AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ವಿದ್ಯಾರ್ಥಿನಿಯರ ಮನವಿ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ

ನಮಗೆ ಕ್ಲಾಸ್ ಒಳಗೆ ಕೂರಲು ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಪೋಷಕರು ಬಂದು ಮಾತನಾಡಿದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ. ನಮ್ಮ ಕಲಿಕೆಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ವಿದ್ಯಾರ್ಥಿನಿಯರ ಮನವಿ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on:Dec 31, 2021 | 5:35 PM

Share

ಉಡುಪಿ: ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಲು ವಿದ್ಯಾರ್ಥಿಗಳು ಮನವಿ ಮಾಡಿದ ಘಟನೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಇಲ್ಲಿ ನಡೆದಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಇಲ್ಲಿನ ಪ್ರಾಂಶುಪಾಲರು ಹಿಜಾಬ್ ಧರಿಸದಂತೆ ಆದೇಶ ಮಾಡಿರುವುದು ತಿಳಿದುಬಂದಿದೆ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರುದ್ರೇಗೌಡ ಎಂಬವರು ಹಿಜಾಬ್ ಧರಿಸದಂತೆ ಹೇಳಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಹಿಜಾಬ್ ಹಾಕಿ ಬರುವ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಣೆ ಮಾಡಿ ಕಾಲೇಜು ಪ್ರಾಂಶುಪಾಲರಾದ ರುದ್ರೆಗೌಡ ಸೂಚನೆ ನೀಡಿದ್ದರು. ಈವರೆಗೆ ಹಿಜಾಬ್ ಹಾಕಿಕೊಂಡು ವಿದ್ಯಾರ್ಥಿನಿಯರು ತರಗತಿಗೆ ಬರುತ್ತಿರಲಿಲ್ಲ. ಕಳೆದ ಮೂರು ದಿನಗಳಿಂದ ಕೆಲವರು ಹಿಜಾಬ್ ಧರಿಸುತ್ತಿದ್ದಾರೆ. 60 ಮುಸ್ಲಿಮ್ ವಿದ್ಯಾರ್ಥಿನಿಯರಲ್ಲಿ ಕೆಲವು ಮಂದಿ ಮಾತ್ರ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಈ ಸಂಬಂಧ ಮನೆಯವರನ್ನು ಕರೆದು ಮಾತುಕತೆ ಮಾಡಿದ್ದೇವೆ. ಅವರೆಲ್ಲ ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಎಂದು ಪ್ರಾಂಶುಪಾಲರಿಂದ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ, ವಿದ್ಯಾರ್ಥಿಗಳು, ನಮಗೆ ಕ್ಲಾಸ್ ಒಳಗೆ ಕೂರಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಪೋಷಕರು ಬಂದು ಮಾತನಾಡಿದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ. ನಮ್ಮ ಕಲಿಕೆಗೆ ಇದರಿಂದ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಇದನ್ನೂ ಓದಿ: ಬೇಷರತ್ ಆಗಿ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ; ಉಡುಪಿ ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಇದನ್ನೂ ಓದಿ: ಉಡುಪಿ ಕೃಷ್ಣಮಠದ ಸ್ವಾಧೀನಕ್ಕೆ ಯತ್ನಿಸಿತ್ತು ಸಿದ್ದರಾಮಯ್ಯ ಸರ್ಕಾರ: ಪ್ರಮೋದ್ ಮಧ್ವರಾಜ್

Published On - 5:12 pm, Fri, 31 December 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?