AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ. ರಜಾ ದಿನಗಳಲ್ಲಿ ಗೆಳೆಯರ ಜೊತೆ ಅಣೆಕಟ್ಟೆಯಲ್ಲಿ ಈಜಲು ಹೋಗಿದ್ದ ಶ್ರೀಶ್ (13) ಮತ್ತು ಜಯಂತ್ (19) ಎಂಬ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 01, 2024 | 5:51 PM

Share

ಉಡುಪಿ, ಡಿಸೆಂಬರ್​ 01: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಶ್ರೀಶ(13), ಜಯಂತ್(19) ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆ 

ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಶಿಕ್ಷಕಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಇತ್ತೀಚೆಗೆ ನಡೆದಿತ್ತು. ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ ಸೌಮ್ಯ (40) ಆತ್ಮಹತ್ಯೆ ಮಾಡಿಕೊಂಡಿದ್ದ ಅಂಗನವಾಡಿ ಶಿಕ್ಷಕಿ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಬೆಳಿಗ್ಗೆ ಮಿಯ್ಯಾರಿನ ತನ್ನ ಮನೆಯ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದರು. ಕಳೆದ 20 ವರ್ಷಗಳಿಂದ ಮಿಯ್ಯಾರು ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದರು.

ಸೌಮ್ಯ ಅವರ ಪತಿ ಸಂತೋಷ್‌ ಪೂಜಾರಿ ಅವರು ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಸೌಮ್ಯ ಅವರು ತೀವ್ರ ಮನನೊಂದಿದ್ದು, ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ಮೂರು ದಿನದಿಂದ ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ.  ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ.

ಇದನ್ನೂ ಓದಿ: ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಇಂದು ಕೃಷಿ ಹೊಂಡದಲ್ಲಿ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:49 pm, Sun, 1 December 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!