AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​​ ವಂಚಕರ ಮಾತು ನಂಬಿ 22 ಲಕ್ಷ ರೂಪಾಯಿ ಕಳೆದುಕೊಂಡ ನಿವೃತ್ತ ಬ್ಯಾಂಕ್ ನೌಕರ

Cyber Crime: ಇಡಿ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ ಸೈಬರ್ ವಂಚಕರು, ಮನಿ ಲಾಂಡರಿಂಗ್ ಪ್ರಕರಣದ ಬೆದರಿಕೆಯೊಡ್ಡಿ 76 ವರ್ಷದ ನಿವೃತ್ತ ಬ್ಯಾಂಕ್ ನೌಕರನಿಂದ 22 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ವಂಚಕರ ಮಾತನ್ನು ನಂಬಿದ ನಿವೃತ್ತ ಬ್ಯಾಂಕ್ ನೌಕರ, ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಬಳಿಕ ವಂಚನೆ ಅರಿಯುತ್ತಲೇ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಸೈಬರ್​​ ವಂಚಕರ ಮಾತು ನಂಬಿ 22 ಲಕ್ಷ ರೂಪಾಯಿ ಕಳೆದುಕೊಂಡ ನಿವೃತ್ತ ಬ್ಯಾಂಕ್ ನೌಕರ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on:Jul 19, 2026 | 12:47 PM

Share

ಮುಖ್ಯಾಂಶಗಳು

  • ಮನಿ ಲಾಂಡರಿಂಗ್ ಹೆಸರಲ್ಲಿ ಸೈಬರ್​​ ವಂಚಕರಿಂದ ಬೆದರಿಕೆ
  • ಸೈಬರ್​​ ಕ್ರೈಂ ಮತ್ತು ಜಾರಿ ನಿರ್ದೇಶನಾಲಯದ ಹೆಸರಲ್ಲಿ ಕರೆ
  • ನಿವೃತ್ತ ಬ್ಯಾಂಕ್ ನೌಕರನಿಗೆ 22 ಲಕ್ಷ ರೂಪಾಯಿ ಪಂಗನಾಮ

ಉಡುಪಿ, ಜುಲೈ, 19: ಡಿಜಿಟಲ್​​ ವಂಚನೆಗಳ ಬಗ್ಗೆ ಪೊಲೀಸರಿಂದ ಸಾಕಷ್ಟು ಜಾಗೃತಿ ಬಳಿಕವೂ, ದುರ್ದೈವವೆಂಬಂತೆ ವಂಚನೆ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಈ ನಡುವೆ ಸೈಬರ್ ಕ್ರೈಂ, ಜಾರಿ ನಿರ್ದೇಶನಾಲಯ (ED) ಹಾಗೂ ಸಿಬಿಐ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿದ್ದ ಸೈಬರ್​​ ವಂಚಕರು 76 ವರ್ಷದ ನಿವೃತ್ತ ಬ್ಯಾಂಕ್ ನೌಕರನಿಂದ ಬರೋಬ್ಬರಿ 22 ಲಕ್ಷ ರೂಪಾಯಿ ಲಪಟಾಯಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ವಂಚನೆ ನಡೆದಿದ್ದು ಹೇಗೆ?

ದೂರಿನಲ್ಲಿ ತಿಳಿಸಿರುವಂತೆ, ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ವಿಡಿಯೋ ಕರೆ ಬಂದಿದೆ. ಕರೆ ಸ್ವೀಕರಿಸಿದಾಗ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ತಾನು ಮುಂಬೈನ ಕೊಲಾಬಾ ಸೈಬರ್ ಕ್ರೈಂ ಘಟಕದ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಬಳಿಕ, ದೂರುದಾರರ ಹೆಸರಿನಲ್ಲಿ ಮುಂಬೈನಲ್ಲಿ ಬ್ಯಾಂಕ್ ಖಾತೆಯಿದ್ದು, ಆ ಖಾತೆ ಮೂಲಕ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ನಡೆದಿದೆ ಎಂದು ಆರೋಪಿಸಿ ಆತಂಕ ಸೃಷ್ಟಿಸಿದ್ದಾನೆ.

ಇದನ್ನೂ ಓದಿ: ಕರಾವಳಿ ಕಂಬಳ ಆಯೋಜಕರಿಗೆ ಸರ್ಕಾರ ಗುಡ್​ನ್ಯೂಸ್​​! 1.15 ಕೋಟಿ ರೂ ಅನುದಾನ ಘೋಷಣೆ

ಇದಾದ ನಂತರ ಜುಲೈ 11ರಿಂದ 16ರವರೆಗೆ, ಎಡಿಜಿಪಿ ವಿಶ್ವಾಸ್ , ಇಡಿ ಅಧಿಕಾರಿ ಅನಿಲ್ ಕುಮಾರ್ ಹಾಗೂ ಸೈಬರ್ ಅಧಿಕಾರಿಗಳೆಂದು ಹೇಳಿಕೊಂಡು ಹಲವು ಬಾರಿ ವಾಟ್ಸಾಪ್ ಕರೆ ಮಾಡಿ, ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಪರಿಶೀಲನೆಗಾಗಿ ಆರ್‌ಟಿಜಿಎಸ್ ಮೂಲಕ ವರ್ಗಾಯಿಸಬೇಕೆಂದು ನಂಬಿಸಿದ್ದಾರೆ. ಅವರ ಮಾತನ್ನು ನಂಬಿದ ನಿವೃತ್ತ ಬ್ಯಾಂಕ್ ನೌಕರ, ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗೆ ಒಟ್ಟು 22 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ.

ವಂಚನೆ ನಡೆದಿರುವುದು ಗೊತ್ತಾದ ಬಳಿಕ ಅವರು ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(D) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ಗಳು 114(4), 319(2), 308(2) ಮತ್ತು 318(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:46 pm, Sun, 19 July 26

Follow Us
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು