AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಎಚ್​ಪಿ ಶೌರ್ಯ ಯಾತ್ರೆ, ಶರಣ್ ಪಂಪ್​ವೆಲ್​ಗೆ ಉಡುಪಿ ಪ್ರವೇಶ ನಿರ್ಬಂಧ

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್​ವೆಲ್​ ಅವರು ಷರತ್ತು ಬದ್ಧ ಜಾಮೀನನ ಮೇಲೆ ಹೊರಗಿದ್ದಾರೆ. ಇದೀಗ ನಡೆಯಲಿರುವ ಹಿಂದೂ ಸಮಾವೇಶಕ್ಕೆ ಆಗಮಿಸಿ ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಹಿನ್ನೆಲೆ ಉಡುಪಿ ಜಿಲ್ಲೆಗೆ ಶರಣ್ ಪಂಪ್​ವೆಲ್ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ವಿಎಚ್​ಪಿ ಶೌರ್ಯ ಯಾತ್ರೆ, ಶರಣ್ ಪಂಪ್​ವೆಲ್​ಗೆ ಉಡುಪಿ ಪ್ರವೇಶ ನಿರ್ಬಂಧ
ಶರಣ್ ಪಂಪ್​ವೆಲ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 10, 2023 | 3:21 PM

Share

ಉಡುಪಿ, ಅ.10: ಚಿತ್ರದುರ್ಗದಲ್ಲಿ ಆರಂಭವಾದ ವಿಶ್ವ ಹಿಂದೂ ಪರಿಷತ್- ಬಜರಂಗದಳ (VHP) ಬೃಹತ್ ಶೌರ್ಯ ಯಾತ್ರೆಯು ಉಡುಪಿಯಲ್ಲಿ ನಡೆಯುವು ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಳ್ಳಲಿದೆ. ಆದರೆ, ಈ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆ ವಿಎಚ್​ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​ವೆಲ್ (Sharan Pumpwell) ಅವರಿಗೆ ಉಡುಪಿ (Udupi) ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ವಿಎಚ್​ಪಿ ಅಸ್ತಿತ್ವಕ್ಕೆ ಬಂದು 60 ವರ್ಷ ಪೂರ್ಣ ಹಿನ್ನೆಲೆ ಚಿತ್ರದುರ್ಗದಿಂದ ಆರಂಭಿಸಲಾದ ಶೌರ್ಯ ಯಾತ್ರೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿದೆ. ಈ ಯಾತ್ರೆ ಇಂದು ಸಂಜೆ ಉಡುಪಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಳ್ಳಳಿದೆ. ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ.

ಇತ್ತೀಚೆಗಷ್ಟೇ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ಶೌಚಾಶಲಯದಲ್ಲಿರುವ ವಿಡಿಯೋ ಮಾಡಿದ ಪ್ರಕರಣ ಸಂಬಂಧದಲ್ಲಿ ಶರಣ್ ಪಂಪ್​ವೆಲ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ ಘಟನೆ ಮಂಗಳೂರಿನಲ್ಲಿ ಆಗುತ್ತಿದ್ದರೆ ದಂಗೆಕೋರರ ಮೈ ಹುಡಿಯಾಗುತ್ತಿತ್ತು: ಶರಣ್ ಪಂಪ್​ವೆಲ್

ಸದ್ಯ ಷರತ್ತುಬದ್ದ ಜಾಮೀನಿನಲ್ಲಿರುವ ಶರಣ್ ಪಂಪ್​ವೆಲ್ ಅವರು ಇಂದು ಮತ್ತೆ ಉಡುಪಿ ಸಮಾವೇಶದಲ್ಲಿ ಭಾಗಿಯಾದರೆ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇದೆ. ಒಂದೊಮ್ಮೆ ಜಾಮೀನು ನಿಯಮ ಉಲ್ಲಂಘನೆ ಮಾಡಿ ಭಾಷಣ ಮಾಡಿದರೆ ಅವರ ಬಂಧನ ಆಗುವ ಸಾಧ್ಯತೆಯೂ ಇದೆ.

ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಿ ಪೊಲೀಸರು ಆದೇಶ ಹೊರಡಿಸಿದ ಬಗ್ಗೆ ತಿಳಿದ ಶರಣ್ ಪಂಪ್​ವೆಲ್ ಅವರು ಹೆಜಮಾಡಿಯಿಂದ ಮಂಗಳೂರಿಗೆ ವಾಪಸ್ ಆಗಿದ್ದಾರೆ. ವೇದಿಕೆಯ ಅತಿಥಿಗಳ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಸಮಾವೇಶದಲ್ಲಿ ಶರಣ್ ಪಂಪ್​ವೆಲ್ ಅವರು ಭಾಗಿಯಾಗಬೇಕಿದ್ದರು.

ಜಿಲ್ಲೆ ಬಿಟ್ಟು ಹೊರ ಹೋಗದಂತೆ ಷರತ್ತು

ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣ ಸಂಬಂಧ ಶರಣ್ ಪಂಪ್​ವೆಲ್ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಸ್ವ ವಿಳಾಸದ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೊರ ಹೋಗದಂತೆ ಷರತ್ತು ವಿಧಿಸಿತ್ತು. ಅದರಂತೆ ಶರಣ್ ಪಂಪ್ ವೆಲ್ ಅವರಿಗೆ ಉಡುಪಿ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಉಡುಪಿ‌ ಪ್ರವೇಶ ಮಾಡಿದ್ದಲ್ಲಿ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್