ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ. ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮಳೆ ಅವಾಂತರ..!! ರಸ್ತೆಲಿ ನೀರು ನಿಂತು ಟ್ರಾಫಿಕ್ […]

ರಾಜಧಾನಿಯಲ್ಲಿ ದಿಢೀರನೆ ಮಳೆ, ಗಾಳಿ: ಚಳಿ ಜೋರು
ಸಾಧು ಶ್ರೀನಾಥ್​

Updated on: Nov 20, 2019 | 7:23 PM

ಬೆಂಗಳೂರು: ರಾಜಧಾನಿಯಲ್ಲಿ ಇಂದು ದಿಢೀರನೆ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡಮುಸುಕಿದ ವಾತಾವರಣ ಇತ್ತಾದರೂ ಅದು ಮಳೆಗೆ ತಿರುಗುವ ಲಕ್ಷಣಗಳು ಇರಲಿಲ್ಲ. ಆದ್ರೆ ಮಧ್ಯಾಹ್ನದ ವೇಳೆಗೆ ನಗರದ ನಾನಾ ಭಾಗಗಳಲ್ಲಿ ಸ್ವಲ್ಪ ಕಾಲ ಮಳೆ ಬಿದ್ದಿದೆ. ಜಯನಗರ, ಶಾಂತಿನಗರ ಸೇರಿದಂತೆ ಹಲವೆಡೆ ಗಾಳಿಯಿಂದ ಕೂಡಿದ ಜೋರು ಮಳೆಯಾಗಿದೆ.

ಸಂಜೆ ವೇಳೆಗೆ ಮಳೆ ಇನ್ನೂ ಹೆಚ್ಚಾಗುವ ಸೂಚನೆಯಿದೆ. ಮಂಜು ಬೀಳುವ ಕಾಲಮಾನದಲ್ಲಿ ಮಳೆಯಾಗಿದ್ದು, ತಾಪಮಾನ ಬಹಳಷ್ಟು ಕುಸಿದಿದ್ದು, ಚಳಿ ಜಾಸ್ತಿಯಾಗುವ ಸಾಧ್ಯತೆಯಿದೆ.

ನಗರದಲ್ಲಿ ಮಳೆ ಅವಾಂತರ..!!
ರಸ್ತೆಲಿ ನೀರು ನಿಂತು ಟ್ರಾಫಿಕ್ ಜಾಮ್ ನಿಂದ ಪ್ರಯಾಣಿಕರು ಪರದಾಡತೊಡಗಿದ್ದಾರೆ. ಬಿನ್ನಿಮಿಲ್ ರಸ್ತೆಯಲ್ಲಿಲಿ ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.  ಈ ಮಧ್ಯೆ, ಚಿಕ್ಕಪೇಟೆ ಸಂಚಾರಿ ಪೊಲೀಸರು ಸುಗಮ ಸಂಚರಕ್ಕಾಗಿ ರಸ್ತೆಗಿಳಿದು ಗುಂಡಿ ಮುಚ್ಚಿ ನೀರು ತೆರವು ಗೊಳಿಸಿದರು. ಸಂಚಾರಿ ಪೊಲೀಸರ ಕೆಲಸಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಯಿತು.

Published On - 3:14 pm, Wed, 20 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us