ಮಗಳ ವೀಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್: ಉಡುಪಿಯ ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು

ಊರಿಗೆ ಉಪಕಾರಿ ಮನೆಗೆ ಮಾರಿ ಎನ್ನುವಂತೆ ಆಪತ್ಭಾಂದವ ಎಂದು ಖ್ಯಾತಿ ಪಡೆದುಕೊಂಡಿರುವ ಮೊಹಮ್ಮದ್ ಆಸೀಫ್​ನ ನೀಚ ಕೃತ್ಯ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಸಮಾಜ ಸೇವಕ ಆಸೀಫ್​, ತನ್ನ ಸ್ವಂತ ಮಗಳ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್​ ಮಾಡಿದ್ದಾನೆ. ಅಲ್ಲದೇ ಪತ್ನಿ ಹಾಗೂ ಪುತ್ರಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದೀಗ ಆಸೀಫ್​​ನ ಮೃಗೀಯ ವರ್ತನೆ ವಿಡಿಯೋ ವೈರಲ್ ಆಗಿದೆ.

ಮಗಳ ವೀಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್: ಉಡುಪಿಯ ಆಪತ್ಭಾಂದವ ಆಸೀಫನ ಅಸಲಿ ಮುಖ ಬಯಲು
ಮೊಹಮ್ಮದ್ ಆಸಿಫ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 14, 2024 | 12:38 PM

ಉಡುಪಿ, (ಜುಲೈ 14):  ಉಡುಪಿ, (ಜುಲೈ 14): ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತಿ ಪಡೆದುಕೊಂಡಿರುವ ಆಸೀಫ್​ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಹೌದು.. ಪಡುಬಿದ್ರಿಯಲ್ಲಿ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್​ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸೀಫ್​ನ ಪುತ್ರಿ ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಈ ಕೋಪದಿಂದ ಪುತ್ರಿಯ ಫೋಟೋ, ವಿಡಿಯೋಗಳನ್ನು ಸಂಬಂಧಿ ಹುಡುಗನ ಜೊತೆಗಿನ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಅಲ್ಲದೇ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್​ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್​ಗೆ ವರ್ಗಾಯಿಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್​ಗಳಿಗೆ ಕಳುಹಿಸಿದ್ದಾನೆ ಎಂದು ಅರೋಪಿಸಲಾಗಿದೆ.

ಇದನ್ನೂ ಓದಿ: ಹಾವೇರಿ: ನಾಯಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಯುವಕರು

ಪುತ್ರಿ-ಪತ್ನಿ ಮೇಲೆ ಹಲ್ಲೆ

ಉಡುಪಿ ಮೂಲದ ಸಮಾಜ ಸೇವಕನೊಬ್ಬ ಮಗಳ ಪ್ರೀತಿ ವಿಚಾರ ತಿಳಿದು ಪತ್ನಿ ಮತ್ತು ಪುತ್ರಿಯನ್ನು ಯದ್ವತದ್ವ ತಳಿಸಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗಳ ಪ್ರೀತಿಯ ವಿಚಾರ ಗೊತ್ತಾಗಿ ಆಸೀಫ್‌ಗೆ  ಕೆಂಡಾಮಂಡಲನಾಗಿದ್ದು, ಇದೇ ಸಿಟ್ಟಿನಲ್ಲಿ ಅಮಾನುಷವಾಗಿ ಮಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಈ ನಡುವೆ ಬಂದ ಪತ್ನಿಯನ್ನೂ ಸಹ  ಕಾಲಿನಲ್ಲಿ ತುಳಿದು ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದು ವೈರಲ್ ಆಗಿದೆ.

ಮುಲ್ಖಿಯಲ್ಲಿ ಆಪತ್ಭಾಂದವ ಸೈಕೋ ರಿಹ್ಯಾಬಿಟೇಷನ್ ಸೆಂಟರ್ ಪ್ರಾರಂಭಿಸಿ ಮಾಧಕ ವ್ಯಸನಿಗಳು ಮತ್ತು ಮಾನಸಿಕ ಅಸ್ವಸ್ತರಿಗೆ ಪುರ್ನವಸತಿ ಕಲ್ಪಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಆಪತ್ಭಾಂಧವ ಎಂದೇ ಆಸೀಫ್ ಹೆಸರಾಗಿದ್ದ. ಇದೀಗ ಊರಿಗೆ ಉಪಕಾರಿ ಮನೆಗೆ ಮಾರಿ ಎನ್ನುವಂತೆ ಆಸೀಫ್​ನ ಅಸಲಿ ಮುಖವನ್ನು ಪತ್ನೀ ಬಿಚ್ಚಿಟ್ಟಿದ್ದಾರೆ.

ಅಲ್ಲದೇ ತನ್ನ ಪತಿ ಡ್ರಗ್ ವ್ಯಸನಿಯಾಗಿದ್ದು, ಬ್ರೌನ್ ಶುಗರ್ ತೆಗೆದುಕೊಂಡು ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಆಶ್ರಮದಲ್ಲಿಯೂ ಅಕ್ರಮಗಳನ್ನು ನಡೆಸಿರುವುದಾಗಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ.  ಪೋಲೀಸರೊಂದಿಗೆ ಆಸಿಫ್‌ಗೆ ಉತ್ತಮ ಸಂಬಂಧ ಇರುವ ಕಾರಣ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಮೀನಾಮೇಷ ಎಂದು ಶಬನಮ್ ಆರೋಪಿಸಿದ್ದಾರೆ. ಬಳಿಕ  ಪಡಿಬಿದ್ರೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ, ಆಸೀಫ್​ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ