AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ: ಕೇಂದ್ರ ಸಚಿವ ರಾಜನಾಥ್​​ ಸಿಂಗ್

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್​​ ಸಿಂಗ್ ಖಡಕ್​ ಸಂದೇಶ ರವಾನಿಸಿದ್ದಾರೆ.

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ: ಕೇಂದ್ರ ಸಚಿವ ರಾಜನಾಥ್​​ ಸಿಂಗ್
ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​
TV9 Web
| Updated By: ವಿವೇಕ ಬಿರಾದಾರ|

Updated on:Nov 18, 2022 | 5:32 PM

Share

ಉಡುಪಿ: ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ಯಾರ ಜೊತೆಗು ಗಲಾಟೆ ತೆಗೆಯುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ. ಇಡೀ ಜಗತ್ತೇ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಉಡುಪಿಯಲ್ಲಿ (Udupi) ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್​​ ಸಿಂಗ್ (Rajnath Sing)​ ಹೇಳಿದ್ದಾರೆ.

ಉಡುಪಿ ಜಿಲ್ಲೆ ಮಣಿಪಾಲ ಪಟ್ಟದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹಾಗೆ 5 ಜನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು ವಿಶ್ವದ 3ನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಂತಿದೆ. 2047ರ ವೇಳೆಗೆ ಭಾರತ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಗ್ಲೋಬಲ್ ಸಿಟಿಜನ್​ ನಿರ್ಮಿಸಲು ಎನ್​ಇಪೊ ಜಾರಿ ಮಾಡಿದ್ದೇವೆ. ಮಾಹೆ ವಿವಿಯ ಸತ್ಯ ನಾಡೆಲ್ಲಾ ಮೈಕೋಸಾಫ್ಟ್​​ನ ನೇತೃತ್ವ ವಹಿಸಿದ್ದಾರೆ ಎಂದು ತಿಳಿಸಿದರು.

ಮೈಕ್ರೋಸಾಫ್ಟ್​​ನ್ನು ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿ ಸಿಇಒಗಳು ಭಾರತ ಮೂಲದವರು ಎಂಬುವುದು ನಮ್ಮ ಹೆಗ್ಗಳಿಕೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯು ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದನು. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ. ಸಂಸ್ಕೃತಿ ಮತ್ತು ಸಂಪ್ರದಾಯ ಇಲ್ಲದ ನಾಗರಿಕ ಜೀವನಕ್ಕೆ ಅರ್ಥ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡು ಬಂದಿದೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹುಚ್ಚುಗಾರಿಕೆ ಎಂದು ಟೀಕಿಸುತ್ತಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ. ಭಾರತೀಯರು ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೋರಸನ ಪ್ರಮೇಯವನ್ನು ಬೋಧಾಯನ ಋಷಿ 300 ವರ್ಷಗಳ ಹಿಂದೆಯೇ ಪರಿಚಯಿಸಿದ್ದರು. ಭಾರತದಲ್ಲಿ ಆರ್ಥಿಕ ಸದೃಢತೆ ಗುಣಮಟ್ಟದ ಮಾನವ ಸಂಪನ್ಮೂಲಗಳಿವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Fri, 18 November 22

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ