AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paryaya Mahotsava: ಕೊವಿಡ್ ಕರಿನೆರಳಲ್ಲೇ ಮಾರ್ಗಸೂಚಿ ಅನುಸರಿಸಿ ಪರ್ಯಾಯ ಮಹೋತ್ಸವ ನಡೆಸುವ ಸವಾಲು

ಶ್ರೀಕೃಷ್ಣ ಮಠದ ಪರ್ಯಾಯ ಅಂದರೆ ಸಾವಿರಾರು ಮಂದಿ ಭಕ್ತರು ದೂರದೂರುಗಳಿಂದ ಆಗಮಿಸುತ್ತಾರೆ. ಆದರೆ ಸದ್ಯ ಕೊವಿಡ್ ರೂಲ್ಸ್ ಜಾರಿಯಲ್ಲಿದೆ. ಹೆಚ್ಚು ಜನ ಸೇರಿಸುವಂತಿಲ್ಲ. ಹೀಗಾಗಿ ಮಾರ್ಗಸೂಚಿ ಪಾಲಿಸಿಕೊಂಡು ಪರ್ಯಾಯ ಮಹೋತ್ಸವ ನಡೆಸುವುದೇ ದೊಡ್ಡ ಸವಾಲಾಗಿದೆ.

Paryaya Mahotsava: ಕೊವಿಡ್ ಕರಿನೆರಳಲ್ಲೇ ಮಾರ್ಗಸೂಚಿ ಅನುಸರಿಸಿ ಪರ್ಯಾಯ ಮಹೋತ್ಸವ ನಡೆಸುವ ಸವಾಲು
ಕೃಷ್ಣ ಮಠವನ್ನು ಸುಣ್ಣ ಬಣ್ಣ ಬಳಿದು ಸಿಂಗಾರ ಮಾಡಲಾಗುತ್ತಿದೆ
TV9 Web
| Edited By: |

Updated on: Jan 06, 2022 | 12:14 PM

Share

ಉಡುಪಿ: ಕೃಷ್ಣನೂರಿನ ದೊಡ್ಡ ಹಬ್ಬ ಅಂದರೆ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಮಹೋತ್ಸವ. ಇದೇ ತಿಂಗಳು ನಡೆಯುವ ಪರ್ಯಾಯಕ್ಕೆ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ. ಉಡುಪಿ ರಸ್ತೆಗಳಲ್ಲಿ ಸ್ವಾಗತ ಗೋಪುರಗಳು ಕಣ್ಮನ ಸೆಳೆದರೆ, ಅತ್ತ ಕೃಷ್ಣ ಮಠವನ್ನು ಸುಣ್ಣ ಬಣ್ಣ ಬಳಿದು ಸಿಂಗಾರ ಮಾಡಲಾಗುತ್ತಿದೆ.

ಕೊರೊನಾ ಕರಿನೆರಳಲ್ಲೇ ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ, ಪರ್ಯಾಯ ನಡೆಸುವುದೇ ಶ್ರೀಕೃಷ್ಣಮಠಕ್ಕೆ ಸಂಕಷ್ಟತಂದೊಡ್ಡಿದೆ. ಪರ್ಯಾಯ ಮಹೋತ್ಸವಕ್ಕೆ ಮಠ ಪರಂಪರೆಯಲ್ಲಿ ವಿಶೇಷ ಮಹತ್ವವಿದೆ. ಸದ್ಯ ಅದಮಾರು ಈಶ ಪ್ರಿಯ ಶೀಗಳ ಪರ್ಯಾಯ ಕೊನೆಗೊಳ್ಳುತ್ತಿದೆ. ಇದೀಗ ಕೃಷ್ಣಾಪುರ ಮಠಾಧೀಶ ವಿದ್ಯಾಸಾಗರ ತೀರ್ಥರ ಪರ್ಯಾಯಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಇದೆ. ಜನವರಿ 17ರ ರಾತ್ರಿಯಿಂದ ಜನವರಿ 18ರ ಬೆಳಗ್ಗೆ ತನಕ ಪರ್ಯಾಯೋತ್ಸವ ಜರುಗಲಿದ್ದು ಇದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ.

ಶ್ರೀಕೃಷ್ಣ ಮಠದ ಪರ್ಯಾಯ ಅಂದರೆ ಸಾವಿರಾರು ಮಂದಿ ಭಕ್ತರು ದೂರದೂರುಗಳಿಂದ ಆಗಮಿಸುತ್ತಾರೆ. ಆದರೆ ಸದ್ಯ ಕೊವಿಡ್ ರೂಲ್ಸ್ ಜಾರಿಯಲ್ಲಿದೆ. ಹೆಚ್ಚು ಜನ ಸೇರಿಸುವಂತಿಲ್ಲ. ಹೀಗಾಗಿ ಮಾರ್ಗಸೂಚಿ ಪಾಲಿಸಿಕೊಂಡು ಪರ್ಯಾಯ ಮಹೋತ್ಸವ ನಡೆಸುವುದೇ ದೊಡ್ಡ ಸವಾಲಾಗಿದೆ. ಒಟ್ಟಿನಲ್ಲಿ, ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಅದ್ದೂರಿ ಬದಲು ಸರಳವಾಗಿ ಪರ್ಯಾಯ ನಡೆಸಲು ಚಿಂತನೆ ನಡೆಯುತ್ತಿದೆ.

ವರದಿ: ಹರೀಶ್ ಪಾಲೇಚ್ಚಾರ್, ಟಿವಿ9 ಉಡುಪಿ

ಇದನ್ನೂ ಓದಿ: ಪಂಜಾಬ್​​ನಲ್ಲಿ ಪ್ರಧಾನಿ ಮೋದಿ ಭದ್ರತೆ ಲೋಪ; ನಾಚಿಕೆಗೇಡಿನ ಸಂಗತಿ ಎಂದು ಇನ್​ಸ್ಟಾ ಪೋಸ್ಟ್ ಹಾಕಿದ ಬಾಲಿವುಡ್ ನಟಿ ಕಂಗನಾ

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು