AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ

ರೀಲ್ಸ್​ ಮಾಡಲು ಹೋಗಿ ಉಡುಪಿಯ ಅರಶಿನಗುಂಡಿ ಜಲಪಾತಕ್ಕೆ ಬಿದ್ದಿರುವ ಭದ್ರಾವತಿಯ ಯುವಕ ಶರತ್​ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಇನ್ನು ಬಗ್ಗೆ ಶರತ್​ನ ಕುಟುಂಬಸ್ಥರು ಹಾಗೂ ಸ್ನೇಹಿತರು ಹೇಳಿದ್ದಿಷ್ಟು.

ದೇವಾಲಯಕ್ಕೆಂದು ಬಂದು ಜಲಪಾತಕ್ಕೆ ಬಿದ್ದ ಯುವಕ: ಪತ್ತೆಯಾಗದ ಶರತ್ ಮೃತದೇಹ, ಕಾರ್ಯಚರಣೆ ಸ್ಥಗಿತ
ಜಲಪಾತಕ್ಕೆ ಜಾರಿ ಬಿದ್ದು ಯುವಕ ನಾಪತ್ತೆ
H P
| Edited By: |

Updated on: Jul 25, 2023 | 12:25 PM

Share

ಉಡುಪಿ/ಶಿವಮೊಗ್ಗ, (ಜುಲೈ 25): ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಉಡುಪಿಯ(Udupi) ಅರಶಿನಗುಂಡಿ ಜಲಪಾತಕ್ಕೆ (Arsinagundi Falls) ಬಿದಿದ್ದ ಭದ್ರಾವತಿಯ ಯುವಕ ಶರತ್​ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. ಭದ್ರಾವತಿ ಮೂಲದ ಶರತ್​ ಸ್ನೇಹಿತರೊಂದಿಗೆ ನಿನ್ನೆ(ಜುಲೈ 24) ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತ ನೋಡಲು ಬಂದಿದ್ದು, ಈ ವೇಳೆ ಬಂಡೆಗಳ ಮೇಲೆ ನಿಂತು ರೀಲ್ಸ್​ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ. ಸ್ಥಳಕ್ಕೆ ಮುಳುಗು ತಜ್ಞರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಯುವಕ ಪತ್ತೆಗೆ ಕಾರ್ಚರಣೆ ನಡೆಸಿದ್ದಾರೆ. ಆದ್ರೆ, ಇದುವರೆಗೂ ಸಹ ಪತ್ತೆಯಾಗಿಲ್ಲ. ಕಾರ್ಯಾಚರಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಳುಗು ತಜ್ಞರು, ಪೊಲೀಸರು ವಾಪಸ್​ ಆಗಿದ್ದಾರೆ.

ಇದನ್ನೂ ಓದಿ: Udupi News: ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು, ನೀರಿಗೆ ಬೀಳುತ್ತಿರುವ ದೃಶ್ಯ ಗೆಳೆಯನ ಮೊಬೈಲ್​ನಲ್ಲಿ ಸೆರೆ

ಇನ್ನು ಈ ಬಗ್ಗೆ Tv9ಗೆ ರತ್ ಕುಟುಂಬಸ್ಥರು ಮತ್ತು ಆತನ ಸ್ನೇಹಿತರು ಪ್ರತಿಕ್ರಿಯಿಸಿದ್ದು, ಎಷ್ಟು ಹುಡುಕಿದರು ಶರತ್ ಪತ್ತೆಯಾಗಲಿಲ್ಲ. ಸುಮಾರು 8 ಗಂಟೆಗಳ ಕಾರ್ಯಚರಣೆ ಮಾಡಿದರು ಸಿಕ್ಕಿಲ್ಲ. ಅರಿಶಿನಗುಂಡಿ ಜಲಪಾತಕ್ಕೆ ಹೋಗುವ ಮೊದಲು ಸಿಗುವ ತೊರೆಯನ್ನು ದಾಟಲು ಸಾಧ್ಯವಾಗಲಿಲ್ಲ. ಇದರಿಂದ ಕಾರ್ಯಚರಣೆ ನಡೆಸಲು ಸಾಧ್ಯವಾಗದೆ ವಾಪಸ್ಸು ಬಂದಿದ್ದೆವೆ ಎಂದಿದ್ದಾರೆ.

ಕೊಲ್ಲೂರು ದೇವಾಲಯ ಮತ್ತು ಹೊಸಂಗಡಿಗೆ ಹೋಗುತ್ತೆವೆ ಎಂದು ಮನೆಯಲ್ಲಿ ಹೇಳಿ ಬಂದಿದ್ದ. ಆದ್ರೆ, ಅರಿಶಿನಗುಂಡಿ ಜಲಪಾತಕ್ಕೆ ಹೋಗುತ್ತವೆ ಎಂದು ಹೇಳಿರಲಿಲ್ಲವಂತೆ. ಕೃಷಿ ಕೆಲಸ ಮಾಡಿಕೊಂಡಿದ್ದ ಶರತ್​, ಈಗ ಕೃಷಿ ಕೆಲಸ ಕಡಿಮೆ ಇದ್ದುದರಿಂದ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿದ್ದ. ಆದ್ರೆ, ದೇವಾಲಯಕ್ಕೆಂದು ಬಂದವರು ಈ ಜಲಪಾತಕ್ಕೆ ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ