶ ಹಾಕುವವರನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಎಸ್​.ಪಿ. ಅವರಿಗೆ ದೂರು ನೀಡುತ್ತೇವೆ ಎಂದು ಯಶ್​ಪಾಲ್ ಸುವರ್ಣ ಹೇಳಿದರು. ಅಲ್ಲದೆ, ಕಾಂಗ್ರೆಸ್​ ಪಕ್ಷದಲ್ಲಿರುವ ಹಿಂದೂಗಳು ಜಿಹಾದಿಗಳ ಜೊತೆ ಕೈಜೋಡಿಸುತ್ತಿದ್ದಾರೆ. ಕಾಂಗ್ರೆಸ್​ನಲ್ಲಿರುವ ಹಿಂದೂಗಳ ಮನೆಯವರಿಗೆ ಸಮಸ್ಯೆ ಆದರೆ ಹಿಂದೂ ಸಂಘಟನೆಯವರೇ ಬರಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ