ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ

Udupi News: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಹೇಳಿಕೆ ನೀಡಿದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದೀಗ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಸ್​ಪಿಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.

ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ
ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ
Edited By: Rakesh Nayak Manchi

Updated on: Jul 31, 2023 | 5:58 PM

ಉಡುಪಿ, ಜುಲೈ 31: ವಿದೇಶದಲ್ಲಿ ಕುಳಿತುಕೊಂಡು ಫೇಸ್​ಬುಕ್, ವಾಟ್ಸ್​​ಆ್ಯಪ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ (Yashpal Suvarna) ಆರೋಪಿಸಿದ್ದಾರೆ. ಅಲ್ಲದೆ, ಅಂತಹ​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ಸಂಬಂಧ ಪ್ರತಿಭಟನಾ ನಿರತ ವಿದ್ಯಾರ್ಥಿನಿ ಶಾಲಾ ಆಡಳಿತ ಮಂಡಳಿ ವಿರುದ್ಧ ಆರೋಪಿಸಿದ್ದರು. ಈ ನಡುವೆ ಆಕೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಲಾಗಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ; ದೂರು ದಾಖಲು

ಈ ಬಗ್ಗೆ ಉಡುಪಿ ನಗರದಲ್ಲಿ ಮಾತನಾಡಿದ ಯಶ್​ಪಾಲ್ ಸುವರ್ಣ, ವಿದೇಶದಲ್ಲಿ ಕುಳಿತು ಪ್ರತಿಭಟನೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಫೇಸ್​​ಬುಕ್​, ವಾಟ್ಸಾಪ್ ಸಂದೇಶಗಳಿಗೆ ಕುಗ್ಗುವ ಪ್ರಶ್ನೆಯೇ ಇಲ್ಲ. ಫೇಸ್​​ಬುಕ್​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಜೊತೆ ನಾವು ಇದ್ದೇವೆ ಎಂದರು.

ಅವಹೇಳನಕಾರಿ ಸಂದೇಶದ ಬಗ್ಗೆ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಶ್ಲೀಲ ಸಂದೇಶ ಹಾಕುವವರನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಎಸ್​.ಪಿ. ಅವರಿಗೆ ದೂರು ನೀಡುತ್ತೇವೆ ಎಂದು ಯಶ್​ಪಾಲ್ ಸುವರ್ಣ ಹೇಳಿದರು. ಅಲ್ಲದೆ, ಕಾಂಗ್ರೆಸ್​ ಪಕ್ಷದಲ್ಲಿರುವ ಹಿಂದೂಗಳು ಜಿಹಾದಿಗಳ ಜೊತೆ ಕೈಜೋಡಿಸುತ್ತಿದ್ದಾರೆ. ಕಾಂಗ್ರೆಸ್​ನಲ್ಲಿರುವ ಹಿಂದೂಗಳ ಮನೆಯವರಿಗೆ ಸಮಸ್ಯೆ ಆದರೆ ಹಿಂದೂ ಸಂಘಟನೆಯವರೇ ಬರಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us