AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್

ಯುಗಾದಿ, ರಂಜಾನ್​, ಬೇಸಿಗೆ ರಜೆ ಕಾರಣ ಮಕ್ಕಳ ಜೊತೆ ಪ್ರವಾಸ ಅಥವಾ ತಮ್ಮ ತಮ್ಮ ಊರಿಗೆ ತೆರಳಲು ಪೋಷಕರು ಯೋಚಿಸಿದ್ದಾರೆ. ಬಸ್ ಟಿಕೆಟ್ ಬುಕ್ ಮಾಡಲು ಮುಂದಾದರೆ ದರ ಏರಿಕೆಯ ಶಾಕ್ ಎದುರಾಗಿದೆ. ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಏರಿಕೆ ಮಾಡಿದ್ದಾರೆ.

ಯುಗಾದಿ ಹಬ್ಬಕ್ಕೆ ಊರಿಗೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Apr 06, 2024 | 9:36 AM

Share

ಬೆಂಗಳೂರು, ಏಪ್ರಿಲ್​ 06: ಯುಗಾದಿ (Ugadi) ಹಬ್ಬಕ್ಕೆ ಸಾಲು ಸಾಲು ರಜೆಯಿದೆ ಅಂತ ಮನೆ ಕಡೆ ಹೊಗಲು ಸಜ್ಜಾದವರಿಗೆ ಖಾಸಗಿ ಬಸ್ ದರ (Private Bus Price) ಏರಿಕೆ ಶಾಕ್ ಎದುರಾಗಿದೆ. ಯುಗಾದಿ ರಜೆ ಬೆಲ್ಲವಾದರೆ ಖಾಸಗಿ ಬಸ್​ಗಳ ಪ್ರಯಾಣದ ದರ ಏರಿಕೆ ಪ್ರಯಾಣಿಕರಿಗೆ ಬೇವು ಆಗಿದೆ.

ಏಪ್ರಿಲ್ 7 ರಂದು ಭಾನುವಾರ, 9 ರಂದು ಮಂಗಳವಾರ ಯುಗಾದಿ ಬರುತ್ತೆ. ಹೀಗಾಗಿ ಸೋಮವಾರ ರಜೆ ಹಾಕಿ ನಾಳೆಯೇ ಊರಿಗೆ ತೆರಳಲು ಜನರ ಪ್ಲಾನ್ ಮಾಡಿದ್ದಾರೆ. ಇನ್ನೂ ಕೆಲವರು ಇಂದು (ಏ.06) ಆಫೀಸ್​ಗೆ ರಜೆ ಹಾಕಿ ಬೆಂಗಳೂರಿನಿಂದ ಹೊರಟಿದ್ದಾರೆ. ಅಲ್ಲದೆ ಯುಗಾದಿ ರಜೆ ಒಂದು ದಿನ‌ ಬಿಟ್ಟು ಗುರುವಾರ ರಂಜಾನ್ ರಜೆ ಬರುತ್ತೆ. ಅಲ್ಲದೆ 13 ರಂದು ಎರಡನೇ ಶನಿವಾರ ರಜೆ ಹಾಗೂ 14 ರಂದು ಭಾನುವಾರ ರಜೆ‌ ಇದೆ.‌ ಏಪ್ರಿಲ್ 7 ರಿಂದ ಏಫ್ರಿಲ್ 14ರ ವರೆಗೆ ಬರೊಬ್ಬರಿ 5 ರಜೆಗಳು ಇವೆ. ಹೀಗಾಗಿ ಕೆಲವರು ನಾಳೆಯಿಂದ ವಾರಪೂರ್ತಿ ಆಫೀಸ್​ಗೆ ರಜೆ ಹಾಕಲು ಪ್ಲಾನ್‌ ಮಾಡಿಕೊಂಡು ಬೆಂಗಳೂರು ಬಿಟ್ಟು ಊರಿಗೆ ಹೊರಡುತ್ತಿದ್ದಾರೆ.

ಅಲ್ಲದೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ಅಥವಾ ತಮ್ಮ ತಮ್ಮ ಊರಿಗೆ ತೆರಳಲು ಪೋಷಕರು ಯೋಚಿಸಿ, ಬಸ್ ಟಿಕೆಟ್ ಬುಕ್ ಮಾಡಲು ಮುಂದಾದರೆ ದರ ಏರಿಕೆಯ ಶಾಕ್ ನೀಡಿದೆ. ಖಾಸಗಿ ಬಸ್ ಮಾಲೀಕರು 2-3 ಪಟ್ಟು ದರ ಏರಿಕೆ ಮಾಡಿದ್ದಾರೆ.

ದರ ವಿವರ

ಬೆಂಗಳೂರು-ಶಿವಮೊಗ್ಗ

ಸಾಮಾನ್ಯ ದಿನದ ದರ: 450 – 600 ರೂ.

ಇವತ್ತಿನ ಟಿಕೆಟ್ ದರ: 950 – 1250 ರೂ.

ಬೆಂಗಳೂರು- ಹುಬ್ಬಳ್ಳಿ

ಸಾಮಾನ್ಯ ದಿನದ ದರ: 600 – 1000 ರೂ.

ಇಂದಿನ ಟಿಕೆಟ್: 1200 – 1600 ರೂ.

ಬೆಂಗಳೂರು-ಮಂಗಳೂರು

ಸಾಮಾನ್ಯ ದಿನದ ದರ:  500 – 1000 ರೂ.

ಇಂದಿನ ದರ:  1000 – 1400 ರೂ.

ಬೆಂಗಳೂರು-ಕಲಬುರುಗಿ

ಸಾಮಾನ್ಯ ದಿನದ ದರ:  900 – 1300 ರೂ.

ಇಂದಿನ ದರ:  1400 – 1900 ರೂ.

ಬೆಂಗಳೂರು-ಮಡಿಕೇರಿ

ಸಾಮಾನ್ಯ ದಿನದ ದರ: 500 – 600 ರೂ.

ಇಂದಿನ ದರ:  950 – 1200 ರೂ.

ಬೆಂಗಳೂರು – ಉಡುಪಿ

ಸಾಮಾನ್ಯ ದಿನದ ದರ: 600 –  950 ರೂ.

ಇಂದಿನ ದರ: 1700 – 2200 ರೂ.

ಬೆಂಗಳೂರು-ಧಾರವಾಡ

ಸಾಮಾನ್ಯ ದಿನದ ದರ:  650 – 800 ರೂ.

ಇಂದಿನ ದರ: 1350 – 1750 ರೂ.

ಬೆಂಗಳೂರು-ಬೆಳಗಾವಿ

ಸಾಮಾನ್ಯ ದಿನದ ದರ: 500-800 ರೂ.

ಇಂದಿನ ದರ: 1300 – 1800 ರೂ.

ಬೆಂಗಳೂರು – ದಾವಣಗೆರೆ

ಸಾಮಾನ್ಯ ದಿನದ ದರ: 450-600 ರೂ.

ಇಂದಿನ ದರ: 900 – 1300 ರೂ.

ಬೆಂಗಳೂರು – ಚಿಕ್ಕಮಗಳೂರು

ಸಾಮಾನ್ಯ ದಿನದ ದರ:  550-600 ರೂ.

ಇಂದಿನ ದರ: 1100 – 1300 ರೂ.

ಬೆಂಗಳೂರು – ಬೀದರ್

ಸಾಮಾನ್ಯ ದಿನದ ದರ:  850 – 1200 ರೂ.

ಇಂದಿನ ದರ: 1600 – 1800 ರೂ.

ಬೆಂಗಳೂರು – ರಾಯಚೂರು

ಸಾಮಾನ್ಯ ದಿನದ ದರ:  600-900 ರೂ.

ಇಂದಿನ ದರ: 1250 – 1600 ರೂ.

ಮನಸಿಗೆ ಬಂದಂತೆ ದರ ಏರಿಕೆ‌ ಮಾಡಿದ್ರು ಸಾರಿಗೆ ಇಲಾಖೆಯಿಂದ ಪದೇ ಪದೇ ನಿರ್ಲಕ್ಷ ಮಾಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ‌ ಟಿಕೆಟ್ ದರ ದುಪ್ಪಟ್ಟಾದರೂ ಖಾಸಗಿ ಬಸ್​ಗಳು ಮಾತ್ರ ಬಹುತೇಕ ಭರ್ತಿಯಾಗಿವೆ.

ಇದನ್ನೂ ಓದಿ: Ugadi in 2024: ಯುಗಾದಿ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್, ಪ್ರಯಾಣಿಕರಿಗೆ ಗುಡ್ ನ್ಯೂಸ್

ಇನ್ನು ಈ ದರ ಏರಿಕೆಯ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಮಾತನಾಡಿ, ಕೆಎಸ್ಆರ್​​ಟಿಸಿ ಬಸ್​ಗಳಲ್ಲಿ ಪ್ರತಿ ಶನಿವಾರ ಭಾನುವಾರ ಸೇರಿದಂತೆ ಎಲ್ಲ ಹಬ್ಬಗಳಲ್ಲೂ ದರ ಏರಿಕೆ ಮಾಡುತ್ತಾರೆ. ಸರ್ಕಾರಿ ಬಸ್​ಗಳಿಗೆ ಟ್ಯಾಕ್ಸ್ ಇಲ್ಲ, ಜಿಎಸ್​ಟಿ ಇಲ್ಲ, ಟಯರ್ ಕಡಿಮೆ ಬೆಲೆಗೆ ಸಿಗುತ್ತದೆ. ಇದು ಪ್ರಯಾಣಿಕರಿಗೆ ಗೊತ್ತಾಗುವುದಿಲ್ಲ. ಖಾಸಗಿ ಬಸ್​ಗಳಲ್ಲಿ 100-200 ದರ ಏರಿಕೆ ಮಾಡಿದರೆ ನಮ್ಮನ್ನು ಪ್ರಶ್ನೆ ಮಾಡುತ್ತಾರೆ. ಖಾಸಗಿ ಬಸ್​ಗಳು ನಿಮ್ಮ ಏರಿಯಾಗಳಿಂದ ಪಿಕ್ ಮಾಡುತ್ತವೆ. ಪ್ರತಿದಿನ ಖಾಲಿಯಾಗಿ ಸಂಚಾರ ಮಾಡುತ್ತವೆ ಇದರ ಬಗ್ಗೆ ಪ್ರಯಾಣಿಕರು ಮಾತಾಡುವುದಿಲ್ಲ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹೇಳಿದರು.

ಇನ್ನು ಕೆಎಸ್ಆರ್​ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.‌ ನಾಲ್ಕು ನಿಗಮದಿಂದ ಬರೊಬ್ಬರಿ 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು‌ ಮುಂದಾಗಿದೆ. ಕೆಎಸ್‌ಆರ್‌ಟಿಸಿಯಿಂದ 1,750 ಬಸ್, ಎನ್​ಡಬ್ಲೂಕೆಎಸ್​ಆರ್​ಟಿಸಿಯಿಂದ 145 ಬಸ್ ಮತ್ತು ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ಸೇರಿ 2275 ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ.

ಖಾಸಗಿ ಬಸ್​ಗಳಲ್ಲಿ ದರ ಏರಿಕೆ ಮಾಡುತ್ತಾರೆ. ಕೆಎಸ್ಆರ್​ಟಿಸಿಯ ಸಾಮಾನ್ಯ ಬಸ್​ಗಳಲ್ಲಿ ದರ ಕಡಿಮೆ ಇದೆ. ಎಸಿ ಬಸ್​ಗಳ ದರ ಹೆಚ್ಚಾಗಿದೆ ಎಂದು ಪ್ರಯಾಣಿಕ ಪೃಥ್ವಿ ಪ್ರಕಾಶ್ ಹೇಳಿದರು.

ಒಟ್ಟಾರೆ ಬ್ಯಾಕ್ ಟು ಬ್ಯಾಕ್ ರಜೆ‌ ಬಂದಾಗ ಪದೇ ಪದೇ ದರ ಏರಿಕೆಯಾದರೂ ಸಾರಿಗೆ ಇಲಾಖೆ ಮೌನಾವಾಗಿದೆ ಯಾಕೆ ಎಂಬ ಪ್ರಶ್ನೆ ಮೂಡಿದೆ. ಸಾರಿಗೆ ಇಲಾಖೆ ಇನ್ನೂ ಕೂಡ‌ ಈ ಹಗಲು ದರೋಡೆಗೆ ಬ್ರೇಕ್ ಹಾಕದೆ ಇರುವುದು ಜನರ ಕಂಗೆಣ್ಣಿಗೆ ಗುರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ