AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿಲಿಂಗೇಶ್ವರ ಅಭಯ: ನವದಂಪತಿಗೆ ಸುಖದಾಂಪತ್ಯದ ಕನಸು ಕಟ್ಟಿಕೊಡುವ ಕುಂದಾಪುರ ಕೊಡಿ ಹಬ್ಬ ಸಪ್ತಾಹ ಆರಂಭ

kodi habba: ಜಾತ್ರೆಗೆ ಬಂದವರೆಲ್ಲಾ ಕಬ್ಬಿನ ಜಲ್ಲೆ ತೆಗೆದುಕೊಂಡು ಹೋಗೋದು ಇಲ್ಲಿನ ಪದ್ಧತಿ. ಕಬ್ಬಿನ ಜಲ್ಲೆಯ ಕೊಡಿ ಕೊಂಡೊಯ್ಯುವುದರಿಂದಲೂ ಇದನ್ನು ಕೊಡಿ ಹಬ್ಬ ಎಂದು ಕರೆಯಲಾಗುತ್ತೆ.

ಕೋಟಿಲಿಂಗೇಶ್ವರ ಅಭಯ: ನವದಂಪತಿಗೆ ಸುಖದಾಂಪತ್ಯದ ಕನಸು ಕಟ್ಟಿಕೊಡುವ ಕುಂದಾಪುರ ಕೊಡಿ ಹಬ್ಬ ಸಪ್ತಾಹ ಆರಂಭ
ನವದಂಪತಿಗೆ ಸುಖದಾಂಪತ್ಯದ ಕನಸು ಕಟ್ಟಿಕೊಡುವ ಕುಂದಾಪುರ ಕೊಡಿ ಹಬ್ಬ ಸಪ್ತಾಹ ಆರಂಭ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 09, 2022 | 5:52 PM

ಕರಾವಳಿಯ ಅತಿ ದೊಡ್ಡ ಜಾತ್ರೆ ಆರಂಭವಾಗಿದೆ. ಉಡುಪಿ (Udupi) ಜಿಲ್ಲೆಯ ಕುಂದಾಪುರ (kundapura) ತಾಲೂಕಿನ (Koteshwara) ಕೊಡಿ ಹಬ್ಬ ಅಂದ್ರೆ ಹಲವು ನಂಬಿಕೆಗಳ ಪ್ರತೀಕ. ಮದುವೆಯಾಗದವರಿಗೆ ಕೋಟಿಲಿಂಗೇಶ್ವರ ಅಭಯ ನೀಡುವ ದೇವರು. ನವದಂಪತಿಗೆ ಸುಖದಾಂಪತ್ಯದ ಕನಸು ಕಟ್ಟಿಕೊಡುವ ಕೇಂದ್ರ. ಇಲ್ಲಿನ ರಥೋತ್ಸವ ಅಂದ್ರೆ ಅದ್ದೂರಿತನಕ್ಕೆ ಇನ್ನೊಂದು ಹೆಸರು.

ಹೊಸದಾಗಿ ಮದುವೆಯಾದವರಿಗೆ ತಮ್ಮ ಸುಖ ದಾಂಪತ್ಯದ ಬಗ್ಗೆ ಸಾವಿರ ಕನಸುಗಳಿರುತ್ತವೆ. ಈ ದೇವ ಸನ್ನಿಧಿಯಲ್ಲಿ (kotilingeshwara kodi habba) ದಾಂಪತ್ಯಗೀತೆ ಆರಂಭವಾದ್ರೆ ಪೂರ್ಣ ಜೀವನ ಸುಖವಾಗಿರುತ್ತೆ ಅನ್ನೋದು ಜನರ ವಿಶ್ವಾಸ. ಹಾಗಂತಲೇ ಸಾವಿರ ಸಾವಿರ ಮಂದಿ ಕುಂದಾಪುರದ ಕೋಟಿಲಿಂಗೇಶ್ವರ ದರ್ಶನಕ್ಕೆ ಬರುತ್ತಾರೆ. ಕರಾವಳಿ- ಮಲೆನಾಡು ಭಾಗದ ಅತೀದೊಡ್ಡ ಜಾತ್ರೆ ಅಂದ್ರೆ ಕೊಡಿ ಹಬ್ಬ.

ಏಳು ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಮೊದಲ ದಿನ ನವದಂಪತಿಗಳ ಜಾತ್ರೆ ನಡೆಯುತ್ತೆ. ಹೊಸದಾಗಿ ಮದುವೆಯಾದ ದಂಪತಿ ಕೈ ಕೈಹಿಡಿದು ಬಂದು, ಮನದಲ್ಲಿ ನೂರು ಹರಕೆ ಹೊತ್ತು ದೇವರಿಗೆ ಕೈ ಮುಗಿಯುತ್ತಾರೆ. ಪುಷ್ಕರಣಿಗೆ ಪ್ರದಕ್ಷಿಣೆ ಬಂದು ಸುತ್ತಲೂ ಅಕ್ಕಿ ಚೆಲ್ಲಿ ಹರಕೆ ತೀರಿಸುತ್ತಾರೆ. ಇಲ್ಲಿಂದ ಮುಂದೆ ಹೊಸ ಜೀವನ ಆರಂಭಿಸುತ್ತಾರೆ ಎಂದು ವ್ಯವಸ್ಥಾಪನ ಸಮಿತಿ ಸದಸ್ಯೆ ಚಂದ್ರಿಕಾ ಧನ್ಯ ಮಾಹಿತಿ ಹಂಚಿಕೊಂಡಿದ್ದಾರೆ.

udupi kotilingeshwara kodi habba in Koteshwara in kundapura begins

ಉತ್ತಮ ಸಂತಾನದ ಆಸೆ ಹೊತ್ತವರೇ ಹೆಚ್ಚು ಸಂಖ್ಯೆಯಲ್ಲಿ ಬರೋದ್ರಿಂದ ಇದನ್ನು ಕುಡಿ ಹಬ್ಬ ಅಂತಾನೂ ಕರೆಯಬಹುದು. ಜಾತ್ರೆಗೆ ಬಂದವರೆಲ್ಲಾ ಕಬ್ಬಿನ ಜಲ್ಲೆ ತೆಗೆದುಕೊಂಡು ಹೋಗೋದು ಇಲ್ಲಿನ ಪದ್ಧತಿ. ಕಬ್ಬಿನ ಜಲ್ಲೆಯ ಕೊಡಿ ಕೊಂಡೊಯ್ಯುವುದರಿಂದಲೂ ಇದನ್ನು ಕೊಡಿ ಹಬ್ಬ ಎಂದು ಕರೆಯಲಾಗುತ್ತೆ.

ಗಾತ್ರದಲ್ಲಿ ಅತೀದೊಡ್ಡ ಎನಿಸಿದ ಬ್ರಹ್ಮರಥವನ್ನು ಭಕ್ತರೆಲ್ಲಾ ಸೇರಿ ಎಳೆಯುತ್ತಾರೆ. ಇಲ್ಲಿ ಶಿವ ದೇವರು ಕೋಟಿ ಲಿಂಗ ಸ್ವರೂಪದಲ್ಲಿ ನೆಲೆ ನಿಂತಿದ್ದಾನೆ ಅನ್ನೋದು ನಂಬಿಕೆ. ಗ್ರಾಮೀಣ ಜನರು ಕೊಡಿ ಹಬ್ಬಕ್ಕಾಗಿ ವರ್ಷವೆಲ್ಲಾ ಕಾಯ್ತಾರೆ. ಏಳು ದಿನದ ಜಾತ್ರೆಯಲ್ಲಿ ನಿತ್ಯವೂ ಬಂದು ಪಾಲ್ಗೊಂಡು ಸಂಭ್ರಮಿಸ್ತಾರೆ.

Also Read: ಚಿನ್ನದಂತಹ ಬದುಕು ನಡೆಸಬೇಕಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಜೀವನ ಮೂರಾಬಟ್ಟೆಯಾಗಿದೆ! ಲಾಭವೇ ತಂದುಕೊಟ್ಟರೂ ಸರ್ಕಾರದ ನಿರ್ಲಕ್ಷ್ಯ

ಒಟ್ಟಾರೆಯಾಗಿ ಕರಾವಳಿಯಲ್ಲಿ ನಂಬಿಕೆಗಳೇ ಆಚರಣೆಗಳ ಜೀವಾಳ ಅಂತಾರೆ. ಗ್ರಾಮೀಣ ಜನರ ಬದುಕಿನಲ್ಲಿ ಕೊಡಿ ಹಬ್ಬ ಅವಿನಾಭಾವ ಸ್ಥಾನ ಪಡೆದಿದೆ. ಹಾಗಾಗಿ ವರ್ಷದಿಂದ ವರ್ಷಕ್ಕೆ ಹಬ್ಬದ ವೈಭವ ಹೆಚ್ಚುತ್ತಿದೆ. (ವರದಿ: ದಿನೇಶ್ ಯಲ್ಲಾಪುರ್, ಟಿವಿ 9, ಉಡುಪಿ)

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್