AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು
ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಆಯೇಷಾ ಬಾನು|

Updated on: Aug 20, 2023 | 9:08 AM

Share

ಉಡುಪಿ, ಆ.30: ಸುಮಾರು ಏಳು ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಶಾಲಾ ಶಿಕ್ಷಕನನ್ನು(School Teacher) ಸದ್ಯ ಅಮಾನತುಗೊಳಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಂಪಾರು ದಿನಕರಶೆಟ್ಟಿ ಎಂಬುವವರು ಸುಮಾರು 7 ವರ್ಷಗಳಿಂದ ಶಾಲೆಗೆ ಬಾರದೆ, ಮಕ್ಕಳಿಗೆ ಪಾಠ ಮಾಡದೆ ಮನೆಯಲ್ಲೇ ಕುಳಿತು ಸಂಬಳ ಪಡೆಯುತ್ತಿದ್ದರು. ಸದ್ಯ ಈಗ ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆಗಿರುವ ಅಂಪಾರು ದಿನಕರಶೆಟ್ಟಿ ಅವರು ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರೂ ಆಗಿದ್ದಾರೆ. ತಮ್ಮ ಮೇಲೆ ಬೆಟ್ಟದಷ್ಟು ಜವಾಬ್ದಾರಿ ಇದ್ದರೂ 2017 ರಿಂದ ಶಾಲೆಯ ಕಡೆಗೆ ಮುಖ ತೋರಿಸದೆ ಸರಕಾರಿ ಸಂಬಳ ಪಡೆಯುತ್ತಿದ್ದರು. ಅನಾರೋಗ್ಯದ ನೆಪ ಹೇಳಿ ಶಾಲೆಗೆ ಹಾಜರಾಗದೆ, ಬೇರೆಯೇ ವ್ಯವಹಾರ ಮಾಡಿಕೊಂಡಿದ್ದರು. ಸದ್ಯ ಈ ಬಗ್ಗೆ ತಿಳಿಯುತ್ತಿದ್ದಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ಇನ್ನು ಸಹಶಿಕ್ಷಕ ಅನಾರೋಗ್ಯದಿಂದ ರಜೆಯಲ್ಲಿದ್ದ ಕಾರಣ ಇತರೆ ಶಿಕ್ಷಕರು ಮಕ್ಕಳಿಗೆ ತಮ್ಮ ಪಾಠದ ಜೊತೆಗೆ ರಜೆಯಲ್ಲಿದ್ದ ಶಿಕ್ಷಕನ ಪಾಠವನ್ನೂ ವರ್ಷಗಳ ಕಾಲ ಹೇಳಿಕೊಟ್ಟಿದ್ದಾರೆ. ಈ ವಿಚಾರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕ್ರಮ ಕೈಗೊಂಡಿಲ್ಲ. ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ರು. ಈ ವೇಳೆ ದಿನಕರಶೆಟ್ಟಿ ಗೈರಾಗಿದ್ದು ಶಿಕ್ಷಕನ ವರ್ತನೆ ನೋಡಿ ಶಿಕ್ಷಕ ಅಂಪಾರು ದಿನಕರಶೆಟ್ಟಿ ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!