AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು

ಸಮಯಪ್ರಜ್ಞೆ ತೋರಿದ ಗೆಳೆಯ ಆದಿತ್ಯ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾನೆ. ಕರ್ತವ್ಯ ಪ್ರಜ್ಞೆ ಮೆರೆದ ಅಲ್ಲಿನ ಪೊಲೀಸರು ಮಂಗಳೂರಿನಿಂದ ಉಡುಪಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ, ರೋಹನ್ ನನ್ನು ಬಚಾವು ಮಾಡಿದ್ದಾರೆ.

ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ;  ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು
ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು
TV9 Web
| Edited By: |

Updated on:Jun 02, 2022 | 9:03 PM

Share

ಉಡುಪಿ: ಉಡುಪಿ ನಗರ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಬಚಾವು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ರಾಜೇಶ್ ಜತ್ತನ ಎಂಬಾತ ಕೈ ಕೊಯ್ದುಕೊಂಡು ನರಳಾಡುತ್ತಿದ್ದ. ಕೈಕೊಯ್ದುಕೊಂಡ ರೋಹನ್ ಮಂಗಳೂರಿನ ಸ್ನೇಹಿತ ಆದಿತ್ಯನಿಗೆ ಕರೆ ಮಾಡಿದ್ದ.

ವಿಷಯ ತಿಳಿದು ಉಡುಪಿ ನಗರದಲ್ಲಿರುವ ಖಾಸಗಿ ಲಾಡ್ಜಿಗೆ ಪೊಲೀಸರು ದೌಡಾಯಿಸಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದು ಪೊಲೀಸರು ಸಕಾಲದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಉಡುಪಿ ನಗರ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ರೋಹನ್ ರಕ್ಷಣೆ ನಡೆದಿದೆ. ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ರೋಹನ್ ನನ್ನು ಬದುಕಿಸಿದ್ದಾರೆ.

ಸಮಯಪ್ರಜ್ಞೆ ತೋರಿದ ಗೆಳೆಯ ಆದಿತ್ಯ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾನೆ. ಕರ್ತವ್ಯ ಪ್ರಜ್ಞೆ ಮೆರೆದ ಅಲ್ಲಿನ ಪೊಲೀಸರು ಮಂಗಳೂರಿನಿಂದ ಉಡುಪಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ, ರೋಹನ್ ನನ್ನು ಬಚಾವು ಮಾಡಿದ್ದಾರೆ.

ಬೆಂಗಳೂರು: ಮಡಿವಾಳ ಚಾಕ್ಲೇಟ್ ಫ್ಯಾಕ್ಟರಿ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮಡಿವಾಳ ಬಳಿಯ ಚಾಕ್ಲೇಟ್ ಫ್ಯಾಕ್ಟರಿ ಬಳಿ ಅಪರಿಚಿತ ವ್ಯಕ್ತಿಯ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿ ಮೃತ ದೇಹ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸರು ಅಪರಿಚಿತ ವ್ಯಕ್ತಿ ಮೃತ ದೇಹದ ಗುರುತನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಡಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೃತ‌ದೇಹ ರವಾನೆ ಮಾಡಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಎಸಿಬಿ ಬಲೆಗೆ

ಮಂಗಳೂರು: ಕಾಮಗಾರಿ ಹಣ ಮಂಜೂರಾತಿಗೆ ಲಂಚದ ಬೇಡಿಕೆ ಇಟ್ಟಿದ್ದ ಮಂಗಳೂರು ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಅತಿಕ್ ರೆಹಮಾನ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಹಣ ಮಂಜೂರು ಮಾಡಲು 3000 ಹಣಕ್ಕೆ ಬೇಡಿಕೆ ಇಟ್ಟಿದ್ದ ಅತಿಕ್ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಂಗಳೂರಿನ ದೇರೇಬೈಲ್ ನಿವಾಸಿ ಜಯಲಿಂಗಪ್ಪ ಎಂಬವವರು ದೂರು ನೀಡಿದ್ದರು. ದಕ್ಷಿಣ ಕನ್ನಡ ಎಸಿಬಿ ಎಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಗುರುರಾಜ್, ಶ್ಯಾಮ್ ಸುಂದರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Published On - 8:46 pm, Thu, 2 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ