AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ, ಕೇಳಲು ಹೋದ ಮಾಲೀಕಿ ಮೇಲೆ ಹಲ್ಲೆ

ಉಡುಪಿ ನಗರದ KSRTC ಬಸ್ ನಿಲ್ದಾಣ ಬಳಿ ಇರುವ ಶಾಂಭವಿ ಫಾರ್ಚೂನ್ ಹೊಟೇಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ಮಾಲೀಕಿ ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದು ಮಾಲೀಕಿ ಮೇಲೆಯೇ ದೌಜನ್ಯ ಎಸಗಲಾಗಿದೆ.

ಉಡುಪಿ: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ, ಕೇಳಲು ಹೋದ ಮಾಲೀಕಿ ಮೇಲೆ ಹಲ್ಲೆ
ಮಾಲೀಕಿ ಮೇಲೆ ಹಲ್ಲೆ
TV9 Web
| Edited By: |

Updated on:Jan 14, 2024 | 12:51 PM

Share

ಉಡುಪಿ, ಜ.14: ಲೀಸ್​ಗೆ ಕೊಟ್ಟ ಹೋಟೆಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಸಲಾಗುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ಹೋಟೆಲ್ (hotel) ಲೀಸ್ ವಾಪಸ್ ಪಡೆಯಲು ಹೋದ ಮಾಲೀಕಿ ಮೇಲೆಯೇ ದೌರ್ಜನ್ಯ (Assault) ಎಸಗಿರುವ ಘಟನೆ ನಡೆದಿದೆ. ಉಡುಪಿ (Udupi) ನಗರದ KSRTC ಬಸ್ ನಿಲ್ದಾಣ ಬಳಿ ಇರುವ ಶಾಂಭವಿ ಫಾರ್ಚೂನ್ ಹೊಟೇಲ್​ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ಮಾಲೀಕಿ ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದು ಮಾಲೀಕಿ ಮೇಲೆಯೇ ದೌಜನ್ಯ ಎಸಗಲಾಗಿದೆ.

2021ರಲ್ಲಿ ದಿನೇಶ್ ಶೆಟ್ಟಿ ಎಂಬುವರಿಗೆ ಮಮತಾ ಶೆಟ್ಟಿ ಅವರು 10 ವರ್ಷಕ್ಕೆ ಹೋಟೆಲ್ ಲೀಸ್​ಗೆ ನೀಡಿದ್ದರು. ಅಗ್ರಿಮೆಂಟ್ ಕೂಡ ಮಾಡಲಾಗಿತ್ತು. ಆದರೆ ದಿನೇಶ್ ಶೆಟ್ಟಿ ಹೋಟೆಲ್ ಕಟ್ಟಡವನ್ನು ದುರುಪಯೋಗ ಪಡಿಸಿಕೊಂಡಿದ್ದ. ಹೋಟೆಲ್ ರೂಂಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಕಳೆದ ವರ್ಷ ವೇಶ್ಯಾವಾಟಿಕೆ ಹಿನ್ನೆಲೆ ಪೊಲೀಸ್ ದಾಳಿ ನಡೆದಿತ್ತು. ಹೀಗಾಗಿ ಡಿಸೆಂಬರ್ 22 ರಂದು ಮಮತಾ ಶೆಟ್ಟಿ ಅವರು ಹೋಟೆಲ್​ಗೆ ಹೋಗಿ ಲೀಸ್ ಅಗ್ರಿಮೆಂಟ್ ಕ್ಯಾನ್ಸಲ್ ಮಾಡಿ ಹೋಟೆಲ್ ವಾಪಸ್ ನೀಡುವಂತೆ ದಿನೇಶ್ ಶೆಟ್ಟಿಗೆ ಸೂಚಿಸಿದ್ದರು. ಇದರಿಂದ ಕೋಪಗೊಂಡ ದಿನೇಶ್ ಶೆಟ್ಟಿ ಹೋಟಲ್​ನಲ್ಲೇ ಹಲ್ಲೆ ಮಾಡಿದ್ದಾನೆ.

ಮಗನೊಂದಿಗೆ ತೆರಳಿದ್ದ ಮಮತಾ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾನೆ. ಹೋಟೆಲ್​ನಲ್ಲಿರುವ ಸಿಸಿಟಿವಿಯಲ್ಲಿಯೂ ಹಲ್ಲೆ ದೃಶ್ಯ ಸೆರೆಯಾಗಿದೆ. ದಿನೇಶ್ ಶೆಟ್ಟಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೋಟೆಲ್​ ವಾಪಸ್ ಕೊಡಿಸುವಂತೆ ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಎಫ್​ಐಆರ್ ಆದ್ರೂ ಸೂಕ್ತ ತನಿಖೆ ನಡೆದಿಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಟ್ರಾಕ್ಟರ್ ನಿಲ್ಲಿಸುವ ವಿಚಾರಕ್ಕೆ ಮಾರಾಮಾರಿ

ಪಾರ್ಕಿಂಗ್ ವಿಚಾರಕ್ಕೆ ಸಣ್ಣಪುಟ್ಟ ಗಲಾಟೆಗಳಾಗೋದು ಸಹಜ. ಆದ್ರೆ, ಈ ಗ್ರಾಮದಲ್ಲಿ ದೊಡ್ಡ ಮಾರಾಮಾರಿಯೇ ನಡೆದು ಹೋಗಿದೆ. 40 ರಿಂದ 50 ಜನರ ಗುಂಪುಗಳ ಮಧ್ಯೆ ಈ ಗಲಾಟೆಯಾಗಿದೆ. ಟ್ರ್ಯಾಕ್ಟರ್ ನಿಲ್ಲಿಸೋ ವಿಚಾರಕ್ಕೆ ಮೊದಲು ಇಬ್ಬರ ಮಧ್ಯೆ ಗಲಾಟೆಯಾಗಿದೆ. ನಂತ್ರ ಎರಡು ಕಡೆಯವರು ಕಟ್ಟಿಗೆ ಹಿಡಿದು ಹೊಡೆದಾಡಿದ್ದಾರೆ. ಈ ಘಟನೆ ನಡೆದಿರೋದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾರಾಮಾರಿಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:47 pm, Sun, 14 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್