AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಚಿಂತಕ, ಸಾಹಿತಿ ಜಿ. ರಾಜಶೇಖರ್ ನಿಧನ

ಹಿರಿಯ ಚಿಂತಕ, ಸಾಹಿತಿ, ಸಾಹಿತ್ಯಲೋಕದ ಪ್ರಖ್ಯಾತ ವಿಮರ್ಶಕರಾಗಿದ್ದ ಜಿ. ರಾಜಶೇಖರ್ (75) ಅನಾರೋಗ್ಯದಿಂದ ಬುಧವಾರ (ಜುಲೈ 20) ರಾತ್ರಿ 11:15 ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹಿರಿಯ ಚಿಂತಕ, ಸಾಹಿತಿ ಜಿ. ರಾಜಶೇಖರ್ ನಿಧನ
ಜಿ. ರಾಜಶೇಖರ್
TV9 Web
| Edited By: |

Updated on:Jul 21, 2022 | 12:32 AM

Share

ಉಡುಪಿ: ಹಿರಿಯ ಚಿಂತಕ, ಸಾಹಿತಿ, ಸಾಹಿತ್ಯಲೋಕದ ಪ್ರಖ್ಯಾತ ವಿಮರ್ಶಕರಾಗಿದ್ದ ಜಿ. ರಾಜಶೇಖರ್ (75) ಅನಾರೋಗ್ಯದಿಂದ ಬುಧವಾರ (ಜುಲೈ 20) ರಾತ್ರಿ 11:15 ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಶೇಖರ್‌  ಅವರು ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಜಿ. ರಾಜಶೇಖರ ಅವರು 1946ರಲ್ಲಿ ಜನಿಸಿದರು. ಉಡುಪಿಯಲ್ಲಿ ಪದವಿವರೆಗಿನ ವಿದ್ಯಾಭ್ಯಾಸ ನಡೆಸಿ ಕೆಲಕಾಲ ಶಿಕ್ಷಕರಾಗಿ ಕೆಲಸಮಾಡಿ ಎಲ್ಐಸಿಯಲ್ಲಿ ಉದ್ಯೋಗಸ್ಥರಾದರು. ಜಿ. ರಾಜಶೇಖರ ಅವರು ಸಾಹಿತ್ಯ-ಸಮಾಜ-ರಾಜಕಾರಣ ಕುರಿತಂತೆ ಹಾಗೂ ಕೋಮುವಾದವೂ ಸೇರಿದಂತೆ ಸಮಕಾಲೀನ ತುರ್ತಿನ ವಿದ್ಯಮಾನಗಳ ಬಗ್ಗೆ ನಿರಂತರವಾಗಿ ಬರೆಯತ್ತ ಬಂದಿದ್ದಾರೆ.

ಕಾಗೋಡು ಸತ್ಯಾಗ್ರಹ, ಪರಿಸರ ಮತ್ತು ಸಮಾಜವಾದ, ಬರ್ಟೊಲ್ಟ್ ಬ್ರೆಕ್ಟ್ ಪರಿಚಯ, ದಾರು ಪ್ರತಿಮ ನ ಪೂಜಿವೇ (ಅನುವಾದ), ಕೋಮುವಾದದ ಕರಾಳ ಮುಖಗಳು, ಹರ್ಷಮಂದರ್ ಬರಹಗಳು (ಸಹಲೇಖಕ: ಕೆ. ಫಣಿರಾಜ್), ಬಹುವಚನ ಭಾರತ ಮಂತಾದವು ಅವರ ಪ್ರಕಟಿತ ಕೃತಿಗಳಲ್ಲಿ ಸೇರಿವೆ.

ರಾಜಶೇಖರ ಅವರು ತಮ್ಮ ‘ಬಹುವಚನ ಭಾರತ’ ಕೃತಿಗೆ “ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ 2015ರ ಸಾಲಿನಲ್ಲಿ ಪ್ರಕಟಿಸಿದ್ದ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದರು.

Published On - 12:28 am, Thu, 21 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು