AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಪೊಲೀಸರ ಮೇಲೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಮಹಿಳೆ

ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಅಂಗಡಿ ತೆರೆದ ಮಹಿಳೆ ವಿರುದ್ಧ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಶ್ನಿಸಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಅಂಗಡಿ ಮಾಲಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಉಡುಪಿ: ಪೊಲೀಸರ ಮೇಲೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on:Aug 21, 2023 | 8:58 PM

Share

ಕುಂದಾಪುರ, ಆಗಸ್ಟ್ 21: ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಅಂಗಡಿ ವಸ್ತುಗಳನ್ನು ಇಟ್ಟುಕೊಂಡು ಜನರ ಓಡಾಟಕ್ಕೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರಿನ ಅನ್ವಯ ಪ್ರಶ್ನಿಸಲು ಬಂದ ಪೊಲೀಸರ ಮೇಲೆ ಅಂಗಡಿ ಮಾಲಕಿ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಉಡುಪಿ (Udupi) ಜಿಲ್ಲೆಯ ಕುಂದಾಪುರದ ಬೈಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಕೋಟೇಶ್ವರ ಮುಖ್ಯರಸ್ತೆಯಲ್ಲಿ ಸರೋಜಾ ದಾಸ್ ಎಂಬ ಮಹಿಳೆ ಟೈಲರ್ ಮತ್ತು ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದರು. ಆದರೆ ಅಂಗಡಿಯ ಸಾಮಾನುಗಳನ್ನು ರಸ್ತೆಗೆ ಹರಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯರು ಆಕೆಯ ವಿರುದ್ಧ ದೂರಿದ್ದಾರೆ.

ಇದನ್ನೂ ಓದಿ: ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ತನಿಖೆಗೆ ಆಗಮಿಸಿದ ಪೊಲೀಸರನ್ನು ಮಹಿಳೆ ನಿಂದಿಸಿ ಬಾಟಲಿಯಲ್ಲಿದ್ದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾಳೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ವಿರುದ್ಧ ಅಮಾಸೆಬೈಲು ಹಾಗೂ ಶಂಕರನಾರಾಯಣ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿ ಮಾಡಲಾಗಿದೆ.

ಇತ್ತೀಚೆಗೆ, ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನನ್ನು ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಆಟೋ ಹತ್ತಿಸಲು ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಆಟೋವನ್ನು ಚಾಲಕ ಐ.ಕೆ.ರಸ್ತೆ ಕಡೆಯಿಂದ ವ್ಹೀಲಿಂಗ್ ಮಾಡಿಕೊಂಡು ಬರುತ್ತಿದ್ದನು. ಇದನ್ನು ನೋಡಿದ ಗಸ್ತು ತಿರುಗುತ್ತಿದ್ದ ಪೊಲೀಸರು, ಆಟೋವನ್ನು ತಡೆಯಲು ಮುಂದಾಗಿದ್ದರು. ಈ ವೇಳೆ ಇನ್​​ಸ್ಪೆಕ್ಟರ್ ಮೇಲೆಯೇ ಆಟೋ ಹತ್ತಿಸಲು ಚಾಲಕ ಯತ್ನಿಸಿದ್ದನು. ಕೂಡಲೇ ಇನ್​​ಸ್ಪೆಕ್ಟರ್ ಪಕ್ಕಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಾಲಕ ಆಟೋವನ್ನು ಪೊಲೀಸ್ ಜೀಪಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಪ್ರಯತ್ನಿಸಿದ್ದನು. ಸುಮಾರು 2 ಕಿ.ಮೀ. ದೂರದವರೆಗೆ ಚೇಸ್ ಮಾಡಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಆರೋಪಿ ರೋಷನ್​​ನನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Mon, 21 August 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು