AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ವಿದ್ಯಾರ್ಥಿನಿಯರ ಮನವಿ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ

ನಮಗೆ ಕ್ಲಾಸ್ ಒಳಗೆ ಕೂರಲು ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಪೋಷಕರು ಬಂದು ಮಾತನಾಡಿದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ. ನಮ್ಮ ಕಲಿಕೆಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ವಿದ್ಯಾರ್ಥಿನಿಯರ ಮನವಿ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on:Dec 31, 2021 | 5:35 PM

Share

ಉಡುಪಿ: ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಲು ವಿದ್ಯಾರ್ಥಿಗಳು ಮನವಿ ಮಾಡಿದ ಘಟನೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಇಲ್ಲಿ ನಡೆದಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಇಲ್ಲಿನ ಪ್ರಾಂಶುಪಾಲರು ಹಿಜಾಬ್ ಧರಿಸದಂತೆ ಆದೇಶ ಮಾಡಿರುವುದು ತಿಳಿದುಬಂದಿದೆ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರುದ್ರೇಗೌಡ ಎಂಬವರು ಹಿಜಾಬ್ ಧರಿಸದಂತೆ ಹೇಳಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ ಮಾಡಿ ಕಾಲೇಜು ಪ್ರಾಂಶುಪಾಲರಾದ ರುದ್ರೆಗೌಡ ಸೂಚನೆ ನೀಡಿದ್ದರು. ಈವರೆಗೆ ಹಿಜಾಬ್ ಹಾಕಿಕೊಂಡು ವಿದ್ಯಾರ್ಥಿನಿಯರು ತರಗತಿಗೆ ಬರುತ್ತಿರಲಿಲ್ಲ. ಕಳೆದ ಮೂರು ದಿನಗಳಿಂದ ಕೆಲವರು ಹಿಜಾಬ್ ಧರಿಸುತ್ತಿದ್ದಾರೆ. 60 ಮುಸ್ಲಿಮ್ ವಿದ್ಯಾರ್ಥಿನಿಯರಲ್ಲಿ ಕೆಲವು ಮಂದಿ ಮಾತ್ರ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಈ ಸಂಬಂಧ ಮನೆಯವರನ್ನು ಕರೆದು ಮಾತುಕತೆ ಮಾಡಿದ್ದೇವೆ. ಅವರೆಲ್ಲ ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಎಂದು ಪ್ರಾಂಶುಪಾಲರಿಂದ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ, ವಿದ್ಯಾರ್ಥಿಗಳು, ನಮಗೆ ಕ್ಲಾಸ್ ಒಳಗೆ ಕೂರಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಪೋಷಕರು ಬಂದು ಮಾತನಾಡಿದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ. ನಮ್ಮ ಕಲಿಕೆಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಇದನ್ನೂ ಓದಿ: ಬೇಷರತ್ ಆಗಿ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ; ಉಡುಪಿ ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಇದನ್ನೂ ಓದಿ: ಉಡುಪಿ ಕೃಷ್ಣಮಠದ ಸ್ವಾಧೀನಕ್ಕೆ ಯತ್ನಿಸಿತ್ತು ಸಿದ್ದರಾಮಯ್ಯ ಸರ್ಕಾರ: ಪ್ರಮೋದ್ ಮಧ್ವರಾಜ್

Published On - 5:12 pm, Fri, 31 December 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ