AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳಿಂದ ಮತ ಹಾಕಿದ ನಮಗಾಗಿ ನೀವು ಮಾಡಿದ್ದೇನು? ಶೋಭಾ ಕರಂದ್ಲಾಜೆಗೆ ಮೀನುಗಾರರು ಕ್ಲಾಸ್

ಮೀನುಗಾರರ ಒಕ್ಕೂಟದ ಮುಖಂಡರು ಸಚಿವ ಶೋಭಾ ಕರಂದ್ಲಾಜೆಗೆ ಕ್ಲಾಸ್ ತೆಗೆದುಕೊಂಡಿದ್ದು, ‘ನಮಗಾಗಿ ನೀವು ಏನು ಮಾಡಿದ್ದೀರಿ?’ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

10 ವರ್ಷಗಳಿಂದ ಮತ ಹಾಕಿದ ನಮಗಾಗಿ ನೀವು ಮಾಡಿದ್ದೇನು? ಶೋಭಾ ಕರಂದ್ಲಾಜೆಗೆ ಮೀನುಗಾರರು ಕ್ಲಾಸ್
TV9 Web
| Edited By: |

Updated on: Feb 17, 2024 | 8:58 PM

Share

ಉಡುಪಿ, (ಫೆಬ್ರವರಿ 17): ಮಲ್ಪೆಯಿಂದ ಉಡುಪಿವರೆಗಿನ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (shobha karandlaje ) ಅವರನ್ನು ಮೀನುಗಾರರು ತರಾಟೆಗೆ ತೆದುಕೊಂಡಿದ್ದಾರೆ. ಉಡುಪಿಯ (Udupi) ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಮೀನುಗಾರರ ಸಂಘದ ಮುಖಂಡ ಕಿಶೋರ್ ಸುವರ್ಣ ಅವರು ಶೋಭಾ ಕರಂದ್ಲಾಜೆ ಬಿಮುಂದೆ ವಿಷಯ ಪ್ರಸ್ತಾಪಿಸಿದ್ದು, ಮೂರೂವರೆ ಕಿಲೋಮೀಟರ್ ಉದ್ದದ ಹೆದ್ದಾರಿ ನಿರ್ಮಾಣ ವಿಳಂಬದ ಬಗ್ಗೆ ಸಂಘದ ಸದಸ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ.

ಕೋಟ್ಯಂತರ ರೂಪಾಯಿ ಆದಾಯ ಬರುವ ಮಲ್ಪೆ ಬಂದರಿನ ಬಗ್ಗೆ ನಿಮಗೆ ನಿರ್ಲಕ್ಷ್ಯ ಏಕೆ? ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿಲ್ಲ. ರಸ್ತೆಯ ಸರ್ವೆ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ. ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕವಾಗಿ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಂತರ ಆದಾಯ ಇರುವ ಈ ರಸ್ತೆ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಏಕೆ? ಎಂದು ಪ್ರಶ್ನಿಸಿದ್ದಾರೆ.

ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ?. ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನೀವು ಜನರನ್ನು ಯಾಕೆ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಶೋಭಾ ಕರಂದ್ಲಾಜೆ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?