AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ವೀಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್: ಉಡುಪಿಯ ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು

ಊರಿಗೆ ಉಪಕಾರಿ ಮನೆಗೆ ಮಾರಿ ಎನ್ನುವಂತೆ ಆಪತ್ಭಾಂದವ ಎಂದು ಖ್ಯಾತಿ ಪಡೆದುಕೊಂಡಿರುವ ಮೊಹಮ್ಮದ್ ಆಸೀಫ್​ನ ನೀಚ ಕೃತ್ಯ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಸಮಾಜ ಸೇವಕ ಆಸೀಫ್​, ತನ್ನ ಸ್ವಂತ ಮಗಳ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್​ ಮಾಡಿದ್ದಾನೆ. ಅಲ್ಲದೇ ಪತ್ನಿ ಹಾಗೂ ಪುತ್ರಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದೀಗ ಆಸೀಫ್​​ನ ಮೃಗೀಯ ವರ್ತನೆ ವಿಡಿಯೋ ವೈರಲ್ ಆಗಿದೆ.

ಮಗಳ ವೀಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್: ಉಡುಪಿಯ ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು
ಮೊಹಮ್ಮದ್ ಆಸಿಫ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 14, 2024 | 12:38 PM

Share

ಉಡುಪಿ, (ಜುಲೈ 14):  ಉಡುಪಿ, (ಜುಲೈ 14): ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತಿ ಪಡೆದುಕೊಂಡಿರುವ ಆಸೀಫ್​ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಹೌದು.. ಪಡುಬಿದ್ರಿಯಲ್ಲಿ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್​ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸೀಫ್​ನ ಪುತ್ರಿ ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಈ ಕೋಪದಿಂದ ಪುತ್ರಿಯ ಫೋಟೋ, ವಿಡಿಯೋಗಳನ್ನು ಸಂಬಂಧಿ ಹುಡುಗನ ಜೊತೆಗಿನ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಅಲ್ಲದೇ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್​ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್​ಗೆ ವರ್ಗಾಯಿಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್​ಗಳಿಗೆ ಕಳುಹಿಸಿದ್ದಾನೆ ಎಂದು ಅರೋಪಿಸಲಾಗಿದೆ.

ಇದನ್ನೂ ಓದಿ: ಹಾವೇರಿ: ನಾಯಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಯುವಕರು

ಪುತ್ರಿ-ಪತ್ನಿ ಮೇಲೆ ಹಲ್ಲೆ

ಉಡುಪಿ ಮೂಲದ ಸಮಾಜ ಸೇವಕನೊಬ್ಬ ಮಗಳ ಪ್ರೀತಿ ವಿಚಾರ ತಿಳಿದು ಪತ್ನಿ ಮತ್ತು ಪುತ್ರಿಯನ್ನು ಯದ್ವತದ್ವ ತಳಿಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗಳ ಪ್ರೀತಿಯ ವಿಚಾರ ಗೊತ್ತಾಗಿ ಆಸೀಫ್‌ಗೆ  ಕೆಂಡಾಮಂಡಲನಾಗಿದ್ದು, ಇದೇ ಸಿಟ್ಟಿನಲ್ಲಿ ಅಮಾನುಷವಾಗಿ ಮಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ನಡುವೆ ಬಂದ ಪತ್ನಿಯನ್ನೂ ಸಹ  ಕಾಲಿನಲ್ಲಿ ತುಳಿದು ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದು ವೈರಲ್ ಆಗಿದೆ.

ಮುಲ್ಖಿಯಲ್ಲಿ ಆಪತ್ಭಾಂದವ ಸೈಕೋ ರಿಹ್ಯಾಬಿಟೇಷನ್ ಸೆಂಟರ್ ಪ್ರಾರಂಭಿಸಿ ಮಾಧಕ ವ್ಯಸನಿಗಳು ಮತ್ತು ಮಾನಸಿಕ ಅಸ್ವಸ್ತರಿಗೆ ಪುರ್ನವಸತಿ ಕಲ್ಪಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಆಪತ್ಭಾಂಧವ ಎಂದೇ ಆಸೀಫ್ ಹೆಸರಾಗಿದ್ದ. ಇದೀಗ ಊರಿಗೆ ಉಪಕಾರಿ ಮನೆಗೆ ಮಾರಿ ಎನ್ನುವಂತೆ ಆಸೀಫ್​ನ ಅಸಲಿ ಮುಖವನ್ನು ಪತ್ನೀ ಬಿಚ್ಚಿಟ್ಟಿದ್ದಾರೆ.

ಅಲ್ಲದೇ ತನ್ನ ಪತಿ ಡ್ರಗ್ ವ್ಯಸನಿಯಾಗಿದ್ದು, ಬ್ರೌನ್ ಶುಗರ್ ತೆಗೆದುಕೊಂಡು ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಆಶ್ರಮದಲ್ಲಿಯೂ ಅಕ್ರಮಗಳನ್ನು ನಡೆಸಿರುವುದಾಗಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.  ಪೋಲೀಸರೊಂದಿಗೆ ಆಸಿಫ್‌ಗೆ ಉತ್ತಮ ಸಂಬಂಧ ಇರುವ ಕಾರಣ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಮೀನಾಮೇಷ ಎಂದು ಶಬನಮ್ ಆರೋಪಿಸಿದ್ದಾರೆ. ಬಳಿಕ  ಪಡಿಬಿದ್ರೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ, ಆಸೀಫ್​ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ