AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು
ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 20, 2023 | 9:08 AM

Share

ಉಡುಪಿ, ಆ.30: ಸುಮಾರು ಏಳು ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಶಾಲಾ ಶಿಕ್ಷಕನನ್ನು(School Teacher) ಸದ್ಯ ಅಮಾನತುಗೊಳಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಂಪಾರು ದಿನಕರಶೆಟ್ಟಿ ಎಂಬುವವರು ಸುಮಾರು 7 ವರ್ಷಗಳಿಂದ ಶಾಲೆಗೆ ಬಾರದೆ, ಮಕ್ಕಳಿಗೆ ಪಾಠ ಮಾಡದೆ ಮನೆಯಲ್ಲೇ ಕುಳಿತು ಸಂಬಳ ಪಡೆಯುತ್ತಿದ್ದರು. ಸದ್ಯ ಈಗ ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆಗಿರುವ ಅಂಪಾರು ದಿನಕರಶೆಟ್ಟಿ ಅವರು ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರೂ ಆಗಿದ್ದಾರೆ. ತಮ್ಮ ಮೇಲೆ ಬೆಟ್ಟದಷ್ಟು ಜವಾಬ್ದಾರಿ ಇದ್ದರೂ 2017 ರಿಂದ ಶಾಲೆಯ ಕಡೆಗೆ ಮುಖ ತೋರಿಸದೆ ಸರಕಾರಿ ಸಂಬಳ ಪಡೆಯುತ್ತಿದ್ದರು. ಅನಾರೋಗ್ಯದ ನೆಪ ಹೇಳಿ ಶಾಲೆಗೆ ಹಾಜರಾಗದೆ, ಬೇರೆಯೇ ವ್ಯವಹಾರ ಮಾಡಿಕೊಂಡಿದ್ದರು. ಸದ್ಯ ಈ ಬಗ್ಗೆ ತಿಳಿಯುತ್ತಿದ್ದಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ಇನ್ನು ಸಹಶಿಕ್ಷಕ ಅನಾರೋಗ್ಯದಿಂದ ರಜೆಯಲ್ಲಿದ್ದ ಕಾರಣ ಇತರೆ ಶಿಕ್ಷಕರು ಮಕ್ಕಳಿಗೆ ತಮ್ಮ ಪಾಠದ ಜೊತೆಗೆ ರಜೆಯಲ್ಲಿದ್ದ ಶಿಕ್ಷಕನ ಪಾಠವನ್ನೂ ವರ್ಷಗಳ ಕಾಲ ಹೇಳಿಕೊಟ್ಟಿದ್ದಾರೆ. ಈ ವಿಚಾರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕ್ರಮ ಕೈಗೊಂಡಿಲ್ಲ. ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ರು. ಈ ವೇಳೆ ದಿನಕರಶೆಟ್ಟಿ ಗೈರಾಗಿದ್ದು ಶಿಕ್ಷಕನ ವರ್ತನೆ ನೋಡಿ ಶಿಕ್ಷಕ ಅಂಪಾರು ದಿನಕರಶೆಟ್ಟಿ ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?