AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ

ರೀಲ್ಸ್​ ಮಾಡಲು ಹೋಗಿ ಉಡುಪಿಯ ಅರಶಿನಗುಂಡಿ ಜಲಪಾತಕ್ಕೆ ಬಿದ್ದಿರುವ ಭದ್ರಾವತಿಯ ಯುವಕ ಶರತ್​ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಇನ್ನು ಬಗ್ಗೆ ಶರತ್​ನ ಕುಟುಂಬಸ್ಥರು ಹಾಗೂ ಸ್ನೇಹಿತರು ಹೇಳಿದ್ದಿಷ್ಟು.

ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ
ಜಲಪಾತಕ್ಕೆ ಜಾರಿ ಬಿದ್ದು ಯುವಕ ನಾಪತ್ತೆ
H P
| Edited By: |

Updated on: Jul 25, 2023 | 12:25 PM

Share

ಉಡುಪಿ/ಶಿವಮೊಗ್ಗ, (ಜುಲೈ 25): ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಉಡುಪಿಯ(Udupi) ಅರಶಿನಗುಂಡಿ ಜಲಪಾತಕ್ಕೆ (Arsinagundi Falls) ಬಿದಿದ್ದ ಭದ್ರಾವತಿಯ ಯುವಕ ಶರತ್​ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. ಭದ್ರಾವತಿ ಮೂಲದ ಶರತ್​ ಸ್ನೇಹಿತರೊಂದಿಗೆ ನಿನ್ನೆ(ಜುಲೈ 24) ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತ ನೋಡಲು ಬಂದಿದ್ದು, ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಸ್ಥಳಕ್ಕೆ ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಯುವಕ ಪತ್ತೆಗೆ ಕಾರ್ಚರಣೆ ನಡೆಸಿದ್ದಾರೆ. ಆದ್ರೆ, ಇದುವರೆಗೂ ಸಹ ಪತ್ತೆಯಾಗಿಲ್ಲ. ಕಾರ್ಯಾಚರಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಳುಗು ತಜ್ಞರು, ಪೊಲೀಸರು ವಾಪಸ್​ ಆಗಿದ್ದಾರೆ.

ಇದನ್ನೂ ಓದಿ: Udupi News: ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು, ನೀರಿಗೆ ಬೀಳುತ್ತಿರುವ ದೃಶ್ಯ ಗೆಳೆಯನ ಮೊಬೈಲ್​ನಲ್ಲಿ ಸೆರೆ

ಇನ್ನು ಈ ಬಗ್ಗೆ Tv9ಗೆ ರತ್ ಕುಟುಂಬಸ್ಥರು ಮತ್ತು ಆತನ ಸ್ನೇಹಿತರು ಪ್ರತಿಕ್ರಿಯಿಸಿದ್ದು, ಎಷ್ಟು ಹುಡುಕಿದರು ಶರತ್ ಪತ್ತೆಯಾಗಲಿಲ್ಲ. ಸುಮಾರು 8 ಗಂಟೆಗಳ ಕಾರ್ಯಚರಣೆ ಮಾಡಿದರು ಸಿಕ್ಕಿಲ್ಲ. ಅರಿಶಿನಗುಂಡಿ ಜಲಪಾತಕ್ಕೆ ಹೋಗುವ ಮೊದಲು ಸಿಗುವ ತೊರೆಯನ್ನು ದಾಟಲು ಸಾಧ್ಯವಾಗಲಿಲ್ಲ. ಇದರಿಂದ ಕಾರ್ಯಚರಣೆ ನಡೆಸಲು ಸಾಧ್ಯವಾಗದೆ ವಾಪಸ್ಸು ಬಂದಿದ್ದೆವೆ ಎಂದಿದ್ದಾರೆ.

ಕೊಲ್ಲೂರು ದೇವಾಲಯ ಮತ್ತು ಹೊಸಂಗಡಿಗೆ ಹೋಗುತ್ತೆವೆ ಎಂದು ಮನೆಯಲ್ಲಿ ಹೇಳಿ ಬಂದಿದ್ದ. ಆದ್ರೆ, ಅರಿಶಿನಗುಂಡಿ ಜಲಪಾತಕ್ಕೆ ಹೋಗುತ್ತವೆ ಎಂದು ಹೇಳಿರಲಿಲ್ಲವಂತೆ. ಕೃಷಿ ಕೆಲಸ ಮಾಡಿಕೊಂಡಿದ್ದ ಶರತ್​, ಈಗ ಕೃಷಿ ಕೆಲಸ ಕಡಿಮೆ ಇದ್ದುದರಿಂದ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿದ್ದ. ಆದ್ರೆ, ದೇವಾಲಯಕ್ಕೆಂದು ಬಂದವರು ಈ ಜಲಪಾತಕ್ಕೆ ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು