AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ಮೊದಲ ಹಂತದ ತನಿಖೆ ಅಂತ್ಯ, ಆ ಒಂದು ವರದಿಗೆ ಕಾಯುತ್ತಿರುವ ಸಿಐಡಿ

ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿರುವ ಸಿಐಡಿ ತಂಡ ಸಂತ್ರಸ್ತೆ ಮತ್ತು ಮೂವರು ಅರೋಪಿಯನ್ನು ಭೇಟಿಯಾಗಿ ವಿಚಾರಣೆ ನಡೆಸಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ಮೊದಲ ಹಂತದ ತನಿಖೆ ಅಂತ್ಯ, ಆ ಒಂದು ವರದಿಗೆ ಕಾಯುತ್ತಿರುವ ಸಿಐಡಿ
ಉಡುಪಿಯಲ್ಲಿ ಸಿಐಡಿ ಅಧಿಕಾರಿಗಳು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 16, 2023 | 11:42 AM

Share

ಉಡುಪಿ, ಆ.16: ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು(Udupi Washroom Video Case) ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ(CID) ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.

ಉಡುಪಿಯ ಕಾಲೇಜಿನಲ್ಲಿ ಜುಲೈ 18ರಂದು ನಡೆದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಈ ಮೊದಲು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸ್ ತನಿಖೆ ವಿಚಾರವಾಗಿ ಒಂದಿಷ್ಟು ಅಪಸ್ವರಗಳು ಬಂದ ಹಿನ್ನೆಲೆಯಲ್ಲಿ ತನಿಕಾ ಅಧಿಕಾರಿಗಳನ್ನು ಬದಲಾಯಿಸಲಾಗಿತ್ತು. ಆದರೂ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡರುಗಳು ವಿಶೇಷ ಎಸ್ಐಟಿ ತಂಡ ರಚಿಸಿ ತನಿಖೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಸಿಐಡಿ ಗೆ ಪ್ರಕರಣವನ್ನ ಹಸ್ತಾಂತರಿಸಿದ್ದು ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿರುವ ಸಿಐಡಿ ತಂಡ ಸಂತ್ರಸ್ತೆ ಮತ್ತು ಮೂವರು ಅರೋಪಿಯನ್ನು ಭೇಟಿಯಾಗಿ ವಿಚಾರಣೆ ನಡೆಸಿದೆ. ಘಟನೆಯ ಬಗ್ಗೆ ಕೂಲಂಕುಶ ತನಿಕೆ ನಡೆಸುವ ಹಿನ್ನಲೆಯಲ್ಲಿ ಘಟನೆಯ ಮರು ಸೃಷ್ಟಿಯನ್ನು ಮಾಡಿದ್ದ ಸಿಐಡಿ ತಂಡ ಪ್ಲಾಸ್ಟಿಕ್ ಬೊಂಬೆಗಳನ್ನ ಬಳಸಿ ಕಾಲೇಜಿನ ಶೌಚಾಲಯದಲ್ಲಿ ಮತ್ತೆ ಘಟನೆಯನ್ನು ಮರು ಸೃಷ್ಟಿ ಮಾಡಿತ್ತು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಲ್ಲದೆ ಸರ್ಚ್ ವಾರೆಂಟ್ ಪಡೆದು ಆಪಾದಿತರ ಮನೆಯನ್ನು ಸರ್ಚ್ ಮಾಡಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಪ್ರತಿಯೊಂದು ಅಂಕಿ ಅಂಶಗಳನ್ನ ಮತ್ತು ಘಟನಾವಳಿಗಳನ್ನ ಕೂಲಂಕುಶವಾಗಿ ಪರಿಶೀಲನೆ ನಡೆಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಮತ್ತು ಎಸ್ ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ತನಿಖಾದಿಕಾರಿ ಡಿವೈಎಸ್ಪಿ ಅಂಜುಮಾಲ ಅವರು ಒಂದು ವಾರದಿಂದ ಉಡುಪಿಯಲ್ಲಿ ಇದ್ದು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸದ್ಯ ಬೆಂಗಳೂರಿಗೆ ತೆರಳಿದ್ದಾರೆ.

ಒಟ್ಟಾರೆಯಾಗಿ ಸಿಐಡಿ ಒಂದು ಹಂತದ ತನಿಖೆ ಮುಕ್ತಾಯಗೊಳಿಸಿದ್ದು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದ ಮೊಬೈಲ್ ನ ಎಫ್​ಎಸ್​ಎಲ್ ವರದಿಗಾಗಿ ಸಿಐಡಿ ತನಿಖಾ ತಂಡ ಕಾಯುತ್ತಿದೆ. ವಿದ್ಯಾರ್ಥಿನಿಯರಿಂದ ಪಡೆಯಲಾಗಿದ್ದ ಮೂರು ಮೊಬೈಲ್​ಗಳ ಎಫ್​ಎಸ್​ಎಲ್ ವರದಿ ಬಂದ ತಕ್ಷಣ ಪ್ರಕರಣದ ಸತ್ಯತೆ ಹೊರಗೆ ಬೀಳುವ ಸಾಧ್ಯತೆ ದಟ್ಟವಾಗಿದೆ.

ಉಡುಪಿಗೆ ಸಂಬಂಧಪಟ್ಟ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:35 am, Wed, 16 August 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ