AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್ ಅರೆಸ್ಟ್: ಇವನ ಹಿಸ್ಟರಿ ಭಯಾನಕ

ಪೆರೋಲ್​ ಮೇಲೆ ಹೊರ ಬಂದಿದ್ದ ನಟೋರಿಯಸ್​​ ಬಚ್ಚಾಖಾನ್​ನನ್ನ ಹುಬ್ಬಳ್ಳಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಬಚ್ಚಾಖಾನ್ ಬಂಧಿಸಿ ನಿನ್ನೆ ಹುಬ್ಬಳ್ಳಿಗೆ ಕರೆತಂದು ವಿಚಾರಣೆ ಮಾಡಲಾಗುತ್ತಿದೆ. ವ್ಯಕ್ತಿಯೋರ್ವನಿಗೆ ಜೀವ ಬೆದರಿಕೆಹಾಕಿ ಹಣ ವಸೂಲಿ ಮಾಡಿದ್ದ. ಬಳಿಕ ಪೆರೋಲ್​ ಮೇಲೆ ಬಚ್ಚಾಖಾನ್ ಹೊರ ಬಂದಿದ್ದ.

ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್ ಅರೆಸ್ಟ್: ಇವನ ಹಿಸ್ಟರಿ ಭಯಾನಕ
ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್ ಅರೆಸ್ಟ್: ಇವನ ಹಿಸ್ಟರಿ ಭಯಾನಕ
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 04, 2024 | 3:43 PM

Share

ಹುಬ್ಬಳ್ಳಿ, ಸೆಪ್ಟೆಂಬರ್​ 04: ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್​ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ (arrested). ಬೆಂಗಳೂರಿನ ಉದ್ಯಮಿ ಕೊಲೆ ಸೇರಿ 3 ಪ್ರಕರಣಗಳ ಆರೋಪಿ ಆಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸುಬ್ಬಾರಾವ್ ಕೊಲೆ ಬಚ್ಚಾಖಾನ್​ಗೆ ಜೀವಾವಧಿ ಶಿಕ್ಷೆಯಾಗಿತ್ತು. ವ್ಯಕ್ತಿಯೋರ್ವನಿಗೆ ಜೀವ ಬೆದರಿಕೆಹಾಕಿ ಹಣ ವಸೂಲಿ ಮಾಡಿದ್ದ. ಬಳಿಕ ಪೆರೋಲ್​ ಮೇಲೆ ಹೊರ ಬಂದಿದ್ದ ಬಚ್ಚಾಖಾನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇಡಲಾಗಿತ್ತು. ಹಿಂಡಲಗಾ ಜೈಲಿನಲ್ಲಿ ಬೇರೆ ಬೇರೆ ಪ್ರಕರಣದ ಕುಖ್ಯಾತ ರೌಡಿಗಳು, ಭೂಗತ ಪಾತಕಿಗಳು ಇರುವ ಹಿನ್ನೆಲೆಯಲ್ಲಿ 2013ರಲ್ಲಿ ಮೈಸೂರು ಜೈಲಿಗೆ ಬಚ್ಚಾಖಾನ್ ಸ್ಥಳಾಂತರಿಸಲಾಗಿತ್ತು. ನಂತರ ಆತ​ನನ್ನು 2017ರಲ್ಲಿ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು.

ಇದನ್ನೂ ಓದಿ: ವೃತ್ತಿ ಜೀವನದ ಕೊನೆಯಲ್ಲಿ ಕ್ಯಾನ್ಸರ್ ಮಹಾಮಾರಿಯಿಂದ ಬಳಲುತ್ತಿದ್ದ ಮಹಿಳಾ ಪಿಎಸ್​​ಐ ಇನ್ನಿಲ್ಲ

ಧಾರವಾಡ ಜೈಲಿನಿಂದಲೇ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿದ್ದ. 2021ರಲ್ಲಿ ಧಾರವಾಡದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಬಚ್ಚಾಖಾನ್ 3 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದರು. ಪೆರೋಲ್ ಮೇಲೆ ಹೊರಗಿದ್ದ ಆತನನ್ನು ಬೆಂಗಳೂರಿನಲ್ಲಿ ಬಂಧಿಸಿ ನಿನ್ನೆ ಹುಬ್ಬಳ್ಳಿಗೆ ಕರೆತರಲಾಗಿದೆ. ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳಿಂದ ನಟೋರಿಯಸ್ ಬಚ್ಚಾಖಾನ್ ವಿಚಾರಣೆ ಮಾಡಲಾಗುತ್ತಿದೆ.

ನನ್ನ ವಿರುದ್ಧ ಸುಳ್ಳು ಮೊಕದ್ದಮೆ ಎಂದ ಬಚ್ಚಾಖಾನ್ 

ಪೊಲೀಸರು ಬಂಧಿಸುತ್ತಿದ್ದಂತೆ ಹುಬ್ಬಳ್ಳಿಯ ಉಪನಗರ ಠಾಣೆ ಮುಂದೆ ಬಚ್ಚಾಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖಕ್ಕೆ ಹಾಕಿದ್ದ ಮಾಸ್ಕ್ ತೆಗೆದು ಸುಳ್ಳು ಕೇಸ್ ಎಂದಿದ್ದಾರೆ. ನನ್ನ ವಿರುದ್ಧ ಸುಳ್ಳು ಮೊಕದ್ದಮೆ ಹಾಕಿದ್ದಾರೆ ಎಂದು ಕ್ಯಾಮರಾ ಕಂಡ ಕೂಡಲೇ ಮಾಸ್ಕ್ ತೆಗೆದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಿಷ್ಟು 

ಮಾಧ್ಯಮಗಳಿಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಕಳೆದ ತಿಂಗಳು 18 ರಿಂದ 20 ರಂದು ಮಂಟೂರ್ ಗ್ರಾಮದ ವ್ಯಕ್ತಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಜಮೀನು ಮಾರುವ ವಿಚಾರದಲ್ಲಿ ಆತನಿಗೆ ಗೊಂದಲ ಇರುತ್ತೆ. ಹಣಕಾಸಿನ ವಿಷಯವಾಗಿ ಕೆಲವರನ್ನ ಭೇಟಿ ಮಾಡಿರುತ್ತಾನೆ. ಎರಡು ನಂಬರ್​ಯಿಂದ ಬೇರೆ ಬೇರೆ ಸಮಯದಲ್ಲಿ ಕರೆಗಳು ಬಂದಿರುತ್ತೆ. ವ್ಯಕ್ತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ದೈನಂದಿನ ಆತನ ಚಟುವಟಿಕೆ ಬಗ್ಗೆ ಹೇಳಿ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಡಲಾಗಿರುತ್ತೆ. ಪ್ರಕರಣ ದಾಖಲಿಸಿಕೊಂಡು ಸಿಸಿಬಿಯಿಂದ ತನಿಖೆ ಆರಂಭಿಸಲಾಗಿತ್ತು. ತನಿಖೆಯಲ್ಲಿ ಸಿಕ್ಕ ಸಾಕ್ಷಿ ಪ್ರಕಾರ ಎಂಟು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಏಳು ಜನರನ್ನ ಅರೆಸ್ಟ್ ಮಾಡಿದ್ದೇವೆ. ಇನ್ನೊಬನ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

ತಾಂತ್ರಿಕ ಸಾಕ್ಷಿ ಸೇರಿ ಹಲವು ಸಾಕ್ಷಿಗಳ ಆಧಾರದ ಮೇಲೆ ತನಿಖೆ ಮಾಡಲಾಗುತ್ತಿದೆ. ದೂರು ನೀಡಿದವರು ಸುಮಾರು 70 ವರ್ಷದ ವೃದ್ಧ. ಅವರ ಕುಟುಂಬದ ಸದಸ್ಯರು ಸಹ ಬೇರೆ ಬೇರೆ ಕಡೆ ಇದ್ದಾರೆ. ಅವರ ಹಿಂದೆ ಅನುಮಾನಾಸ್ಪದವಾಗಿ ತಿರುಗುತ್ತಿದ್ದಾರೆ. ಹೀಗಾಗಿ ದೂರುದಾರರ ಹೆಸರನ್ನ ನಾವು ಬಹಿರಂಗ ಪಡಿಸಲು ಆಗುವುದಿಲ್ಲ. ಒಬ್ಬರು ಎಸಿಪಿ, ಇಬ್ಬರು ಇನ್ಸ್ಪೆಕ್ಟರ್​ರಿಂದ ತಂಡ ರಚಿಸಿ ಆರೋಪಿ ವಶಕ್ಕೆ ಪಡೆದಿದ್ದೇವೆ. ಬೆಂಗಳೂರಿನಲ್ಲಿ ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆದಿದೆ. ಆರೋಪಿ ಆಗಸ್ಟ್ 2 ರಿಂದ ಪೆರೋಲ್​ ಮೇಲೆ ಹೊರಗಡೆ ಇದ್ದರು ಅಂತ ಗೊತ್ತಾಗಿದೆ. ಹಳೇ ಹುಬ್ಬಳಿ ಪೊಲೀಸ್ ಠಾಣೆಯಲ್ಲಿ ಫ್ರೂಟ್ಸ್ ಇರ್ಫಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಈತ. ಬೆಂಗಳೂರಿನ ಒಂದು ಕೊಲೆ ಪ್ರಕರಣ ಈತನ ಮೇಲಿದೆ. ಇನ್ನು ಹಲವರಿಗೆ ಬೆದರಿಕೆ ಕರೆ ಹೋಗಿದೆ ಅನ್ನೋದು ವಿಚಾರಣೆಯಲ್ಲಿ ತಿಳಿದಿದೆ. ಇದನ್ನ ಹೊರತು ಪಡಿಸಿ ಬೆದರಿಕೆ ಕರೆ ಬಂದರೆ ನಮಗೆ ಮಾಹಿತಿ ನೀಡಬಹುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ