AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ, ಕೇಳಲು ಹೋದ ಮಾಲೀಕಿ ಮೇಲೆ ಹಲ್ಲೆ

ಉಡುಪಿ ನಗರದ KSRTC ಬಸ್ ನಿಲ್ದಾಣ ಬಳಿ ಇರುವ ಶಾಂಭವಿ ಫಾರ್ಚೂನ್ ಹೊಟೇಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ಮಾಲೀಕಿ ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದು ಮಾಲೀಕಿ ಮೇಲೆಯೇ ದೌಜನ್ಯ ಎಸಗಲಾಗಿದೆ.

ಉಡುಪಿ: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ, ಕೇಳಲು ಹೋದ ಮಾಲೀಕಿ ಮೇಲೆ ಹಲ್ಲೆ
ಮಾಲೀಕಿ ಮೇಲೆ ಹಲ್ಲೆ
Follow us
TV9 Web
| Updated By: ಆಯೇಷಾ ಬಾನು

Updated on:Jan 14, 2024 | 12:51 PM

ಉಡುಪಿ, ಜ.14: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಸಲಾಗುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ಹೋಟೆಲ್ (hotel) ಲೀಸ್ ವಾಪಸ್ ಪಡೆಯಲು ಹೋದ ಮಾಲೀಕಿ ಮೇಲೆಯೇ ದೌರ್ಜನ್ಯ (Assault) ಎಸಗಿರುವ ಘಟನೆ ನಡೆದಿದೆ. ಉಡುಪಿ (Udupi) ನಗರದ KSRTC ಬಸ್ ನಿಲ್ದಾಣ ಬಳಿ ಇರುವ ಶಾಂಭವಿ ಫಾರ್ಚೂನ್ ಹೊಟೇಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ಮಾಲೀಕಿ ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದು ಮಾಲೀಕಿ ಮೇಲೆಯೇ ದೌಜನ್ಯ ಎಸಗಲಾಗಿದೆ.

2021ರಲ್ಲಿ ದಿನೇಶ್ ಶೆಟ್ಟಿ ಎಂಬುವರಿಗೆ ಮಮತಾ ಶೆಟ್ಟಿ ಅವರು 10 ವರ್ಷಕ್ಕೆ ಹೋಟೆಲ್ ಲೀಸ್​ಗೆ ನೀಡಿದ್ದರು. ಅಗ್ರಿಮೆಂಟ್ ಕೂಡ ಮಾಡಲಾಗಿತ್ತು. ಆದರೆ ದಿನೇಶ್ ಶೆಟ್ಟಿ ಹೋಟೆಲ್ ಕಟ್ಟಡವನ್ನು ದುರುಪಯೋಗ ಪಡಿಸಿಕೊಂಡಿದ್ದ. ಹೋಟೆಲ್ ರೂಂಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಕಳೆದ ವರ್ಷ ವೇಶ್ಯಾವಾಟಿಕೆ ಹಿನ್ನೆಲೆ ಪೊಲೀಸ್ ದಾಳಿ ನಡೆದಿತ್ತು. ಹೀಗಾಗಿ ಡಿಸೆಂಬರ್ 22 ರಂದು ಮಮತಾ ಶೆಟ್ಟಿ ಅವರು ಹೋಟೆಲ್​ಗೆ ಹೋಗಿ ಲೀಸ್ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿ ಹೋಟೆಲ್ ವಾಪಸ್ ನೀಡುವಂತೆ ದಿನೇಶ್ ಶೆಟ್ಟಿಗೆ ಸೂಚಿಸಿದ್ದರು. ಇದರಿಂದ ಕೋಪಗೊಂಡ ದಿನೇಶ್ ಶೆಟ್ಟಿ ಹೋಟಲ್​ನಲ್ಲೇ ಹಲ್ಲೆ ಮಾಡಿದ್ದಾನೆ.

ಮಗನೊಂದಿಗೆ ತೆರಳಿದ್ದ ಮಮತಾ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾನೆ. ಹೋಟೆಲ್​ನಲ್ಲಿರುವ ಸಿಸಿಟಿವಿಯಲ್ಲಿಯೂ ಹಲ್ಲೆ ದೃಶ್ಯ ಸೆರೆಯಾಗಿದೆ. ದಿನೇಶ್ ಶೆಟ್ಟಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೋಟೆಲ್​ ವಾಪಸ್ ಕೊಡಿಸುವಂತೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಎಫ್​ಐಆರ್ ಆದ್ರೂ ಸೂಕ್ತ ತನಿಖೆ ನಡೆದಿಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಟ್ರಾಕ್ಟರ್ ನಿಲ್ಲಿಸುವ ವಿಚಾರಕ್ಕೆ ಮಾರಾಮಾರಿ

ಪಾರ್ಕಿಂಗ್ ವಿಚಾರಕ್ಕೆ ಸಣ್ಣಪುಟ್ಟ ಗಲಾಟೆಗಳಾಗೋದು ಸಹಜ. ಆದ್ರೆ, ಈ ಗ್ರಾಮದಲ್ಲಿ ದೊಡ್ಡ ಮಾರಾಮಾರಿಯೇ ನಡೆದು ಹೋಗಿದೆ. 40 ರಿಂದ 50 ಜನರ ಗುಂಪುಗಳ ಮಧ್ಯೆ ಈ ಗಲಾಟೆಯಾಗಿದೆ. ಟ್ರ್ಯಾಕ್ಟರ್ ನಿಲ್ಲಿಸೋ ವಿಚಾರಕ್ಕೆ ಮೊದಲು ಇಬ್ಬರ ಮಧ್ಯೆ ಗಲಾಟೆಯಾಗಿದೆ. ನಂತ್ರ ಎರಡು ಕಡೆಯವರು ಕಟ್ಟಿಗೆ ಹಿಡಿದು ಹೊಡೆದಾಡಿದ್ದಾರೆ. ಈ ಘಟನೆ ನಡೆದಿರೋದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾರಾಮಾರಿಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:47 pm, Sun, 14 January 24

ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ