AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು
ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಆಯೇಷಾ ಬಾನು|

Updated on: Aug 20, 2023 | 9:08 AM

Share

ಉಡುಪಿ, ಆ.30: ಸುಮಾರು ಏಳು ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಶಾಲಾ ಶಿಕ್ಷಕನನ್ನು(School Teacher) ಸದ್ಯ ಅಮಾನತುಗೊಳಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಂಪಾರು ದಿನಕರಶೆಟ್ಟಿ ಎಂಬುವವರು ಸುಮಾರು 7 ವರ್ಷಗಳಿಂದ ಶಾಲೆಗೆ ಬಾರದೆ, ಮಕ್ಕಳಿಗೆ ಪಾಠ ಮಾಡದೆ ಮನೆಯಲ್ಲೇ ಕುಳಿತು ಸಂಬಳ ಪಡೆಯುತ್ತಿದ್ದರು. ಸದ್ಯ ಈಗ ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆಗಿರುವ ಅಂಪಾರು ದಿನಕರಶೆಟ್ಟಿ ಅವರು ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರೂ ಆಗಿದ್ದಾರೆ. ತಮ್ಮ ಮೇಲೆ ಬೆಟ್ಟದಷ್ಟು ಜವಾಬ್ದಾರಿ ಇದ್ದರೂ 2017 ರಿಂದ ಶಾಲೆಯ ಕಡೆಗೆ ಮುಖ ತೋರಿಸದೆ ಸರಕಾರಿ ಸಂಬಳ ಪಡೆಯುತ್ತಿದ್ದರು. ಅನಾರೋಗ್ಯದ ನೆಪ ಹೇಳಿ ಶಾಲೆಗೆ ಹಾಜರಾಗದೆ, ಬೇರೆಯೇ ವ್ಯವಹಾರ ಮಾಡಿಕೊಂಡಿದ್ದರು. ಸದ್ಯ ಈ ಬಗ್ಗೆ ತಿಳಿಯುತ್ತಿದ್ದಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ವೈದ್ಯರ ಕೊರತೆ; ಕೊಟ್ಯಾಂತರ ಹಣ ಖರ್ಚು ಮಾಡಿ ನಿರ್ಮಾಣವಾದ ಶಿವಾಜಿನಗರದ ಸೂಪರ್ ಸ್ಪೆಷಲಿಟಿ ಚರಕ ಆಸ್ಪತ್ರೆಗೆ ಬೀಗ

ಇನ್ನು ಸಹಶಿಕ್ಷಕ ಅನಾರೋಗ್ಯದಿಂದ ರಜೆಯಲ್ಲಿದ್ದ ಕಾರಣ ಇತರೆ ಶಿಕ್ಷಕರು ಮಕ್ಕಳಿಗೆ ತಮ್ಮ ಪಾಠದ ಜೊತೆಗೆ ರಜೆಯಲ್ಲಿದ್ದ ಶಿಕ್ಷಕನ ಪಾಠವನ್ನೂ ವರ್ಷಗಳ ಕಾಲ ಹೇಳಿಕೊಟ್ಟಿದ್ದಾರೆ. ಈ ವಿಚಾರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕ್ರಮ ಕೈಗೊಂಡಿಲ್ಲ. ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ರು. ಈ ವೇಳೆ ದಿನಕರಶೆಟ್ಟಿ ಗೈರಾಗಿದ್ದು ಶಿಕ್ಷಕನ ವರ್ತನೆ ನೋಡಿ ಶಿಕ್ಷಕ ಅಂಪಾರು ದಿನಕರಶೆಟ್ಟಿ ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?