AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Paryaya 2022: ಕೊರೊನಾ ಹಿನ್ನೆಲೆ ಸರಳ ಪರ್ಯಾಯ ಮಹೋತ್ಸವ; ಹೇಗಿರಲಿದೆ ಈ ಬಾರಿಯ ಉಡುಪಿ ಪರ್ಯಾಯ?

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ಬಾರಿ ಸರಳವಾಗಿ ಪರ್ಯಾಯೋತ್ಸವ ಆಚರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 251ನೇ ಪರ್ಯಾಯ ಮಹೋತ್ಸವ ಈ ಬಾರಿ ನಡೆಯುತ್ತಿದ್ದು ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ.

Udupi Paryaya 2022: ಕೊರೊನಾ ಹಿನ್ನೆಲೆ ಸರಳ ಪರ್ಯಾಯ ಮಹೋತ್ಸವ; ಹೇಗಿರಲಿದೆ ಈ ಬಾರಿಯ ಉಡುಪಿ ಪರ್ಯಾಯ?
Udupi Paryaya 2022
TV9 Web
| Updated By: ganapathi bhat|

Updated on: Jan 17, 2022 | 1:33 PM

Share

ಉಡುಪಿ: ದ್ವೈವಾರ್ಷಿಕ ಪರ್ಯಾಯ ಮಹೋತ್ಸವದ ಧಾರ್ಮಿಕ, ಸಾಂಪ್ರದಾಯಿಕ ಕಾರ್ಯಕ್ರಮಗಳು ಇಂದು (ಜನವರಿ 17) ಸಂಜೆಯಿಂದ ಆರಂಭವಾಗಿ (ಜನವರಿ 18) ನಾಳೆ ವರೆಗೆ ನಡೆಯಲಿದೆ. ಆದರೆ, ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ಬಾರಿ ಸರಳವಾಗಿ ಪರ್ಯಾಯೋತ್ಸವ ಆಚರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 251ನೇ ಪರ್ಯಾಯ ಮಹೋತ್ಸವ ಈ ಬಾರಿ ನಡೆಯುತ್ತಿದ್ದು ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ.

ಜನವರಿ 18ರ ಮುಂಜಾನೆ ನಡೆಯಲಿರುವ ಪರ್ಯಾಯೋತ್ಸವವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನಡೆಸಲು ತೀರ್ಮಾನ ಮಾಡಲಾಗಿದೆ. ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಶ್ರೀಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ಸರ್ಕಾರದ ಮುಂಜಾಗ್ರತಾ ಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಲಾಗಿದೆ.

ಶ್ರೀಪಾದರ ಬಯಕೆಯಂತೆ ಸರಳ ಪರ್ಯಾಯ ಮಹೋತ್ಸವ ಮಾಡಲಾಗುವುದು. ಅಷ್ಟ ಮಠಾಧೀಶರು ಕೂರುವ ಮೇನೆ ಹೊತ್ತ ವಾಹನ, ಡೋಲು, ವಾದ್ಯ, ಚಂಡೆ, ಬಿರುದಾವಳಿ, ಪೌರಾಣಿಕ ದೃಶ್ಯದ ಟ್ಯಾಬ್ಲೋ ಮಾತ್ರ ಭಾಗಿ ಆಗಲಿದೆ. ಪರ್ಯಾಯ ದರ್ಬಾರ್​​ ಸಭೆಯಲ್ಲಿ ಸೀಮಿತ ಆಸನಗಳ ವ್ಯವಸ್ಥೆ ಮಾಡಲಾಗುವುದು. 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಭಾಗವಹಿಸಲು ಅವಕಾಶ ಎಂದು ತಿಳಿಸಲಾಗಿದೆ.

ಈ ಕಾರ್ಯಕ್ರಮಗಳನ್ನು ವಿವಿಧ ಟಿವಿ ವಾಹಿನಿಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಆದ್ದರಿಂದ ಭಕ್ತಾದಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ಸಹಕರಿಸಬೇಕೆಂದು ಭಕ್ತರು ಮತ್ತು ನಾಗರಿಕರಲ್ಲಿ ನಮ್ರರಾಗಿ ವಿನಂತಿಸುತ್ತೇವೆ ಎಂದು ಹೇಳಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ಬು ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ಜಿಲ್ಲಾಡಳಿತದೊಂದಿಗೆ ಪೂರ್ಣ ಸಹಕರಿಸಲಿದ್ದು ಜನತೆಯೂ ಸಹಕರಿಸುವಂತೆ ಮತ್ತೊಮ್ಮೆ ವಿನಂತಿಸುತ್ತೇವೆ ಎಂದು ಭಟ್ ತಿಳಿಸಲಾಗಿದೆ.

ಇದನ್ನೂ ಓದಿ: Udupi Paryaya 2022: ಉಡುಪಿ ಪರ್ಯಾಯ ಎಂದರೇನು? ಪರ್ಯಾಯ ಉತ್ಸವದ ಇತಿಹಾಸ, ಮಹತ್ವ ಏನು?

ಇದನ್ನೂ ಓದಿ: ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ ಸಮರ್ಪಣೆ

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ