AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಖಾಸಗಿ ಬಸ್​ಗೆ ಕಾರು ಡಿಕ್ಕಿ: ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಖಾಸಗಿ ಬಸ್​ಗೆ ಅಭಿಮುಖವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದು, ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವಂತಹ ಘಟನೆ ಹೆಬ್ರಿ  ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ನಡೆದಿದೆ.

Udupi News: ಖಾಸಗಿ ಬಸ್​ಗೆ ಕಾರು ಡಿಕ್ಕಿ: ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ
ಮೃತ ಶಿಕ್ಷಕರು
ಗಂಗಾಧರ​ ಬ. ಸಾಬೋಜಿ
|

Updated on:Jun 11, 2023 | 6:01 PM

Share

ಉಡುಪಿ: ಖಾಸಗಿ ಬಸ್​ಗೆ ಅಭಿಮುಖವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಇಬ್ಬರು ಶಿಕ್ಷಕರು (teachers) ಸಾವನ್ನಪ್ಪಿದ್ದು, ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವಂತಹ ಘಟನೆ ಹೆಬ್ರಿ  ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಆಫೀಸ್​ನ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ ಮತ್ತು ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕ ಸೋಮ ಶೇಖರ್​ ಮೃತ ಶಿಕ್ಷಕರು.  ಗಂಭೀರ ಗಾಯಗೊಂಡಿರುವ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್​ರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವಾಗ, ಉಡುಪಿಯಿಂದ ಆಗುಂಬೆ ಹೋಗುತ್ತಿದ್ದ ಬಸ್​ಗೆ ಅಭಿಮುಖವಾಗಿ ಕಾರು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಬಸ್​ನ ಒಳಗೆ ಸಿಲುಕಿದ್ದ ಕಾರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Tumakuru News: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ, ತಮ್ಮ ನೀರುಪಾಲು

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ಇಣುಕಿ ನೋಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ನಡೆದಿದೆ. ನಿತಿನ್ ಬಂಧಿತ ಕಾಮುಕ. ಬಾಡಿಗೆ ಮನೆಯಲ್ಲಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಬಳಿಕ ಸ್ಥಳೀಯರು ನಿತೀನ್​ನನ್ನು ಹಿಡಿದು ಮಾರತ್​​ಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರತ್​​ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಹಲವು ಪೊಲೀಸರಿಗೆ ವಂಚಿಸಿದ್ದ ನಕಲಿ ಐಪಿಎಸ್ ಅರ್ಜುನ್ ಅರೆಸ್ಟ್

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ನಿತಿನ್ ಕಿಟಕಿಯಿಂದ ಆಗಾಗ ನೋಡುತ್ತಿದ್ದ. ಆದ್ರೆ, ಮಹಿಳೆ ಅದನ್ನು ಗಮನಿಸಿಲ್ಲ ಎನ್ನಲಾಗಿದೆ. ಆದ್ರೆ, ಇಂದು ಮತ್ತೆ ಇಣುಕಿ ನೋಡುತ್ತಿದ್ದಾಗ ಮಹಿಳೆ ನೋಡಿ ಕಿರುಚಿಕೊಂಡಿದ್ದಾಳೆ. ಬಳಿಕ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ನಿಟ್ಟೆ ಮೀನಾಕ್ಷಿ ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಯಲಹಂಕ ನ್ಯೂ ಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ವಿವೇಕ್​​(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Sun, 11 June 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ