AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಮಲ್ಪೆಯಲ್ಲಿ ಯುದ್ಧದ ಪ್ರಭಾವದಿಂದ ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಕರಾವಳಿ ಮೀನುಗಾರರು, ವಿಶೇಷವಾಗಿ ಮಹಿಳೆಯರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್‌ಗಳ ಮುಚ್ಚುಗಡೆ, ರಫ್ತು ಸ್ಥಗಿತ ಮತ್ತು LPG ವ್ಯತ್ಯಯದಿಂದ ಮೀನಿನ ದರ ಪಾತಾಳಕ್ಕೆ ಕುಸಿದಿದ್ದು, ಲಕ್ಷಾಂತರ ರೂಪಾಯಿ ವಹಿವಾಟು ಸ್ಥಗಿತಗೊಂಡಿದೆ. ಈ ಬಿಕ್ಕಟ್ಟು ಮೀನುಗಾರರ ಜೀವನಾಡಿಗೇ ಸವಾಲಾಗಿದೆ.

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Mar 21, 2026 | 3:14 PM

Share

ಉಡುಪಿ, ಮಾ.21: ಎಲ್ಲೋ ನಡೆಯುತ್ತಿರುವ ಯುದ್ಧವು ಕರಾವಳಿಯ ಮೀನುಗಾರರ ಬದುಕನ್ನು ಅಲ್ಲೋಲಕಲ್ಲೋಲಗೊಳಿಸಿದೆ. ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಇಂದು ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಪಾತಾಳಕ್ಕೆ ಕುಸಿದಿದೆ.

ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 100 ರಿಂದ 200 ರೂಪಾಯಿ ಇಳಿಕೆಯಾಗಿದೆ. ಮೀನುಗಾರ ಮಹಿಳೆಯರಿಗೆ ಅಸಲು ಕೂಡ ಸಿಗದಂತಾಗಿದ್ದು, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.ಅಡುಗೆ ಅನಿಲದ (LPG) ವ್ಯತ್ಯಯ ಮತ್ತು ಯುದ್ಧದ ಪ್ರಭಾವದಿಂದಾಗಿ ಪ್ರತಿದಿನ ಮೀನು ಊಟದ ಹೋಟೆಲ್‌ಗಳು ಮುಚ್ಚುತ್ತಿವೆ. ಹೋಟೆಲ್ ಮಾಲೀಕರು ಮಾರುಕಟ್ಟೆಗೆ ಬಾರದ ಕಾರಣ ಲಕ್ಷಾಂತರ ರೂಪಾಯಿ ಮೌಲ್ಯದ ವಹಿವಾಟು ಸ್ಥಗಿತಗೊಂಡಿದೆ.

ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೀನಿನ ದರ ಪಟ್ಟಿ (ಹಳೆ ದರ vs ಹೊಸ ದರ)

ಮೀನಿನ ಹೆಸರು ಹಳೆಯ ದರ (ಪ್ರತಿ ಕೆಜಿಗೆ) ಹೊಸ ದರ (ಪ್ರತಿ ಕೆಜಿಗೆ) ಇಳಿಕೆಯಾದ ಮೊತ್ತ
ಮಾಂಜಿ (ಪಾಂಫ್ರೆಟ್) ₹ 1550 ₹ 1400 ₹ 150
ಅಂಜಲ್ (ಸೀ ಫಿಶ್) ₹ 1100 ₹ 1000 ₹ 100
ದೊಡ್ಡ ಬಂಗುಡೆ ₹ 300 ₹ 260 ₹ 40
ಡಿಸ್ಕೋ ಮೀನು ₹ 180 ₹ 140 ₹ 40
ರಾಣಿ ಮೀನು ₹ 280 ₹ 245 ₹ 35
ಚಿಕ್ಕ ಬಂಗುಡೆ ₹ 210 ₹ 180 ₹ 30
ಸಿಗಡಿ (Prawns) ₹ 340 ₹ 320 ₹ 20

ಇಲ್ಲಿದೆ ನೋಡಿ ವಿಡಿಯೋ: 

ಮಲ್ಪೆಯಿಂದ ಕೇರಳದ ಹೋಟೆಲ್‌ಗಳಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಮೀನು ರಫ್ತಾಗುತ್ತಿತ್ತು. ಆದರೆ ಈಗ ಕೇರಳದಲ್ಲೂ ಹೋಟೆಲ್‌ಗಳು ಬಂದ್ ಆಗಿರುವುದರಿಂದ ಮೀನಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಇದು ಪರೋಕ್ಷವಾಗಿ ಮೀನುಗಾರಿಕಾ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿದೆ.”ಯುದ್ಧ ಮುಗಿದರೆ ಸಾಕು, ಮರಳಿ ಜೀವನ ಮೊದಲಿನಂತಾಗಲಿ” ಎಂದು ಮೀನುಗಾರ ಮಹಿಳೆಯರು ಪ್ರಾರ್ಥಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sat, 21 March 26

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್